ಚಿತ್ರದುರ್ಗ | ನಿಸ್ವಾರ್ಥ, ಸರ್ವಸಂಗಪರಿತ್ಯಾಗಿ ಸೈನಿಕರಿಂದ ಪ್ರಜೆಗಳಿಗೆ ನೆಮ್ಮದಿ; ಕಾರ್ಗಿಲ್ ವಿಜಯೋತ್ಸವದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು

Date:

Advertisements

“ನಿಜವಾದ ನಿಸ್ವಾರ್ಥಿ ಮಾತ್ರ ಸೈನಿಕನಾಗಲು ಸಾಧ್ಯ. ಸೈನಿಕ ನಿಜವಾದ ಸರ್ವಸಂಗಪರಿತ್ಯಾಗಿ. ಯುದ್ದ ಭೂಮಿ, ಗಡಿ ರಕ್ಷಣೆಯಲ್ಲಿ ಪ್ರಾಣಪಕ್ಷಿ ಹಾರಿಹೋಗುತ್ತದೆ ಎಂಬ ಸತ್ಯ ಅರಿವಿದ್ದರೂ ಇದೇ ವೃತ್ತಿ ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿಯೇ ಯೋಧ. ದೇಶಪ್ರೇಮದ ಪರಮೋಚ್ಚ ಸ್ಥಾನವೇ ಸೈನಿಕ. “ಇಂದು ದೇಶದ ಪ್ರತಿಯೊಬ್ಬ ಪ್ರಜೆ ನೆಮ್ಮದಿಯ ಬದುಕು ಸಾಗಿಸುತ್ತಿದ್ದಾನೆ ಎಂದರೆ ಅದಕ್ಕೆ ದೇಶವನ್ನು ಹಗಲಿರುಳು ಕಾಯುತ್ತಿರುವ ಸೈನಿಕರೇ ಕಾರಣ. ಸೈನಿಕರನ್ನು ಯಾರೂ ಕಡೆಗಣಿಸದೆ ಗೌರವದಿಂದ ಕಾಣಬೇಕು” ಎಂದು ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಕಾರ್ಗಿಲ್ ವಿಜಯೋತ್ಸವ ಆಚರಣೆಯಲ್ಲಿ ಹೆಮ್ಮೆ ವ್ಯಕ್ತಪಡಿಸಿದರು.

1002390582

ಚಿತ್ರದುರ್ಗ ಹೊರವಲಯದ ಎಸ್ ಜೆ ಎಸ್ ಸಮೂಹ ವಿದ್ಯಾಸಂಸ್ಥೆಗಳು, ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದಲ್ಲಿ ಹಮ್ಮಿಕೊಂಡ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು “ಕಾರ್ಗಿಲ್ ವಿಜಯ್ ದಿನವು ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು. ಅವರು ದೇಶದ ಗೌರವ ಕಾಪಾಡಲು ತಮ್ಮ ಪ್ರಾಣವನ್ನೇ ಅರ್ಪಿಸಿದರು. ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಿದ್ದ ಆ ವೀರರ ತ್ಯಾಗವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಅವರ ದೇಶಭಕ್ತಿ ಎಲ್ಲರಿಗೂ ಮಾದರಿಯಾಗಿದೆ” ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಶ್ರೀಗಳ ಪಟ್ಟಾಭಿಷೇಕ ಮಹೋತ್ಸವ ಹಾಗೂ ಭೋವಿ ಜನೋತ್ಸವ

Advertisements

“ವ್ಯಕ್ತಿ, ವಸ್ತು ಹಾಗೂ ಮನೆಗಿಂತಲೂ ಮಿಗಿಲು ದೇಶ ಎನ್ನುವ ಅಚಲ ವಿಶ್ವಾಸಾರ್ಹತೆಯ ಬದ್ದತೆ ತೋರಿಸುವವರೇ ಯೋಧರು. ದೇಶ ರಕ್ಷಣೆ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡುವ ಸ್ಪಷ್ಟ ನಿಲುವು ಹೊಂದಿಯೇ ಸೈನ್ಯಕ್ಕೆ ಸೇರ್ಪಡೆಗೊಳ್ಳುವ ಯೋಧರೇ ನಮ್ಮ ಪಾಲಿನ ದೇವರು” ಎಂದು ಹೇಳಿದರು.‌

1002390580
ಭೋವಿ ಗುರುಪೀಠದ ಕಾರ್ಗಿಲ್ ವಿಜಯೋತ್ಸದಲ್ಲಿ ಮಕ್ಕಳೊಂದಿಗೆ ಶ್ರೀಗಳು

“ಸೈನಿಕನ ಜೀವನವು ಸಾಹಸ ಮತ್ತು ಅಪಾಯಗಳಿಂದ ತುಂಬಿರುತ್ತದೆ. ಸೈನಿಕರು ಯಾವುದೇ ಪರಿಸ್ಥಿತಿಯಲ್ಲಿಯೂ ತಮ್ಮ ತಾಯ್ನಾಡನ್ನು ರಕ್ಷಿಸಲು ಪ್ರತಿಜ್ಞೆ ಮಾಡುತ್ತಾರೆ. ಅವರು ಎಂದಿಗೂ ಕರ್ತವ್ಯದಿಂದ ಹೊರಗುಳಿಯುವುದಿಲ್ಲ, ದೇಶಕ್ಕಾಗಿ ಅವರು ಎರಡನೇ ಆಲೋಚನೆಯಿಲ್ಲದೆ ತಮ್ಮ ಪ್ರಾಣವನ್ನೇ ಅರ್ಪಿಸಬಹುದು. ಇದು ಅವರ ಧೈರ್ಯ ಮತ್ತು ಇಚ್ಛಾಶಕ್ತಿಯ ಬಗ್ಗೆ ಬಹಳಷ್ಟು ಹೇಳುತ್ತದೆ. ನಾವು ನಮ್ಮ ಕುಟುಂಬಗಳೊಂದಿಗೆ ಪ್ರತಿ ಸಂದರ್ಭವನ್ನು ಶಾಂತಿಯುತವಾಗಿ ಆಚರಿಸಲು ಅವರು ವರ್ಷಪೂರ್ತಿ ತಮ್ಮ ಕುಟುಂಬಗಳಿಂದ ದೂರವಿರುತ್ತಾರೆ. ಯಾವುದೇ ತುರ್ತು ಪರಿಸ್ಥಿತಿ ಅಥವಾ ವಿಪತ್ತಿನಿಂದ ಬದುಕುಳಿಯುವ ತ್ರಾಣ ಮತ್ತು ದೃಢಸಂಕಲ್ಪವನ್ನು ಅವರು ಹೊಂದಿದ್ದಾರೆ” ಎಂದು ಶ್ಲಾಘಿಸಿದರು.‌

ಈ ಸುದ್ದಿ ಓದಿದ್ದೀರಾ ? ದಾವಣಗೆರೆ ಚಿತ್ರದುರ್ಗ | ಮಡಿವಾಳ ಮಾಚಿದೇವ ಸೇನಾ ಪಡೆಯಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಾಲಾ ವಿದ್ಯಾರ್ಥಿಗಳು ಸೈನಿಕರ ಸಮವಸ್ತ್ರ ಧರಿಸಿ ಆಶುಭಾಷಣ, ಕಿರು ನಾಟಕ, ದೇಶ ಭಕ್ತಿ ಪ್ರಸ್ತುತ ಪಡಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X