ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

Date:

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ, ಇನ್ಸ್ಟಿಟ್ಯೂಟ್‌ನ ಪ್ರೊಫೆಸರ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ಮತ್ತು ಜಾತಿ ಕಿರುಕುಳ ಆರೋಪದಲ್ಲಿ ಮುಂಬೈನ ಪೋವೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಐಐಟಿ-ಬಾಂಬೆ ಇತಿಹಾಸದಲ್ಲೇ ಪ್ರೊಫೆಸರ್ ಒಬ್ಬರ ವಿರುದ್ಧ ಇಂತಹ ಗಂಭೀರ ಪ್ರಕರಣ ದಾಖಲಾಗಿರುವುದು ಇದೇ ಮೊದಲು ಎನ್ನಲಾಗಿದೆ.

- Advertisement -

ಇನ್ಸ್ಟಿಟ್ಯೂನ್‌ನಲ್ಲಿ ಎನರ್ಜಿ ಸೈನ್ಸ್ ವಿಭಾಗದಲ್ಲಿ 2ನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಾಕೋಡೆ (20) ಅವರು ಶುಕ್ರವಾರ ರಾತ್ರಿ ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರು ಶುಕ್ರವಾರ ಬೆಳಗ್ಗೆ ನಡೆದ ಪರೀಕ್ಷೆಯ ಸಂದರ್ಭದಲ್ಲಿ ಮೊಬೈಲ್ ಫೋನ್ ಬಳಸಿ, ಎಐ ಪ್ಲಾಟ್‌ಫಾರ್ಮ್ ಮೂಲಕ ಪ್ರಶ್ನೆಗಳಿಗೆ ಉತ್ತರ ಹುಡುಕಲು ಯತ್ನಿಸಿದ್ದರು. ಅದನ್ನು ಗಮನಿಸಿದ ಪರೀಕ್ಷಾ ಮೇಲ್ವಿಚಾರಣೆಯಲ್ಲಿದ್ದ ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ ಅವರು ಸಾಹಿಲ್‌ಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಪ್ರೊಫೆಸರ್ ದೂಲ್ಲಾ ಅವರು ಕಳೆದ ಮೂರು ತಿಂಗಳುಗಳಿಂದ ಸಾಹಿಲ್ ಅವರಿಗೆ ಜಾತಿ ಆಧಾರದ ಮೇಲೆ ನಿರಂತರ ಕಿರುಕುಳ ನೀಡುತ್ತಿದ್ದರು ಮತ್ತು ಪರೀಕ್ಷೆಯ ವೇಳೆ ಅವರನ್ನು ಹೊರಗೆ ಕರೆದೊಯ್ದು ಸಸ್ಪೆಂಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಪ್ರೊಫೆಸರ್ ನೀಡಿದ ಕಿರುಕುಳದಿಂದಲೇ ಸಾಹಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ದೂರಿದ್ದಾರೆ.

ಸಾಹಿಲ್ ಪೋಷಕರು ನೀಡಿದ ದೂರಿನನ್ವಯ, ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ‘ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ’ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ನಂತರ, ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಸಾಹಿಲ್ ಪೋಷಕರು ರಾಜವಾಡಿ ಆಸ್ಪತ್ರೆಯ ಶವಾಗಾರದಿಂದ ಮೃತದೇಹವನ್ನು ಪಡೆಯಲು ನಿರಾಕರಿಸಿ ಹಲವು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. “ಐಐಟಿ ಕ್ಯಾಂಪಸ್‌ನಲ್ಲಿ ನಿರಂತರವಾಗಿ ಇಂತಹ ಘಟನೆಗಳು ನಡೆಯುತ್ತಿದ್ದು, ಈ ವರ್ಷದಲ್ಲೇ ಇದು ಮೂರನೇ ಆತ್ಮಹತ್ಯೆ ಪ್ರಕರಣವಾಗಿದೆ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳಲೇಬೇಕು” ಎಂದು ಸಾಹಿಲ್ ತಂದೆ ರವೀಂದ್ರ ಆಗ್ರಹಿಸಿದ್ದರು. ಬಳಿಕ, ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸುವುದಾಗಿ ಪೊಲೀಸ್ ಉನ್ನತಾಧಿಕಾರಿಗಳು ಭರವಸೆ ನೀಡಿದ ಬಳಿಕ ಪೋಷಕರು ಮೃತದೇಹವನ್ನು ಪಡೆದುಕೊಂಡರು.

ಮತ್ತೊಂದೆಡೆ, ಕ್ಯಾಂಪಸ್‌ನಲ್ಲಿನ ಸರಣಿ ಆತ್ಮಹತ್ಯೆ ಮತ್ತು ಅದಕ್ಕೆ ಕ್ಯಾಂಪಸ್‌ನಲ್ಲಿನ ಕಿರುಕುಳವೇ ಕಾರಣವೆಂಬ ಗಂಭೀರ ಆರೋಪಗಳನ್ನು ಐಐಟಿ-ಬಾಂಬೆ ಆಡಳಿತ ಮಂಡಳಿ ನಿರಾಕರಿಸಿದೆ.

“ಕ್ಯಾಂಪಸ್‌ನಲ್ಲಿ ಯಾವುದೇ ರೀತಿಯ ಜಾತಿ ಆಧಾರಿತ ತಾರತಮ್ಯವಿಲ್ಲ. ವಿದ್ಯಾರ್ಥಿಗಳ ಜಾತಿಯ ವಿವರಗಳನ್ನು ಗೌಪ್ಯವಾಗಿಡಲಾಗುತ್ತದೆ. ಅಲ್ಲದೆ, ಪರೀಕ್ಷೆಯಲ್ಲಿ ನಿಯಮ ಉಲ್ಲಂಘಿಸಿದರೂ ಸಾಹಿಲ್ ವಿರುದ್ಧ ಯಾವುದೇ ಶಿಸ್ತುಕ್ರಮ ಕೈಗೊಂಡಿರಲಿಲ್ಲ. ಅವರಿಗೆ ಕೌನ್ಸೆಲಿಂಗ್ ನೀಡಲಾಗಿತ್ತು” ಸಂಸ್ಥೆಯ ಡೈರೆಕ್ಟರ್ ಪ್ರೊ. ಶಿರೀಶ್ ಕೇದಾರೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...