ಮೂತ್ರಪಿಂಡ ಸೋಂಕಿನಿಂದ ಮೃತಪಟ್ಟ ನಮೀಬಿಯಾ ಚೀತಾ

Date:

  • ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಕಳೆದ ವರ್ಷ ಸೆ.17 ರಂದು ಬಿಡುಗಡೆ ಮಾಡಿದ್ದ ಪ್ರಧಾನಿ
  • ಚೀತಾಗಳ ಸಂರಕ್ಷಣೆ ಕಾರಣಕ್ಕಾಗಿ ಉದ್ಯಾನವನ ಸುತ್ತಮುತ್ತಲ 24 ಗ್ರಾಮಗಳ ಜನರ ಸ್ಥಳಾಂತರ

ನಮೀಬಿಯಾದಿಂದ ಕಳೆದ ವರ್ಷ ಭಾರತಕ್ಕೆ ಸ್ಥಳಾಂತರಗೊಂಡಿದ್ದ ಎಂಟು ಚಿರತೆಗಳ ಪೈಕಿ ಸಾಶಾ ಹೆಸರಿನ ಮೂರು ವರ್ಷದ ಹೆಣ್ಣು ಚೀತಾ ಮೂತ್ರಪಿಂಡ ಸೊಂಕಿನಿಂದ ಸೋಮವಾರ(ಮಾರ್ಚ್‌ 27 ) ಮೃತಪಟ್ಟಿದೆ.

ಸಾಶಾ, ಜನವರಿಯಲ್ಲಿಯೇ ನಿಶ್ಯಕ್ತಿಯಿಂದ ಬಳಲುತ್ತಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಅಲ್ಲದೆ ಭಾರತಕ್ಕೆ ಕರೆತರುವ ಮುನ್ನವೇ ಎರಡು ವರ್ಷಗಳಿಂದ ಅನಾರೋಗ್ಯದಿಂದ ಈ ಚೀತಾ ಬಳಲುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು.

ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ಕರೆತರಲಾಗಿತ್ತು.

ತಮ್ಮ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡಲಾಗಿತ್ತು. ಬಳಿಕ ಚೀತಾಗಳು ಕಾಡಿನ ವಾತಾವರಣಕ್ಕೆ ಹೊಂದಿಕೊಂಡು ಬೇಟೆಯಾಡಲು ಆರಂಭಿಸಿದ್ದವು.

ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. ಅದಾದ 75 ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಈ ಕಾರಣಕ್ಕಾಗಿ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. ಚೀತಾಗಳ ಸ್ಥಳಾಂತರಕ್ಕೆ ಸರ್ಕಾರದಿಂದ 75 ಕೋಟಿ ರೂ. ಖರ್ಚು ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ: ದಲಿತ ಬಾಲಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯ

ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ...

ಗುಜರಾತ್ : ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಅಮಾನುಷ ಹಲ್ಲೆ

ಬುಡಕಟ್ಟು ಸಮುದಾಯದ ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನ ಕುಟುಂಬದವರು ಅಪಹರಿಸಿ, ಅಮಾನುಷವಾಗಿ...

ರಾಜಸ್ಥಾನ ಚುನಾವಣೆಗೆ ಕರ್ನಾಟಕ ರೈಲು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಭಾವ?

2019ರ ಲೋಕಸಭೆ ಚುನಾವಣೆಯಲ್ಲಿ ರೈಲ್ವೆ ಇಲಾಖೆಯನ್ನು ಬೇಕಾಬಿಟ್ಟಿ ಬಳಸಿಕೊಂಡಿದ್ದ ಬಿಜೆಪಿ ಈ...

‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ...