ಇವಿಎಂ ಹ್ಯಾಕಿಂಗ್‌ ಕುರಿತು ಗಂಭೀರ ಪರಿಗಣನೆ ಅಗತ್ಯ: ರಣದೀಪ್ ಸುರ್ಜೇವಾಲ

Date:

Advertisements
ಇವಿಎಂ ಹ್ಯಾಕಿಂಗ್ ಕುರಿತು ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ನೀಡಿರುವ ಹೇಳಿಕೆಯ ಕುರಿತು ಕಾಂಗ್ರೆಸ್ ಮತ್ತೊಮ್ಮೆ ಆತಂಕ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗದ ಮೌನವನ್ನು ಪ್ರಶ್ನಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಗಮನಕ್ಕೆ ತೆಗೆದುಕೊಂಡು, ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆದ ರಣದೀಪ್ ಸುರ್ಜೇವಾಲ, “ವಿದ್ಯುನ್ಮಾನ ಮತ ಯಂತ್ರಗಳ ಹ್ಯಾಕಿಂಗ್ ಹಾಗೂ ಅವುಗಳ ದೌರ್ಬಲ್ಯತೆ ಕುರಿತು ಗಬ್ಬಾರ್ಡ್ ಸಾರ್ವಜನಿಕವಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರ ಯತ್ನ ಮಾಮೂಲು ಸಂಗತಿಯೇ ಗೃಹಸಚಿವರೇ?

Advertisements

ವಾಸ್ತವವಾಗಿ, ಚಲಾವಣೆಗೊಂಡ ಮತಗಳ ಫಲಿತಾಂಶಗಳನ್ನು ತಿರುಚಲು ವಿದ್ಯುನ್ಮಾನ ಮತ ಯಂತ್ರಗಳನ್ನು ಸುಲಭವಾಗಿ ದುರ್ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪ್ರಶ್ನೆಯೆಂದರೆ, ಈ ಹೇಳಿಕೆ ಕುರಿತು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಭಾರತೀಯ ಚುನಾವಣಾ ಆಯೋಗವೇಕೆ ಮೌನವಾಗಿವೆ? ತುಳಸಿ ಗಬ್ಬಾರ್ಡ್ ನೀಡಿರುವ ಹೇಳಿಕೆಗೆ ಪ್ರತ್ಯುತ್ತರ ನೀಡಲು ಭಾರತೀಯ ಚುನಾವಣಾ ಆಯೋಗವೇಕೆ ಮೂಲಗಳ ಆಧಾರಿತ ಕತೆಗಳನ್ನು ಬಿತ್ತುತ್ತಿದೆ? ಪ್ರಧಾನಿ, ಎನ್‌ಡಿಎ ಸರಕಾರ ಹಾಗೂ ಬಿಜೆಪಿಯೇಕೆ ಈ ಕುರಿತು ಮೌನ ಧರಿಸಿವೆ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X