ಒಪ್ಪಿಗೆಯಿಲ್ಲದೆ ಆಸ್ಪತ್ರೆಯಲ್ಲಿ ಫೋಟೋ ತೆಗೆದಿದ್ದಾರೆ, ಬೆಂಬಲ ಮಾತ್ರ ನೀಡಿಲ್ಲ: ಪಿಟಿ ಉಷಾ ವಿರುದ್ಧ ವಿನೇಶ್ ಕಿಡಿ

Date:

Advertisements

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದ ನನ್ನೊಂದಿಗೆ ಚಿತ್ರವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬೇರೆ ಯಾವುದೇ ಸಹಾಯವನ್ನು ಮಾಡಿಲ್ಲ. ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟು, ಕಾಂಗ್ರೆಸ್ ನಾಯಕಿ ವಿನೇಶ್ ಫೋಗಟ್ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಮುಖ್ಯಸ್ಥೆ ಪಿಟಿ ಉಷಾ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆಜಿ ಕುಸ್ತಿ ಪಂದ್ಯದಲ್ಲಿ ಬರೀ 100 ಗ್ರಾಂ ತೂಕ ಹೆಚ್ಚಿದ್ದ ಕಾರಣ ವಿನೇಶ್ ಫೋಗಟ್ ಪಂದ್ಯದಿಂದ ಅನರ್ಹಗೊಂಡಿದ್ದರು. ಕಾನೂನು ಹೋರಾಟ ನಡೆಸಿದರೂ ಬೆಳ್ಳಿ ಪದಕವೂ ದಕ್ಕಿಲ್ಲ. ಒಲಿಂಪಿಕ್ಸ್ ಫೈನಲ್ ತಲುಪಿದ ದೇಶದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವಿನೇಶ್ ಬರಿಗೈಯಲ್ಲಿ ಮರಳಬೇಕಾಯಿತು.

ತನ್ನ ತೂಕ ಇಳಿಸಲು ರಾತ್ರಿಯಿಡೀ ಶ್ರಮ ಪಟ್ಟಿದ್ದ ವಿನೇಶ್ ಫೋಗಟ್ ಡಿಹೈಡ್ರೇಷನ್‌ನಿಂದಾಗಿ (ನಿರ್ಜಲೀಕರಣ) ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಐಒಎ ಮುಖ್ಯಸ್ಥೆ ಪಿಟಿ ಉಷಾ ಅವರು ವಿನೇಶ್ ಫೋಗಟ್‌ ಅವರನ್ನು ಭೇಟಿಯಾಗಿದ್ದರು. ಈ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಎಲ್ಲಾ ಬೆಂಬಲದ ಭರವಸೆಯನ್ನು ನೀಡಿದ್ದರು. ಈ ಚಿತ್ರ ಭಾರೀ ವೈರಲ್ ಆಗಿತ್ತು.

Advertisements

ಇದನ್ನು ಓದಿದ್ದೀರಾ? ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ವಿನೇಶ್ ಪೋಗಟ್, “ಆಸ್ಪತ್ರೆಯ ಹಾಸಿಗೆಯಲ್ಲಿದ್ದೆ, ಹೊರಗೆ ಏನಾಗುತ್ತಿದೆ ಎಂದು ನನಗೆ ತಿಳಿದಿಲ್ಲ. ಜೀವನದ ಅತ್ಯಂತ ಕೆಟ್ಟ ಹಂತಗಳಲ್ಲಿ ಒಂದನ್ನು ಎದುರಿಸುತ್ತಿದ್ದೆ. ಆ ವೇಳೆ ಬಂದು ನನ್ನ ಒಪ್ಪಿಗೆಯಿಲ್ಲದೆ ನನ್ನ ಬಳಿ ನಿಂತು ಫೋಟೋವನ್ನು ತೆಗೆದಿದ್ದಾರೆ. ನನ್ನೊಂದಿಗೆ ಇರುವುದಾಗಿ ಬೆಂಬಲ ಸೂಚಿಸಿ ಪೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾರೆ. ಆದರೆ ಯಾವುದೇ ಬೆಂಬಲ ನೀಡಿಲ್ಲ” ಎಂದು ಹೇಳಿದ್ದಾರೆ.

“ಈ ಘಟನೆಯಿಂದ ಮನನೊಂದಿದ್ದೇನೆ. ನನಗೆ ಅಲ್ಲಿ ಏನು ಬೆಂಬಲ ಸಿಕ್ಕಿತು ಎಂದು ನನಗೆ ತಿಳಿದಿಲ್ಲ. ಪಿಟಿ ಉಷಾ ಮೇಡಂ ನನ್ನನ್ನು ಆಸ್ಪತ್ರೆಯಲ್ಲಿ ಭೇಟಿಯಾದರು, ಒಂದು ಫೋಟೋ ಕ್ಲಿಕ್ ಮಾಡಿದರು, ಹೋದರು. ನೀವು ಹೇಳಿದಂತೆ, ರಾಜಕೀಯದಲ್ಲಿ ಮುಚ್ಚಿದ ಬಾಗಿಲಿನ ಹಿಂದೆ ಬಹಳಷ್ಟು ನಡೆಯುತ್ತದೆ. ಹಾಗೆಯೇ, ಅಲ್ಲಿ (ಪ್ಯಾರಿಸ್‌ನಲ್ಲಿ) ರಾಜಕೀಯ ನಡೆಯಿತು. ಹಾಗಾಗಿಯೇ ನಾನು ಕುಸ್ತಿಯನ್ನು ಬಿಡಬೇಕಾಯಿತು” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X