ನೆಹರು ಸ್ಮಾರಕದ ಮರುನಾಮಕರಣ : ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

Date:

Advertisements
  • 59 ವರ್ಷಗಳ ಇತಿಹಾಸವಿರುವ ಪಂಡಿತ್‌ ಜವಾಹರ್‌ಲಾಲ್‌ ನೆಹರು ಸ್ಮಾರಕ
  • ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಸೊಸೈಟಿ ಎಂದು ಮರುನಾಮಕರಣ

ದೆಹಲಿಯ ತೀನ್‌ಮೂರ್ತಿ ಮಾರ್ಗದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬದಲಿಸಿದೆ. ಕೇಂದ್ರದ ಈ ನಡೆಗೆ ಕಾಂಗ್ರೆಸ್‌ ನಾಯಕರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ದ್ವೇಷದ ರಾಜಕಾರಣಕ್ಕೆ ಇದೊಂದು ಉದಾಹರಣೆ ಎಂದಿದ್ದಾರೆ.

ಇತ್ತೀಚೆಗೆ ನೆಹರು ಸ್ಮಾರಕದ ಹೆಸರನ್ನು ಬದಲಿಸಿರುವ ಕೇಂದ್ರ ಸರ್ಕಾರ, ʼಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಸೊಸೈಟಿʼ ಎಂದು ಮರು ನಾಮಕರಣ ಮಾಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಈ ಸೊಸೈಟಿಯ ಉಪಾಧ್ಯಕ್ಷರಾಗಿದ್ದು, ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ಮರುನಾಮಕರಣದ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಜವಾಹರ್‌ಲಾಲ್‌ ನೆಹರು ಅವರು ಭಾರತದ ಪ್ರಧಾನಿ ಆಗಿದ್ದಾಗ 16 ವರ್ಷಗಳ ಕಾಲ ತೀನ್‌ಮೂರ್ತಿ ಮಾರ್ಗದಲ್ಲಿರುವ ಇದೇ ಕಟ್ಟಡದಲ್ಲಿ ವಾಸವಿದ್ದರು. ಅವರ ನಿಧನದ ನಂತರ ಈ ಕಟ್ಟಡವನ್ನು ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯವನ್ನಾಗಿ ಮಾರ್ಪಡಿಸಲಾಗಿತ್ತು.

Advertisements

ಕೇಂದ್ರ ಸರ್ಕಾರ ನೆಹರು ಸ್ಮಾರಕದ ಹೆಸರು ಬದಲಿಸುತ್ತಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಟ್ವೀಟ್‌ ಮಾಡಿದ್ದು, “ತಮ್ಮ ಸ್ವಂತ ಇತಿಹಾಸವೇ ಇಲ್ಲದವರು ಇನ್ನೊಬ್ಬರ ಹಿನ್ನೆಲೆಯನ್ನು ಹತ್ತಿಕ್ಕುವುದರಲ್ಲೇ ತೊಡಗಿಕೊಂಡಿರುತ್ತಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರ ಈ ರೀತಿಯ ನಡೆಯಿಂದ ಅವರ ಕೀಳುಮಟ್ಟದ ಮನಸ್ಥಿತಿ ಮತ್ತು ಸರ್ವಾಧಿಕಾರಿ ಧೋರಣೆಯ ಪರಿಚಯವಾಗುತ್ತಿದೆ” ಎಂದು ಕೇಂದ್ರದ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹಿರಿಯ ಕಾಂಗ್ರೆಸ್‌ ವಕ್ತಾರ ಜೈರಾಮ್‌ ರಮೇಶ್‌ ಕೂಡ ಟ್ವೀಟ್‌ ಮಾಡಿದ್ದು, “ಸಂಕುಚಿತ ಮನೋಭಾವ ಮತ್ತು ದ್ವೇಷ ರಾಜಕಾರಣಕ್ಕೆ ಇನ್ನೊಂದು ಹೆಸರೇ ಮೋದಿ. 59 ವರ್ಷಗಳ ಇತಿಹಾಸವಿರುವ ನೆಹರು ಸ್ಮಾರಕ ಜಗತ್ತಿಗೆ ಬೌದ್ಧಿಕ ಜ್ಞಾನವನ್ನು ಪಸರಿಸುವ ಮತ್ತು ಪುಸ್ತಕಗಳ ಭಂಡಾರವಾಗಿತ್ತು. ಈ ಸ್ಮಾರಕದ ಹೆಸರನ್ನು ಬದಲಿಸುವ ಮೂಲಕ ಮೋದಿ ಅವರು ಭಾರತವನ್ನು ಕಟ್ಟಿದ ಶಿಲ್ಪಿಯ ಇತಿಹಾಸವನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ. ಅಭದ್ರತೆಯಿಂದ ಬದುಕುತ್ತಿರುವ ಈ ವ್ಯಕ್ತಿ ಜಗತ್ತಿನ ಎದುರು ತನ್ನನ್ನು ತಾನು ವಿಶ್ವಗುರು ಎಂದು ಹೇಳಿಕೊಂಡು ತಿರುಗುತ್ತಿದ್ದಾನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X