ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಬೇಡಿಕೆಯಿಟ್ಟ ಚಂದ್ರಬಾಬು ನಾಯ್ಡು; ರಾಜಕೀಯದಲ್ಲಿ ಏರಿಳಿತ ಸಾಮಾನ್ಯ ಎಂದ ಟಿಡಿಪಿ ನಾಯಕ

Date:

Advertisements

ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯ ಜೊತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ.

ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು ಇಂದು ನಡೆಯುವ ಉನ್ನತ ಮಟ್ಟದ ಎನ್‌ಡಿಎ ಸಭೆಯಲ್ಲಿ ನೂತನ ಸರ್ಕಾರದಲ್ಲಿ ಟಿಡಿಪಿ ಪಕ್ಷಕ್ಕೆ ಸ್ಪೀಕರ್‌ ಹುದ್ದೆ ಕೇಳುವ ಸಾಧ್ಯತೆಯಿದೆ.

ಇಲ್ಲಿಯವರೆಗೂ ಇಂಡಿಯಾ ಒಕ್ಕೂಡದ ಯಾವೊಬ್ಬ ನಾಯಕರು ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿಲ್ಲ. ಆದಾಗ್ಯೂ ಕೆಲವರನ್ನು ಟಿಡಿಪಿ ಮುಖ್ಯಸ್ಥರ ಬಳಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisements

ದೆಹಲಿಗೆ ಹೋಗುವ ಮುನ್ನ ಚಂದ್ರಬಾಬು ನಾಯ್ಡು ಅವರು ವಿಜಯವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “ನಾನೊಬ್ಬ ಅನುಭವಿ. ನಾನು ಈ ದೇಶದಲ್ಲಿ ಹಲವು ಬದಲಾವಣೆಗಳನ್ನು ನೋಡಿದ್ದೇನೆ. ನಾನು ಎನ್‌ಡಿಎ ಜೊತೆಗಿರುತ್ತೇನೆ. ದೆಹಲಿಗೆ ಎನ್‌ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

“ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗುವ ಮುನ್ನ ಇದು ನನ್ನ ಮೊದಲ ಪತ್ರಿಕಾಗೋಷ್ಠಿಯಾಗಿದೆ. ನಮ್ಮನ್ನು ಬೆಂಬಲಿಸಿದ್ದಕ್ಕೆ ಮತದಾರರಿಗೆ ಧನ್ಯವಾದ ತಿಳಿಸುತ್ತೇನೆ. ರಾಜಕೀಯದಲ್ಲಿ ಏರಿಳಿತಗಳು ಸಾಮಾನ್ಯ. ಇತಿಹಾಸದಲ್ಲಿ ಹಲವು ರಾಜಕೀಯ ನಾಯಕರು ಹಾಗೂ ಪಕ್ಷಗಳನ್ನು ತಿರಸ್ಕರಿಸಲಾಗಿದೆ. ಇದೊಂದು ಐತಿಹಾಸಿಕ ಚುನಾವಣೆ. ವಿದೇಶದಲ್ಲಿರುವ ಮತದಾರರು ಕೂಡ ತಮ್ಮ ಊರಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಕ್ಷಕ್ಕೂ ಟಿಡಿಪಿ ಮುಖ್ಯಸ್ಥರು ಧನ್ಯವಾದ ಸಲ್ಲಿಸಿದರು. ರಾಜ್ಯವನ್ನು ಉಳಿಸಲು ಜನಸೇನಾ ಮುಖ್ಯಸ್ಥರು ಜವಾಬ್ದಾರಿ ತೆಗೆದುಕೊಂಡಿದ್ದರು ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X