ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ಪರಿಶೀಲನೆ: ಕಾಂಗ್ರೆಸ್ ಆಕ್ರೋಶ

Date:

Advertisements

ವಿಪಕ್ಷ ನಾಯಕರನ್ನೇ ಚುನಾವಣಾ ಅಧಿಕಾರಿಗಳು ನೇರವಾಗಿ ಗುರಿ ಮಾಡುತ್ತಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ಅನ್ನು ಬಿಹಾರದ ಸಮಸ್ತಿಪುರದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ನಾಯಕರನ್ನು ಪರಿಶೀಲನೆ ನಡೆಸದೆ ಬಿಟ್ಟುಬಿಡುತ್ತಿರುವುದಕ್ಕೆ ವಿಪಕ್ಷ ನಾಯಕರು ವಾಗ್ಧಾಳಿ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭಾ ಚುನಾಣೆಯ ಪ್ರಯುಕ್ತ ಬಿಹಾರದ ಸಮಸ್ತಿಪುರ ಹಾಗೂ ಮುಜಾಫರ್‌ಫುರ ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರದ ಕಾಂಗ್ರೆಸ್ ನಾಯಕ ರಾಜೇಶ್ ರಾಥೋರ್‌ “ ಕಾಂಗ್ರೆಸ್‌ ನಾಯಕರ ಚಾಪರ್‌ಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸಲಾಗುತ್ತಿದೆಯೆ ಅಥವಾ ಎನ್‌ಡಿಎ ಪ್ರಮುಖ ನಾಯಕರ ಚಾಪರ್‌ಗಳನ್ನು ಇದೇ ರೀತಿ ಪರಿಶೀಲನೆ ನಡೆಸಲಾಗುತ್ತಿದೆಯೆ ಎಂಬುದನ್ನು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

“ಚುನಾವಣಾ ಆಯೋಗವು ಇಂತಹ ದಾಖಲೆಗಳನ್ನು ಸಾರ್ವಜನಿಕಗೊಳಿಸಬೇಕು. ಇಲ್ಲದಿದ್ದರೆ ಕೇವಲ ವಿಪಕ್ಷ ನಾಯಕರನ್ನು ಮಾತ್ರ ಗುರಿಪಡಿಸಿ, ಎನ್‌ಡಿಎ ನಾಯಕರನ್ನು ಆರಾಮಾಗಿ ಹೋಗಲು ಬಿಡಲಾಗುತ್ತಿದೆ ಎಂದು ಅರ್ಥೈಸಲಾಗುತ್ತದೆ” ಎಂದು ಹೇಳಿದರು.

ಖರ್ಗೆಯವರ ಹೆಲಿಪಾಪ್ಟರ್‌ಅನ್ನು ಬಿಹಾರದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸುತ್ತಿರುವ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

ಇತ್ತೀಚಿಗೆ ಕೇರಳದಲ್ಲಿ ರಾಹುಲ್‌ ಗಾಂಧಿ ಸೇರಿ ವಿವಿಧ ರಾಜ್ಯಗಳಲ್ಲಿ ವಿಪಕ್ಷ ನಾಯಕರ ಹೆಲಿಕಾಪ್ಟರ್‌ಗಳನ್ನು ಪರಿಶೀಲನೆಗೊಳಪಡಿಸಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಚುನಾವಣಾ ಪ್ರಚಾರಕ್ಕಾಗಿ ತೆರಳುವ ಮಲ್ಲಿಕಾರ್ಜುನ ಖರ್ಗೆ , ರಾಹುಲ್ ಗಾಂಧಿ ಮತ್ತಿತರ ವಿಪಕ್ಷ ನಾಯಕರುಗಳ ಹೆಲಿಕಾಪ್ಟರ್ ಗಳನ್ನು ಚುನಾವಣಾಧಿಕಾರಿಗಳು ಹೆಲಿಪಾಡ್ ನಲ್ಲಿ ಪರಿಶೀಲಿಸುತ್ತಾರೆ.

    ಆಡಳಿತ ಪಕ್ಷದ ಮೋದಿ , ಶಾ , ನಡ್ಡಾ , ಸಿಂಗ್ ಪ್ರಯಾಣಿಸುವ ಹೆಲಿಕಾಪ್ಟರ್ ಗಳನ್ನು ಚುನಾವಣಾಧಿಕಾರಿಗಳು ಪರಿಶೀಲಿಸುತ್ತಾರೆಯೇ ?
    ಪರಿಶೀಲಿಸುತ್ತಿಲ್ಲವಾದರೆ ಯಾಕೆ ? ಏನು ಕಾರಣ ?

    ತಿಳಿಯುವ ಹಕ್ಕು ಭಾರತೀಯರಾದ‌ ನಮ್ಮೆಲ್ಲರಿಗಿದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X