ದುರಂತ ಘಟನೆ | ಶಾಲೆಯಲ್ಲಿ ಶಿಕ್ಷಕನನ್ನು ಇರಿದು ಕೊಂದ 11ನೇ ತರಗತಿ ವಿದ್ಯಾರ್ಥಿ

Date:

11ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲೇ ಇರಿದು ಕೊಂದಿರುವ ದುರ್ಘಟನೆ ಅಸ್ಸಾಂನ ಶಿವಸಾಗರ ಜಿಲ್ಲೆಯ ಶಾಲೆಯೊಂದರಲ್ಲಿ ಶನಿವಾರ ನಡೆದಿದೆ.

- Advertisement -

ವ್ಯಾಸಂಗದಲ್ಲಿ ಉತ್ತಮವಾಗಿಲ್ಲವೆಂದು ನನ್ನನ್ನು ನಿಂದಿಸಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಅವರನ್ನು 16 ವರ್ಷದ ಬಾಲಕ ಇರಿದು ಕೊಂದಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಬೆಜವಾಡ ಅವರು ಖಾಸಗಿ ಶಾಲೆಯಲ್ಲಿ ರಸಾಯನಶಾಸ್ತ್ರ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ರಸಾಯನಶಾಸ್ತ್ರ ವಿಷಯದಲ್ಲಿ ಆರೋಪಿ ವಿದ್ಯಾರ್ಥಿ ಹೆಚ್ಚಿನ ಅಂಕಗಳಿಸುವಲ್ಲಿ ವಿಫಲನಾಗಿದ್ದಾನೆ. ಹೀಗಾಗಿ, ಆತನ ಪೋಷಕರನ್ನು ಕರೆತರುವಂತೆ ಶಿಕ್ಷಕ ವಿದ್ಯಾರ್ಥಿಗೆ ಹೇಳಿದ್ದಾರೆ. ಅಲ್ಲದೆ, ಕಡಿಮೆ ಅಂಕ ಗಳಿಸಿದ್ದಕ್ಕೆ ನಿಂದಿಸಿದ್ದಾರೆ. ಇದರಿಂದ, ಉದ್ರಿಕ್ತನಾದ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿದ್ದಾನೆ ಎಂದು ವರದಿಯಾಗಿದೆ.

ಶಿಕ್ಷಕನಿಗೆ ಚೂರಿ ಇರಿಯುತ್ತಿರುವುದನ್ನು ನೋಡಿದ ವಿದ್ಯಾರ್ಥಿಯೊಬ್ಬ, “ಆರೋಪಿ ವಿದ್ಯಾರ್ಥಿಯು ಚಾಕು ತೆಗೆದುಕೊಂಡು ಶಿಕ್ಷಕರ ತಲೆಗೆ ಹೊಡೆದನು ಮತ್ತು ಚಾಕುವಿನಿಂದ ಇರಿದನು. ಅವನ ಬಳಿ ಚಾಕು ಇದೆ ಎಂದು ನಮಗೆ ತಿಳಿದಿರಲಿಲ್ಲ. ಶಿಕ್ಷಕ ಕುಸಿದು ಬಿದ್ದರು, ಭಾರೀ ರಕ್ತಸ್ತಾವವಾಗಿತ್ತು” ಎಂದು ಹೇಳಿರುವುದಾಗಿ ಸಾಕ್ಷಿಯಲ್ಲಿ ಸೇರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ...

ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ, ಮುಂಬರುವ...

ಫ್ಯಾಕ್ಟ್‌ಚೆಕ್ | ‘ಮೋದಿಗೂ 76 ವರ್ಷ, ಅವರ ಶಿಕ್ಷಕರಿಗೂ 76 ವರ್ಷ’; ಅಸಲಿಯತ್ತೇನು?

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಸಂದರ್ಭದಲ್ಲಿ, ಅವರ ಶಾಲಾ...