ದೆಹಲಿ | ಬಾಲಕನಿಗೆ ಹಲ್ಲೆ ನಡೆಸಿದ ಬಳಿಕ ಗುಪ್ತಾಂಗಕ್ಕೆ ಮರದ ತುಂಡು ತುರುಕಿದ ಸಹಪಾಠಿ!

Date:

Advertisements

ದೇಶದ ರಾಜಧಾನಿ ದೆಹಲಿಯಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿಗೆ ಅವನ ಸಹಪಾಠಿಗಳು ಹಲ್ಲೆ ನಡೆಸಿದ ಬಳಿಕ ಆತನ ಗುಪ್ತಾಂಗಕ್ಕೆ ಮರದ ಕೋಲು ತುರುಕಿದ ಘಟನೆ ವರದಿಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಬಾಲಾಪರಾಧಿಯನ್ನು ಬಂಧಿಸಿದ್ದಾರೆ.

ಎಫ್‌ಐಆರ್ ಪ್ರಕಾರ, 14 ವರ್ಷದ ವಿದ್ಯಾರ್ಥಿಯು ತನ್ನ ಶಾಲಾ ಸಹಪಾಠಿಗಳೊಂದಿಗೆ ಮಾ.13ರಂದು ಜಗಳವಾಡಿದ್ದನು. ಆ ಬಳಿಕ ನಾಲ್ವರು ಸಹಪಾಠಿಗಳು ಸೇರಿ ಮಾರ್ಚ್ 18ರಂದು 8ನೇ ತರಗತಿ ಬಾಲಕನಿಗೆ ಅಮಾನುಷವಾಗಿ ಥಳಿಸಿದ್ದಾರೆ. ಆ ಬಳಿಕ ಗುಂಪಿನಲ್ಲಿದ್ದ ಬಾಲಕನೋರ್ವ ಮರದ ತುಂಡೊದನ್ನು ಗುಪ್ತಾಂಗಕ್ಕೆ ತುರುಕಿರುವುದಾಗಿ ತಿಳಿದುಬಂದಿದೆ.

Advertisements

ಶಾಲಾ ಸಿಬ್ಬಂದಿ ಘಟನೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿಯ ಕುಟುಂಬದವರು ಆರೋಪಿಸಿದ್ದಾರೆ. ಅಲ್ಲದೇ, ಘಟನೆಯ ಬಗ್ಗೆ ಶಾಲಾ ಪ್ರಾಂಶುಪಾಲರೊಂದಿಗೆ ಮಾತುಕತೆ ನಡೆಸಲು ಅವಕಾಶ ಕೇಳಿದರೂ ನಿರಾಕರಿಸಲಾಗಿದೆ ಎಂದು ದೂರಿದ್ದಾರೆ.

“ಘಟನೆಯನ್ನು ಯಾರಿಗೂ ಹೇಳದಂತೆ ಶಾಲಾ ಸಹಪಾಠಿಗಳು ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ತಿಳಿಸಿದಲ್ಲಿ ಅದೇ ಶಾಲೆಯಲ್ಲಿ ಓದುತ್ತಿರುವ ತನ್ನ ಸಹೋದರಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ನನ್ನನ್ನು ಬೆದರಿಸಿದ್ದರು”  ಎಂದು 8ನೇ ತರಗತಿ ವಿದ್ಯಾರ್ಥಿ ಮಾಹಿತಿ ನೀಡಿದ್ದಾನೆ.

ಪೊಲೀಸರಿಗೆ ಪೋಷಕರು ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾರ್ಚ್ 13 ರಂದು ತನ್ನ ಸಹಪಾಠಿಯೊಂದಿಗೆ ಜಗಳವಾಡಿದ್ದನು. ಮಾರ್ಚ್ 18ರಂದು ಸಹಪಾಠಿಗಳು ಹಲ್ಲೆ ನಡೆಸಿದ್ದಾರೆ. ಬೆದರಿಕೆ ಹಾಕಿದ್ದರಿಂದ, ಭಯಗೊಂಡಿದ್ದ ಸಂತ್ರಸ್ತ ವಿದ್ಯಾರ್ಥಿ ಮೊದಲು ಘಟನೆಯ ಬಗ್ಗೆ ಯಾರಿಗೂ ಹೇಳಿರಲಿಲಿಲ್ಲ. ಮಾರ್ಚ್ 20ರಂದು ಅವರು ಹೊಟ್ಟೆ ನೋವು ಎಂದು ಹತ್ತಿರದ ವೈದ್ಯರ ಬಳಿಗೆ ಕರೆದೊಯ್ಯಲಾಗಿತ್ತು. ಆದರೆ, ಸಂತ್ರಸ್ತ ವಿದ್ಯಾರ್ಥಿಯ ಪರಿಸ್ಥಿತಿ ಸುಧಾರಿಸದ ಕಾರಣ ಮಾರ್ಚ್ 28ರಂದು ಆಸ್ಪತ್ರೆಗೆ ಕರೆದೊಯ್ದು ಆಪರೇಷನ್ ಮಾಡಬೇಕಾಯಿತು.

‘ಯಾವುದೋ ಅಹಿತಕರ ಘಟನೆಗೆ ಮಗು ಬಲಿಯಾಗಿರಬಹುದು’ ಎಂದು ಆಸ್ಪತ್ರೆಯ ವೈದ್ಯರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 2 ರಂದು ಹುಡುಗನಿಗೆ ಪ್ರಜ್ಞೆ ಬಂದಾಗ, ಪೋಷಕರ ವಿಚಾರಿಸಿದಾಗ ಎಲ್ಲ ಘಟನೆಯನ್ನು ವಿವರಿಸಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸ್ ದೂರು ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ: ಬಿಜೆಪಿ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬಲಿಪಶುವಾಗಿರುವ ವಿದ್ಯಾರ್ಥಿಯ ಗುದದಲ್ಲಿ ಮರದ ಕೋಲನ್ನು ತುರುಕಿದ್ದರ ಪರಿಣಾಮ ತೀವ್ರವಾದ ಗಾಯವಾಗಿದೆ. ಆದ್ದರಿಂದ ಶಸ್ತ್ರಚಿಕಿತ್ಸೆ ನಡೆಸಿರುವುದಾಗಿ ವೈದ್ಯರು ತನ್ನ ವರದಿಯಲ್ಲಿ ತಿಳಿಸಿದ್ದರು.

ವೈದ್ಯರ ವರದಿಯ ಆಧಾರದ ಮೇಲೆ ಪೊಲೀಸರು, ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 323, 341, 34 ಮತ್ತು 377 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯ ಸೆಕ್ಷನ್ 6 ಅನ್ನು ಕೂಡ ಸೇರಿಸಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿಯ ಗುದಕ್ಕೆ ಮರದ ತುಂಡು ತುರುಕಿದ್ದ ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ಬಾಲ ನ್ಯಾಯ ಮಂಡಳಿ (ಜೆಜೆಬಿ) ಮುಂದೆ ಹಾಜರುಪಡಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X