ಛತ್ತೀಸ್‌ಗಢ | 29 ಜನರ ಹತ್ಯೆಗೆ ಕಾರಣವಾದ 2013ರ ದಾಳಿ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

Date:

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಭೀಕರ ಮಾರಣಹೋಮ ನಡೆದ 13 ವರ್ಷಗಳ ಬಳಿಕ, ಅಪರಾಧಿಗಳೆಂದು ಸಾಬೀತಾದ ಎಲ್ಲ 10 ಮಾವೋವಾದಿ ನಾಯಕರಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

- Advertisement -

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಜಗದಾಳಪುರದಲ್ಲಿರುವ ವಿಶೇಷ ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶರಾದ ಅಭಯ್ ಸಿಂಗ್ ರಜಪೂತ್ ಅವರು ಈ ಕಠಿಣ ತೀರ್ಪನ್ನು ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನೂ ಓದಿ: ಗುಂಡಿನ ಚಕಮಕಿ | ಮಾವೋವಾದಿ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ

2013ರ ಮೇ 25ರಂದು ಬಸ್ತಾರ್ ಜಿಲ್ಲೆಯ ಝೀರಂ ಕಣಿವೆಯಲ್ಲಿ ಕಾಂಗ್ರೆಸ್ ಪಕ್ಷದ ‘ಪರಿವರ್ತನ ಯಾತ್ರೆ’ಯ ರ‍್ಯಾಲಿ ಮುಗಿಸಿ ಹಿಂತಿರುಗುತ್ತಿದ್ದ ನಾಯಕರ ಕಾನ್‌ವಾಯ್‌ ಮೇಲೆ ನೂರಾರು ನಕ್ಸಲರು ಹೊಂಚುದಾಳಿ ನಡೆಸಿದ್ದರು. ಈ ಭೀಕರ ದಾಳಿಯಲ್ಲಿ ಛತ್ತೀಸ್‌ಗಢ ಕಾಂಗ್ರೆಸ್ ಘಟಕದ ಅಧ್ಯಕ್ಷ ನಂದಕುಮಾರ್ ಪಟೇಲ್, ಅವರ ಪುತ್ರ ದಿನೇಶ್ ಪಟೇಲ್, ಮಾಜಿ ಕೇಂದ್ರ ಸಚಿವ ವಿದ್ಯಾಚರಣ್ ಶುಕ್ಲಾ, ಹಿರಿಯ ನಾಯಕ ಮಹೇಂದ್ರ ಕರ್ಮಾ ಹಾಗೂ ಭದ್ರತಾ ಸಿಬ್ಬಂದಿ ಸೇರಿದಂತೆ ಒಟ್ಟು 29 ಜನರು ದಾರುಣವಾಗಿ ಹತ್ಯೆಯಾಗಿದ್ದರು.

Advertisements

ದಾಳಿಯ ಬಳಿಕ ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಎನ್‌ಐಎ, ಮಾವೋವಾದಿ ಸಂಘಟನೆಯ ಪ್ರಮುಖ ಕಾರ್ಯಕರ್ತರು ಸೇರಿದಂತೆ 10 ಜನರನ್ನು ಬಂಧಿಸಿ ದೋಷಾರೋಪಣೆ ಸಲ್ಲಿಸಿತ್ತು. ನ್ಯಾಯಾಲಯದಲ್ಲಿ ನಡೆದ ಸುದೀರ್ಘ ವಿಚಾರಣೆ ಮತ್ತು ಸಲ್ಲಿಕೆಯಾದ ಪ್ರಬಲ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಾಧೀಶರು, ಪ್ರಕರಣವನ್ನು “ಅತ್ಯಂತ ಅಪರೂಪದಲ್ಲಿ ಅಪರೂಪದ ಪ್ರಕರಣ” ಎಂದು ಪರಿಗಣಿಸಿ ಎಲ್ಲಾ 10 ಜನರಿಗೂ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...