ಛತ್ತೀಸ್‌ಘಡ | ಇಬ್ಬರು ಮಹಿಳೆಯರು ಸೇರಿದಂತೆ ಪೊಲೀಸರಿಗೆ ಶರಣಾದ 33 ನಕ್ಸಲರು

Date:

Advertisements

ಕಳೆದ ಕೆಲವು ತಿಂಗಳುಗಳಿಂದ ಛತ್ತೀಸ್‌ಘಡದಲ್ಲಿ ನಕ್ಸಲರು ಹಾಗೂ ಶಸ್ತಾಸ್ರ ಪಡೆಗಳ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ. ಈ ನಡುವೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳೆಯರು ಸೇರಿದಂತೆ 33 ಮಂದಿ ನಕ್ಸಲರು ಪೊಲೀಸರಿಗೆ ಶರಣಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

“ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 33 ನಕ್ಸಲರು, ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಹಿರಿಯ ಅಧಿಕಾರಿಗಳ ಮುಂದೆ ಶನಿವಾರ ಶರಣಾಗತರಾಗಿದ್ದಾರೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ತಿಳಿಸಿದರು.

“ಮಾವೋವಾದಿಗಳ ಗಂಗಲೂರು ಪ್ರದೇಶ ಸಮಿತಿಯಡಿ ಸಕ್ರಿಯರಾಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಶರಣಾದ 33 ಮಂದಿಯು, ಪೊಲೀಸರ ಪುನರ್ವಸತಿ ನೀತಿಯಿಂದ ಪ್ರಭಾವಿತರಾಗಿದ್ದಾರೆ” ಎಂದು ಹೇಳಿದರು.

Advertisements

ಮಾವೋವಾದಿ ಸಿದ್ಧಾಂತದಿಂದ ಭ್ರಮನಿರಸನಗೊಂಡಿದ್ದಾರೆ ಮತ್ತು ಆದಿವಾಸಿಗಳ ವಿರುದ್ಧ ತಮ್ಮದೇ ಗುಂಪು ನಡೆಸಿದ ದೌರ್ಜನ್ಯವನ್ನು ಖಂಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯ (ಪಿಎಲ್‌ಜಿಎ) ಸದಸ್ಯ ರಾಜು ಹೇಮ್ಲ ಅಲಿಯಾಸ್‌ ಠಾಕೂರ್ (35), ಮಾವೋವಾದಿಗಳ ಪ್ಲಟೂನ್ ನಂಬರ್ ಒಂದರ ಸದಸ್ಯ ಸಮೋ ಕರ್ಮ ಪತ್ತೆಗೆ ತಲಾ 2 ಲಕ್ಷ ಹಾಗೂ ಮಾವೋವಾದಿಗಳ ರೆವಲ್ಯೂನಪರಿ ಪಾರ್ಟಿ ಕಮಿಟಿಯ (ಆರ್‌ಪಿಸಿ) ಜನತಾ ಸರ್ಕಾರ್‌ನ ಮುಖ್ಯಸ್ಥ ಸುದ್ರು ಪುನೆಮ್ ಪತ್ತೆಗಾಗಿ 1 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಈ ಮೂವರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶರಣಾದ ನಕ್ಸಲರಿಗೆ ತಲಾ 25 ಸಾವಿರ ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್ | ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ; 20 ಮಂದಿ ಮೃತ್ಯು

ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ 109 ನಕ್ಸಲರು ಮುಖ್ಯವಾಹಿನಿಗೆ ಮರಳಿದ್ದು, 189 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X