370ನೇ ವಿಧಿ ರದ್ದತಿಯನ್ನು ಕರಾಳ ದಿನ ಎಂದು ಕರೆದದ್ದು ಅಪರಾಧವಲ್ಲ: ಸುಪ್ರೀಂ ಕೋರ್ಟ್

Date:

Advertisements

ಭಿನ್ನಾಭಿಪ್ರಾಯವನ್ನು ಕಾನೂನುಬದ್ಧವಾಗಿ ಅಭಿವ್ಯಕ್ತಪಡಿಸುವುದು ಜೀವನದ ಹಕ್ಕಿನ ಒಂದು ಭಾಗ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದತಿಯನ್ನು ಕರಾಳ ದಿನವೆಂದು ಕರೆದದ್ದು ಅಪರಾಧವಲ್ಲ ಎಂದು ಹೇಳಿದೆ.

ಅಂತೆಯೇ ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸುವುದು ಕೂಡಾ ಭಾರತೀಯ ದಂಡಸಂಹಿತೆ ಸೆಕ್ಷನ್ 153ಎ ಅಡಿಯಲ್ಲಿ ಉಭಯ ದೇಶಗಳ ಗುಂಪುಗಳ ನಡುವೆ ಅಥವಾ ಧಾರ್ಮಿಕ ನೆಲೆಯಲ್ಲಿ ದ್ವೇಷಕ್ಕೆ ಕಾರಣವಾಗುವ ಅಪರಾಧವಲ್ಲ ಎಂದು ಸ್ಪಷ್ಟಪಡಿಸಿದೆ.

370ನೇ ವಿಧಿ ರದ್ದತಿಯನ್ನು ಮತ್ತು ಜಮ್ಮು ಮತ್ತು ಕಾಶ್ಮೀರದ ಸ್ಥಿತಿಯನ್ನು ಬದಲಾಯಿಸಿದ ನಿರ್ಧಾರವನ್ನು ಟೀಕಿಸುವ ಹಕ್ಕು ದೇಶದ ಪ್ರತಿಯೊಬ್ಬ ಪ್ರಜೆಗೂ ಇದೆ. ಈ ರದ್ದತಿ ದಿನವನ್ನು ಕರಾಳದಿನ ಎಂದು ಕರೆದಿರುವುದು ಪ್ರತಿಭಟನೆ ಮತ್ತು ಸಿಟ್ಟನ್ನು ಅಭಿವ್ಯಕ್ತಪಡಿಸುವ ಕ್ರಮ. ಸರ್ಕಾರದ ಪ್ರತಿಯೊಂದು ಕ್ರಮದ ಬಗ್ಗೆ ಟೀಕಿಸುವುದು ಅಥವಾ ಪ್ರತಿಭಟಿಸುವುದು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಅಪರಾಧವಾದರೆ, ಸಂವಿಧಾನದ ಅಗತ್ಯ ವಿಶೇಷತೆ ಎನಿಸಿರುವ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭೂಯಾನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ಜತೆಗೆ 370ನೇ ವಿಧಿ ರದ್ದತಿಯನ್ನು ಟೀಕಿಸಿದ್ದ ಬಾರಮುಲ್ಲಾ ನಿವಾಸಿ ಜಾವೇದ್ ಅಹ್ಮದ್ ಹಜಾಮ ವಿರುದ್ಧದ ಎಫ್‍ಐಆರ್ ರದ್ದುಪಡಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

“ಕಾನೂನುಬದ್ಧವಾಗಿ ಭಿನ್ನಾಭಿಪ್ರಾಯವನ್ನು ಅಭಿವ್ಯಕ್ತಪಡಿಸುವುದನ್ನು ಸಂವಿಧಾನದ 21ನೇ ವಿಧಿಯಡಿ ನೀಡಿರುವ ಘನತೆಯಿಂದ ಮತ್ತು ಅರ್ಥಪೂರ್ಣವಾಗಿ ಬಾಳ್ವೆ ನಡೆಸುವ ಹಕ್ಕಿನ ಭಾಗ ಎಂದು ಪರಿಗಣಿಸಬೇಕಾಗುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳನ್ನು ಟೀಕಿಸುವ ಕ್ರಮದ ವಿರುದ್ಧ ಈ ಹಿಂದೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂಕೋರ್ಟ್, 370ನೇ ವಿಧಿ ರದ್ದತಿಯನ್ನು ಟೀಕಿಸಿದ ಹಜಾಮ್ ಅವರ ವಿಚಾರದಲ್ಲಿ ವಿಸ್ತೃತವಾದ ದೃಷ್ಟಿಕೋನವನ್ನು ಹೊಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸರ್ಕಾರದ ಪ್ರತಿಯೊಂದು ಕ್ರಮವನ್ನು ಟೀಕಿಸುವ ನಾಗರಿಕರ ಹಕ್ಕಿನ ಬಗ್ಗೆ ಪೊಲೀಸರಿಗೆ ತಿಳಿಹೇಳತಿಳಿಹೇಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X