ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಎಫ್‌ಸಿಆರ್‌ಎ ಅಡಿ ಸಿಬಿಐ ಪ್ರಕರಣ

Date:

Advertisements
  • ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಕೇಂದ್ರ ತನಿಖೆಗೆ ಆದೇಶ
  • ಎಫ್‌ಸಿಆರ್‌ಎ ಅಡಿ ಆಕ್ಸ್‌ಫಾಮ್‌ ವಿರುದ್ಧ ಪ್ರಕರಣ ದಾಖಲು

ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿದೆ ಎಂದು ವರದಿಯಾಗಿದೆ.

ಸರ್ಕಾರೇತರ ಸಂಸ್ಥೆಗಳಿಗೆ (ಎನ್‌ಜಿಒ) ಕಾನೂನುಬಾಹಿರ ಹಣ ವರ್ಗಾವಣೆ ಮತ್ತು ವಿದೇಶಿ ಸರ್ಕಾರಗಳು ಹಾಗೂ ಸಂಸ್ಥೆಗಳನ್ನು ಬಳಸಿಕೊಂಡು ವಿದೇಶಿ ದೇಣಿಗೆ ಪರವಾನಗಿ ನವೀಕರಣಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ ಆರೋಪ ಎದುರಿಸುತ್ತಿದೆ.

ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದ 12 ದಿನಗಳ ನಂತರ ಸಿಬಿಐ ಪ್ರಕರಣ ದಾಖಲಿಸಿದೆ.

Advertisements

ಈ ಸಂಬಂಧ ಗೃಹ ಸಚಿವಾಲಯದ ನಿರ್ದೇಶಕ ಜಿತೇಂದರ್ ಚಡ್ಡಾ ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ–2010ರ (ಎಫ್‌ಸಿಆರ್‌ಎ) ಅಡಿ ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಕೇಂದ್ರ ಸರ್ಕಾರ ಕಂಪನಿಯ ಐದು ನಿಯಮಗಳ ಉಲ್ಲಂಘನೆ ಪರಿಗಣಿಸಿತ್ತು. ವಿದೇಶಿ ದೇಣಿಗೆ ಸಂಗ್ರಹಿಸುವ ಪರವಾನಗಿ ನವೀಕರಿಸಿರಲಿಲ್ಲ. ಇದರ ಪರಿಣಾಮ ಆಕ್ಸ್‌ಫಾಮ್‌ ಕಂಪನಿ ದೇಶದ 16 ರಾಜ್ಯಗಳಲ್ಲಿ ಕೈಗೊಂಡಿರುವ ಕೋವಿಡ್ ಸಂಬಂಧಿತ ಮತ್ತು ಇತರೆ ಸಾಮಾಜಿಕ ಕಾರ್ಯಗಳಿಗೆ ಅಡಚಣೆ ಉಂಟಾಗಿತ್ತು.

ಆಕ್ಸ್‌ಫಾಮ್‌ ಕಂಪನಿಯು ಕಾನೂನು ಮಾರ್ಗವನ್ನು ಹೊರತುಪಡಿಸಿ ಬೇರೆ ಮಾರ್ಗಗಳ ಮೂಲಕ ಹಣವನ್ನು ಸಂಪಾದಿಸುವ ಮೂಲಕ ಎಫ್‌ಸಿಆರ್‌ಎ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಕಂಪನಿಯು ಲಾಭ ತಂದುಕೊಡುವಂತಹ ಮಾರ್ಗಗಳನ್ನು ಬಳಸಿ, ಕೆಲ ಸಂಸ್ಥೆಗಳಿಗೆ ಹಣ ವರ್ಗಾವಣೆ ಮಾಡುತ್ತಿತ್ತು. ಇಂಥ ವಹಿವಾಟಿನ ಮೂಲಕ ಎಫ್‌ಸಿಆರ್‌ಎ ನಿಯಮಗಳಿಂದ ತಪ್ಪಿಸಿಕೊಳ್ಳಲು ಸಂಚು ರೂಪಿಸಿತ್ತು. ಇದು ಆದಾಯ ತೆರಿಗೆ ಇಲಾಖೆ ನಡೆಸಿದ ತನಿಖೆಯಿಂದ ತಿಳಿದು ಬಂದಿದೆ ಎಂದು ಗೃಹ ಸಚಿವಾಲಯ ದಾಖಲಿಸಿದ ದೂರಿನಲ್ಲಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಮೀಸಲಾತಿ; ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

ಆಕ್ಸ್‌ಫಾಮ್‌ ಇಂಡಿಯಾ ವಿದೇಶಿ ಸಂಸ್ಥೆಗಳ ಸಾಧನವಾಗಿರುವ ಸಾಧ್ಯತೆ ಇದೆ ಎಂಬುದು ಪರಿಶೀಲನೆಯಲ್ಲಿ ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಲವು ವರ್ಷಗಳಿಂದ ಸಂಸ್ಥೆಗೆ ಉದಾರವಾಗಿ ದೇಣಿಗೆ ಹರಿದು ಬಂದಿದೆ ಎಂದು ತಿಳಿದು ಬಂದಿದೆ ಎಂದು ಸಚಿವಾಲಯ ಹೇಳಿದೆ.

ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಲು ನೋಂದಾಯಿಸಿಕೊಂಡಿರುವ ಆಕ್ಸ್‌ಫಾಮ್‌ ಕಂಪನಿಯು ತನ್ನ ಸಹವರ್ತಿಗಳು ಮತ್ತು ಉದ್ಯೋಗಿಗಳ ಮೂಲಕ ನೀತಿ ಸಂಶೋಧನಾ ಕೇಂದ್ರಕ್ಕೆ (ಸಿಪಿಆರ್) ಲಂಚದ ರೂಪದಲ್ಲಿ ಹಣವನ್ನು ರವಾನಿಸಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X