ಛತ್ತೀಸ್‌ಗಢ | 25 ವಿದ್ಯಾರ್ಥಿಗಳ ಕೈಗೆ ಬಿಸಿ ಎಣ್ಣೆ ಸುರಿದ ಶಿಕ್ಷಕರ ಅಮಾನತು

Date:

Advertisements

ವಿದ್ಯಾರ್ಥಿನಿಯೊಬ್ಬಳು ಶೌಚಾಲಯದ ಹೊರಗೆ ಮಲ ವಿಸರ್ಜನೆ ಮಾಡಿದ ಕಾರಣಕ್ಕೆ  25 ಮಕ್ಕಳಿಗೆ ಬಲವಂತವಾಗಿ ಬಿಸಿ ಎಣ್ಣೆ ಸುರಿದು ಮಕ್ಕಳು ಪರಸ್ಪರರ ಅಂಗೈಗೆ ಬಿಸಿ ಎಣ್ಣೆಯಿಂದ ಸುಟ್ಟುಕೊಳ್ಳುವಂತೆ ಶಿಕ್ಷೆ ನೀಡಿದ ಭಯಾನಕ ಘಟನೆ ಛತ್ತೀಸ್‌ಗಢ ರಾಜ್ಯದ ಬಸ್ತರ್ ವಿಭಾಗದ ಕೊಂಡಗಾಂವ್ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ವರದಿಯಾಗಿದೆ.

ಈ ಬರ್ಬರ ಕೃತ್ಯ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ, ಶಿಕ್ಷಣ ಇಲಾಖೆ ಘಟನೆ ಬಗ್ಗೆ ವಿಚಾರಣೆಗೆ ಆದೇಶ ನೀಡಿದೆ. ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಇತರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಘಟನೆಯ ಸಂತ್ರಸ್ತ ಮಕ್ಕಳು 11 ರಿಂದ 12 ವರ್ಷದವರು ಎನ್ನಲಾಗಿದ್ದು, ಅಂಗೈಯಲ್ಲಿ ಸುಟ್ಟ ಗಾಯಗಳಾಗಿವೆ. ವಿಚಿತ್ರವೆಂದರೆ ಛತ್ತೀಸ್‌ಗಢ ಕೊಂಡಗಾಂವ್ ಜಿಲ್ಲಾ ಶಿಕ್ಷಣಾಧಿಕಾರಿ ತಿವಾರಿ, ಎಣ್ಣೆ ಅಷ್ಟೊಂದು ಬಿಸಿ ಇರಲಿಲ್ಲ ಎಂಬ ಸಬೂಬು ನೀಡಿ 25 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಊಟದ ವೇಳೆ, ಶಿಕ್ಷಕರು ಊಟಕ್ಕೆ ತೆರಳಿದ್ದರು. ಅವರು ಮರಳಿದಾಗ, ಯಾರೋ ವಿದ್ಯಾರ್ಥಿಗಳು ಶೌಚಾಲಯದ ಹೊರಗೆ ವಿಸರ್ಜಿಸಿರುವುದು ಕಂಡುಬಂದಿದೆ. ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದಾಗ ಯಾರೂ ಒಪ್ಪಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾಮೂಹಿಕ ಶಿಕ್ಷೆಗೆ ಶಿಕ್ಷಕರು ಮುಂದಾದರು. ಮಧ್ಯಾಹ್ನದ ಬಿಸಿಯೂಟದ ಅಡುಗೆಮನೆಯಿಂದ ಬಿಸಿ ಎಣ್ಣೆ ತಂದು, ಪರಸ್ಪರರ ಕೈಗೆ ಎಣ್ಣೆ ಸುರಿಯುವಂತೆ ಬಲವಂತಪಡಿಸಿದರು ಎಂದು ಹೇಳಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಗುಟ್ಕಾ ಜಾಹೀರಾತು ಪ್ರಕರಣ: ಬಾಲಿವುಡ್ ನಟರಾದ ಶಾರೂಖ್, ಅಕ್ಷಯ್, ಅಜಯ್ ದೇವಗನ್‌ಗೆ ನೋಟಿಸ್

ಈ ಕರಾಳ ಶಿಕ್ಷೆಯ ಬಗ್ಗೆ ಕೆಲವರು ವಿಡಿಯೋ ಚಿತ್ರೀಕರಣ ಮಾಡಿ, ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದಾರೆ. ಇದು ಅಧಿಕಾರಿಗಳಿಗೆ ತಲುಪಿದೆ.

ತಕ್ಷಣ ಶಾಲೆಗೆ ತನಿಖಾ ತಂಡ ಕಳುಹಿಸಲಾಗಿದೆ ಎಂದು ತಾಲೂಕು ಶಿಕ್ಷಣ ಸಂಪನ್ಮೂಲ ಅಧಿಕಾರಿ ತಾಹಿರ್ ಖಾನ್ ಹೇಳಿದ್ದಾರೆ. ಐದು ಮಕ್ಕಳ ಅಂಗೈನಲ್ಲಿ ಸುಟ್ಟ ಗುಳ್ಳೆಗಳು ಎದ್ದಿವೆ ಎಂದು ಮಧುಲಿಕಾ ತಿವಾರಿ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X