ಎರಡನೇ ಅತಿ ದೊಡ್ಡ ಚುನಾವಣಾ ಬಾಂಡ್ ಖರೀದಿದಾರ ಸಂಸ್ಥೆ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಎಫ್‌ಐಆರ್

Date:

Advertisements

ಸುಮಾರು 966 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ, ಎರಡನೇ ಅತಿ ದೊಡ್ಡ ಬಾಂಡ್ ಖರೀದಿದಾರ ಸಂಸ್ಥೆಯಾದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಜಗದಲ್‌ಪುರ ಸಂಯೋಜಿತ ಸ್ಟೀಲ್ ಪ್ಲಾಂಟ್‌ಗೆ ಸಂಬಂಧಿಸಿದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇಘಾ ಇಂಜಿನಿಯರಿಂಗ್‌ನ 174 ಕೋಟಿ ರೂಪಾಯಿಗಳ ಬಿಲ್‌ಗಳನ್ನು ತೆರವುಗೊಳಿಸಲು ಸುಮಾರು 78 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಈ ಎಫ್‌ಐಆರ್ ದಾಖಲಿಸಲಾಗಿದ್ದು, ಎನ್‌ಐಎಸ್‌ಪಿ, ಎನ್‌ಎಂಡಿಸಿಯ ಎಂಟು ಅಧಿಕಾರಿಗಳು ಮತ್ತು ಎಂಇಸಿಒಎನ್‌ನ ಇಬ್ಬರು ಅಧಿಕಾರಿಗಳ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಇದನ್ನು ಓದಿದ್ದೀರಾ?   ಚುನಾವಣಾ ಬಾಂಡ್ | ಮೇಘಾ, ರಿಲಯನ್ಸ್, ಬಿರ್ಲಾ- ಬಿಜೆಪಿಗೆ ಹೆಚ್ಚು ದೇಣಿಗೆ ಕೊಟ್ಟ ಕಂಪನಿಗಳ ಪಟ್ಟಿ ಇಲ್ಲಿದೆ

Advertisements

ಮಾರ್ಚ್ 21 ರಂದು ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಮೇಘಾ ಇಂಜಿನಿಯರಿಂಗ್ ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರ ಸಂಸ್ಥೆಯಾಗಿದೆ. ಈ ಪೈಕಿ ಬಿಜೆಪಿಗೆ 586 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದೆ.

ಕಂಪನಿಯು ಬಿಆರ್‌ಎಸ್‌ಗೆ 195 ಕೋಟಿ ರೂಪಾಯಿ, ಡಿಎಂಕೆಗೆ 85 ಕೋಟಿ ರೂಪಾಯಿ, ವೈಎಸ್‌ಆರ್‌ಸಿಪಿಗೆ 37 ಕೋಟಿ ರೂಪಾಯಿ, ಟಿಡಿಪಿಗೆ 25 ಕೋಟಿ ರೂಪಾಯಿ, ಕಾಂಗ್ರೆಸ್‌ಗೆ 17 ಕೋಟಿ ರೂಪಾಯಿ, ಜೆಡಿ-ಎಸ್, ಜನಸೇನಾ, ಜೆಡಿಯು ಪಕ್ಷಗಳಿಗೆ 5 ಕೋಟಿಯಿಂದ 10 ಕೋಟಿ ರೂಪಾಯಿವರೆಗೆ ದೇಣಿಗೆಯನ್ನು ನೀಡಿದೆ.

ಶನಿವಾರ ಪ್ರಕಟವಾದ ಎಫ್‌ಐಆರ್‌ನ ಪ್ರಕಾರ, ಇಂಟೆಕ್‌ವೆಲ್, ಪಂಪ್‌ಹೌಸ್ ಮತ್ತು ಕ್ರಾಸ್ ಕಂಟ್ರಿ ಪೈಪ್‌ಲೈನ್ ಕಾಮಗಾರಿಗೆ ಸಂಬಂಧಿಸಿದ 315 ಕೋಟಿ ರೂಪಾಯಿಗಳ ಯೋಜನೆಯಲ್ಲಿ ಲಂಚದ ಆರೋಪದ ಬಗ್ಗೆ ಸಿಬಿಐ 2023 ಆಗಸ್ಟ್ 10 ರಂದು ಪ್ರಾಥಮಿಕ ವಿಚಾರಣೆಯನ್ನು ದಾಖಲಿಸಿದೆ. ಅದಾದ ಬಳಿಕ ಪ್ರಾಥಮಿಕ ವಿಚಾರಣೆ ನಂತರ ಪ್ರಕರಣ ದಾಖಲಿಸಲು ಶಿಫಾರಸು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X