ತಮಿಳುನಾಡು | ಐಟಿ ದಾಳಿ; ಮೊಟ್ಟೆ ಕೇಂದ್ರದಲ್ಲಿ ಲೆಕ್ಕಪತ್ರವಿಲ್ಲದ ₹32 ಕೋಟಿ ನಗದು ವಶ

Date:

Advertisements

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿಯಲ್ಲಿನ ಮೊಟ್ಟೆ ಕೇಂದ್ರವೊಂದರ ಮೇಲೆ ದಾಳಿ ನಡೆಸಿದ್ದಾರೆ. ಲೆಕ್ಕಪತ್ರವಿಲ್ಲದ ಸುಮಾರು 32 ಕೋಟಿ ನಗದನ್ನು ವಶಪಡಿಸಿಕೊಂಡಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಕೋಳಿ ಫಾರಂನಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ, ಸುಮಾರು 32 ಕೋಟಿ ಲೆಕ್ಕ ಪತ್ರವಿಲ್ಲದ ಹಣ ಮೊಟ್ಟೆ ಕೇಂದ್ರದಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಇಲಾಖೆ ಅಧಿಕಾರಿಗಳು ಮೂರು ಬಾಕ್ಸ್‌ಗಳಲ್ಲಿ ಹಣವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಐಟಿ ಅಧಿಕಾರಿಗಳು ಸೋಮವಾರ ಸಂಜೆ ಪೊಲ್ಲಾಚಿಯ ವೆಂಕಟೇಶ ಕಾಲೋನಿಯಲ್ಲಿರುವ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಶೋಧ ಆರಂಭಿಸಿದ್ದಾರೆ. ಮಂಗಳವಾರ 15 ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಸುಮಾರು 32 ಕೋಟಿ ವಶಪಡಿಸಿಕೊಳ್ಳಲಾಗಿದೆ. ದಾಳಿಯ ನಂತರ, ಬ್ಯಾಂಕ್ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿ ವಶಪಡಿಸಿಕೊಂಡ ಮೊತ್ತವನ್ನು ಎಣಿಸಲಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.

Advertisements

ಈ ಸುದ್ದಿ ಓದಿದ್ದೀರಾ? ವೈಮಾನಿಕ ಕೇಂದ್ರವಾಗಿ ಬೆಂಗಳೂರು ಅಭಿವೃದ್ಧಿ; ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ

ಅಪಾರ ಪ್ರಮಾಣದ ಹಣವನ್ನು ಮತದಾರರಿಗೆ ಹಂಚಲು ಇಡಲಾಗಿದೆಯೇ ಎಂದು ಊಹಿಸಲಾಗಿದೆ. ಐಟಿ ಜತೆಗೆ ಚುನಾವಣಾಧಿಕಾರಿಗಳೂ ತನಿಖೆ ಆರಂಭಿಸಿದ್ದಾರೆ.

“ಪೊಲ್ಲಾಚಿಯ ಸಹೋದರರಾದ ಅರುಲ್ ಮುರುಗನ್ ಮತ್ತು ಸರವಣ ಮುರುಗನ್ ಅವರು ಈ ಕೋಳಿ ಫಾರಂ ಅನ್ನು ನಡೆಸುತ್ತಿದ್ದರು. ಅಲ್ಲದೇ, ಇವರು ರಾಜ್ಯಾದ್ಯಂತ ಹಲವಾರು ಶಾಖೆಗಳನ್ನು ಹೊಂದಿದ್ದಾರೆ” ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X