ಒಡಿಶಾ ರೈಲು ದುರಂತ : ಘಟನಾ ಸ್ಥಳದ ಪಕ್ಕದಲ್ಲಿರುವುದು ಮಸೀದಿಯಲ್ಲ, ಮಂದಿರ

Date:

Advertisements

ಒಡಿಶಾದ ಬಾಲಾಸೋರ್‌ ಬಳಿ ನಡೆದ ರೈಲು ದುರಂತದಲ್ಲಿ 288 ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ʼಎಲೆಕ್ಟ್ರಾನಿಕ್‌ ಇಂಟರ್‌ಲಾಕಿಂಗ್‌ʼ ಮತ್ತು ʼಪಾಯಿಂಟ್‌ ಮಷಿನ್‌ʼಗಳಲ್ಲಿನ ಬದಲಾವಣೆಯಿಂದಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಕೇಂದ್ರ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌ ಮಾಹಿತಿ ನೀಡಿದ್ದಾರೆ. ಆದರೆ, ಕೆಲವು ಬಲಪಂಥೀಯರು ಈ ರೈಲು ದುರಂತಕ್ಕೆ ಕೋಮುವಾದದ ಬಣ್ಣ ಬಳಿಯುವ ವಿಫಲ ಪ್ರಯತ್ನವನ್ನು ಕೂಡ ನಡೆಸಿದ್ದಾರೆ.

ಅಪಘಾತ ಸಂಭವಿಸಿರುವ ಸ್ಥಳದ ಫೋಟೋಗಳು ಶುಕ್ರವಾರ ರಾತ್ರಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದ್ದವು. ಈ ಪೈಕಿ ಅಪಘಾತದ ಸ್ಥಳದಿಂದ ಕೂಗಳತೆ ದೂರದಲ್ಲಿರುವ ಕಟ್ಟಡವೊಂದರ ಚಿತ್ರ ಭಾರೀ ಚರ್ಚೆಗೆ ಕಾರಣವಾಗಿತ್ತು.

ಬಹುಚರ್ಚಿತ ಕಟ್ಟಡದ ಫೋಟೋ ಹಂಚಿಕೊಂಡು ವಿವಾದ್ಮಾತಕ ಟ್ವೀಟ್‌ ಮಾಡಿದ್ದ ಬಿಜೆಪಿ ಬೆಂಬಲಿಗ ವೀರೇಂದ್ರ ತಿವಾರಿ, “ಅಪಘಾತ ಸಂಭವಿಸಿರುವುದು ಶುಕ್ರವಾರ, ರೈಲ್ವೆ ಹಳಿಯ ಪಕ್ಕದಲ್ಲೇ ಮಸೀದಿ ಇದೆ. ʼಜಿಹಾದ್‌ʼ ಮಾಡಲಿಕ್ಕಾಗಿಯೇ ಹೆದ್ದಾರಿಗಳು ಮತ್ತು ರೈಲ್ವೆ ಹಳಿಗಳ ಪಕ್ಕದಲ್ಲಿ ಮುಸಲ್ಮಾನರ ಕಾಲೋನಿಗಳು ಹುಟ್ಟಿಕೊಳ್ಳುತ್ತಿವೆ” ಎಂದಿದ್ದರು.

Virendra tiwari

ಹೀಗೆ ಹಲವರು ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯರು ಘಟನೆಗೆ ಮುಸ್ಲಿಂ ಸಮುದಾಯವೇ ನೇರ ಹೊಣೆ. ಪಕ್ಕದ ಮಸೀದಿಯಲ್ಲೇ ಪ್ರಯೋಗ ನಡೆದಿದೆ ಎಂದೆಲ್ಲ ಆಧಾರ ರಹಿತವಾಗಿ ಫುಂಕಾನು ಫುಂಕ ಆರೋಪಗಳನ್ನು ಮಾಡಿದ್ದರು.

dev 1

ಆದರೆ, ಸುಳ್ಳು ಸುದ್ದಿಗಳ ಹಿಂದೆ ಬಿದ್ದು ಸತ್ಯಾಸತ್ಯತೆಯನ್ನು ಬಹಿರಂಗ ಪಡಿಸುವ ʼಆಲ್ಟ್‌ ನ್ಯೂಸ್‌ʼ ಸಂಸ್ಥೆ. ಬಲಪಂಥೀಯರು ಹಂಚಿಕೊಳ್ಳುತ್ತಿರುವ ಫೋಟೋದ ಹಿಂದೆ ಬಿದ್ದು ಅಸಲಿ ಅಂಶಗಳನ್ನು ಜನರ ಮುಂದಿಟ್ಟಿದೆ. ಅಪಘಾತವಾದ ಸ್ಥಳದ ಹತ್ತಿರದಲ್ಲಿರುವುದು ಮಸೀದಿಯಲ್ಲ, ಬದಲಿಗೆ ನಿರ್ಮಾಣ ಹಂತದಲ್ಲಿರುವ ಇಸ್ಕಾನ್‌ ಮಂದಿರ ಎಂಬುದು ʼಆಲ್ಟ್‌ ನ್ಯೂಸ್‌ʼನ ತನಿಖಾ ವರದಿಯಿಂದ ಸ್ಪಷ್ಟವಾಗಿದೆ. ಮಂದಿರದ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಂಡಿರುವ ಸಂಸ್ಥೆಯ ಮುಖ್ಯಸ್ಥ ಮೊಹಮ್ಮದ್‌ ಜುಬೇರ್‌ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು....

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

Download Eedina App Android / iOS

X