ವಾರಣಾಸಿ | ಪ್ರಧಾನಿ ಮೋದಿ ವಿರುದ್ಧ ಸ್ಫರ್ಧಿಸಿದ್ದ ಕಾಮೆಡಿಯನ್ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

Date:

Advertisements

ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿ, ಹಲವು ಬಾರಿ ಪರದಾಟ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದ್ದ ಕಾಮೆಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿಯವರ ಧ್ವನಿಯನ್ನು ಅನುಕರಿಸುವ ಮೂಲಕ ದೇಶದಲ್ಲೆಡೆ ಸುದ್ದಿಯಾಗಿದ್ದ ಶ್ಯಾಮ್ ರಂಗೀಲಾ, “ತಾನು ನಾಮಪತ್ರದ ಅರ್ಜಿಯನ್ನು ಪಡೆಯಲು ತೊಂದರೆ ಎದುರಿಸುತ್ತಿದ್ದೇನೆ, ಅಧಿಕಾರಿಗಳು ನಾಮಪತ್ರದ ಅರ್ಜಿಯನ್ನು ಕೊಡುತ್ತಿಲ್ಲ” ಎಂದು ಆರೋಪಿಸಿದ್ದರು.

ಇದು ಬೆಳವಣಿಗೆ ಸುದ್ದಿಯಾಗಿದ್ದ ಬಳಿಕ ನಾಮಪತ್ರವನ್ನು ಸ್ವೀಕರಿಸಿದ್ದರು. ಇದರಿಂದ ಖುಷಿಗೊಂಡಿದ್ದ ಶ್ಯಾಮ್ ರಂಗೀಲಾ ಚುನಾವಣಾಧಿಕಾರಿಯ ಕಚೇರಿಯಿಂದ ಹೊರಬರುತ್ತಿದ್ದಂತೆಯೇ, ನಾಮಪತ್ರ ಸಲ್ಲಿಸಿರುವುದೇ ನಮ್ಮ ವಿಜಯ ಎಂದು ಹೇಳುತ್ತಾ, ವಿಕ್ಟರಿ ಚಿಹ್ನೆಯನ್ನು ಪ್ರದರ್ಶಿಸಿದ್ದರು. ಆದರೆ, ನಾಮಪತ್ರ ಸಲ್ಲಿಸಿ 24 ಗಂಟೆಯೊಳಗೆ ತಿರಸ್ಕರಿಸಲಾಗಿದೆ.

Advertisements

ಈ ಬಗ್ಗೆ ಬೇಸರ ವ್ಯಕ್ತಪಡಿಸಿ 12 ನಿಮಿಷದ ವಿಡಿಯೋ ಹಂಚಿಕೊಂಡಿರುವ ಶ್ಯಾಮ್ ರಂಗೀಲಾ, “ಕೇವಲ 24 ಗಂಟೆಯೊಳಗೆ ನನ್ನ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ನನ್ನನ್ನು ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧಿಸಲು ಬಿಡುವುದಿಲ್ಲ ಎಂಬುದು ಈಗಾಗಲೇ ನಿರ್ಧರಿಸಲಾಗಿದೆ ಎಂದು ಈಗ ಸ್ಪಷ್ಟವಾಗಿದೆ. ಮನಸ್ಸು ಖಂಡಿತವಾಗಿಯೂ ಒಡೆದಿದೆ. ಆದರೆ ಉತ್ಸಾಹವು ಮುರಿದು ಹೋಗಿಲ್ಲ. ನಿಮ್ಮ ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಮಾಧ್ಯಮಗಳು ಮತ್ತು ಹಿತೈಷಿಗಳು ದಯವಿಟ್ಟು ಈಗ ಕರೆ ಮಾಡಬೇಡಿ ಎಂದು ನಾನು ವಿನಂತಿಸುತ್ತೇನೆ. ನನ್ನ ಬಳಿ ಏನೇ ಮಾಹಿತಿ ಇದ್ದರೂ ಅದನ್ನು ಟ್ವೀಟ್ ಮೂಲಕವೇ ಹಂಚಿಕೊಳ್ಳುತ್ತಲೇ ಇರುತ್ತೇನೆ. ಸ್ವಲ್ಪ ಸಮಯದವರೆಗೆ ಮಾತನಾಡಬೇಕು ಎಂದು ನನಗೆ ಅನಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

ವಿಡಿಯೋದಲ್ಲಿ ಭಾವುಕರಾದಂತೆ ಮಾತನಾಡಿರುವ ಶ್ಯಾಮ್ ರಂಗೀಲಾ, “ಯಾಕೆ ನಾಮಪತ್ರ ತಿರಸ್ಕರಿಸಲಾಗಿದೆ ಎಂದು ಕೇಳಿದ್ದಕ್ಕೆ ಚುನಾವಣಾಧಿಕಾರಿಗಳು, ‘ನೀವು ನಾಮಪತ್ರ ಸಲ್ಲಿಸಿದ್ದ ಸಂದರ್ಭದಲ್ಲಿ ಪ್ರಮಾಣ ವಚನ ಮಾಡಿರಲಿಲ್ಲ’ ಎಂದು ತಿಳಿಸಿದ್ದಾರೆ. ಒಂದು ವೇಳೆ ನಾಮಪತ್ರ ತಿರಸ್ಕರಿಸಬೇಕೆಂದು ಅದಾಗಲೇ ನಿರ್ಧರಿಸಿದ್ದಿದ್ದರೆ ಸ್ವೀಕರಿಸುವ ನಾಟಕ ಯಾಕೆ ಬೇಕಿತ್ತು” ಎಂದು ಚುನಾವಣಾಧಿಕಾರಿಯ ವಿರುದ್ಧ ಆಕ್ರೋಶ ಹೊರಹಾಕಿ, ಪ್ರಶ್ನಿಸಿದ್ದಾರೆ.

“ಮೋದೀಜಿಯವರು ಕಣ್ಣೀರು ಹಾಕಿದಂತೆ ನಟಿಸಬಹುದು. ಆದರೆ, ನಿಜ ಹೇಳಬೇಕೆಂದರೆ ನನಗೆ ಕಣ್ಣೀರು ಬರುತ್ತಿದೆ. ಆದರೆ, ನಾನು ಕಣ್ಣೀರು ಹಾಕಲು ಬಯಸುವುದಿಲ್ಲ. ಪ್ರಜಾಪ್ರಭುತ್ವವನ್ನು ಕೊಲ್ಲುವಂತಹ ಪರಿಸ್ಥಿತಿ ನಿರ್ಮಿಸಲಾಗುತ್ತಿದೆ. ಆ ದೃಶ್ಯವನ್ನು ನಾನಿಂದು ವಾರಣಾಸಿಯಲ್ಲಿ ಕಣ್ಣಾರೆ ಕಂಡೆ. ಆದರೆ ಇನ್ನೂ ಹತ್ಯೆಯಾಗಿಲ್ಲ. ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲು ದೇಶದ ಜನರ ಬಿಡುವುದಿಲ್ಲ ಎಂಬ ಭರವಸೆ ನನಗಿದೆ” ಎಂದು ಬೇಸರದಿಂದ ಶ್ಯಾಮ್ ರಂಗೀಲಾ ಹೇಳಿಕೆ ನೀಡಿದ್ದಾರೆ.

WhatsApp Image 2024 05 15 at 8.53.59 PM
ತಿರಸ್ಕೃತಗೊಂಡಿರುವ ಶ್ಯಾಮ್ ರಂಗೀಲಾ ನಾಮಪತ್ರ

ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತಗೊಂಡಿರುವುದರಿಂದ ಹಲವರು ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ. “ಶ್ಯಾಮ್ ರಂಗೀಲಾಗೆ ಭಾರೀ ಜನಬೆಂಬಲ ಸಿಕ್ಕಿತ್ತು. ಮೋದಿಗೆ ಸೋಲಿನ ಭಯ ಕಾಡಿದೆ. ಈ ಬಾರಿ ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶ್ಯಾಮ್ ರಂಗೀಲಾ ಹೆಚ್ಚಿನ ಮತ ಪಡೆಯಲಿದ್ದಾರೆ. ಇದರಿಂದ ಮೋದಿ ಅಂತರ ಗಣನೀಯವಾಗಿ ಕುಸಿಯಲಿದೆ. ಯುವ ಅಭ್ಯರ್ಥಿಯ ನಾಮಪತ್ರವನ್ನೇ ತಿರಸ್ಕರಿಸಿದ್ದಾರೆ” ಎಂದು ಪೋಸ್ಟ್ ಹಾಕುತ್ತಿದ್ದಾರೆ.

ಪ್ರಧಾನಿ ಮೋದಿ ಹೊರತುಪಡಿಸಿ ಕಾಂಗ್ರೆಸ್-ಎಸ್‌ಪಿ ಮೈತ್ರಿಕೂಟದ ಇಂಡಿಯಾ ಮೈತ್ರಿಕೂಟದಿಂದ ಅಜಯ್ ರೈ ಮತ್ತು ಬಿಎಸ್‌ಪಿಯ ಅತಹರ್ ಜಮಾಲ್ ಲಾರಿ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ವಾರಣಾಸಿಯಲ್ಲಿ ಜೂ.1ರಂದು 7ನೇ ಮತ್ತು ಅಂತಿಮ ಹಂತದಲ್ಲಿ ಮತದಾನ ನಡೆಯಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X