ಗುಜರಾತ್ | ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ವಿಧಾನಸಭೆಯಿಂದ ಉಚ್ಚಾಟನೆ

Date:

Advertisements

ಶುಕ್ರವಾರ ಮುಂಗಾರು ಅಧಿವೇಶನದ ಕೊನೆಯ ದಿನದ ಚರ್ಚೆಯ ವೇಳೆ ಗದ್ದಲ ಸೃಷ್ಟಿಸಿದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುಜರಾತ್ ವಿಧಾನಸಭೆಯಿಂದ ಉಚ್ಚಾಟಿಸಲಾಗಿದೆ.

ಸದನದ ಬಾವಿಗೆ ನುಗ್ಗಿದ ಕಾರಣಕ್ಕೆ ಸ್ಪೀಕರ್ ಶಂಕರ್ ಚೌಧರಿ ನಿರ್ದೇಶನದ ಮೇರೆಗೆ ಜಿಗ್ನೇಶ್ ಮೇವಾನಿ ಅವರನ್ನು ರಾಜ್ಯ ವಿಧಾನಸಭೆಯಿಂದ ಉಚ್ಚಾಟಿಸಲಾಗಿದೆ.

ಸ್ಪೀಕರ್ ಉಚ್ಚಾಟನೆಗೆ ಆದೇಶಿಸಿದ ನಂತರ ಮೇವಾನಿ ಅವರನ್ನು ಸಾರ್ಜೆಂಟ್‌ಗಳು ವಿಧಾನಸಭೆಯಿಂದ ಹೊರಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

Advertisements

ಇದನ್ನು ಓದಿದ್ದೀರಾ? ಗುಜರಾತ್ | 24 ಗಂಟೆಗಳಲ್ಲಿ ನಾಲ್ಕು ದಲಿತ ದೌರ್ಜನ್ಯ ಪ್ರಕರಣ; ಇದು ಅಮೃತಕಾಲವೇ? ಎಂದ ಜಿಗ್ನೇಶ್ ಮೇವಾನಿ

ಗುಜರಾತ್ ಪೊಲೀಸರಿಂದ ಮಾದಕ ದ್ರವ್ಯ ವಶಪಡಿಸಿಕೊಳ್ಳುವಿಕೆಯ ಚರ್ಚೆಯ ಸಂದರ್ಭದಲ್ಲಿ, ಮೇವಾನಿ ಎದ್ದುನಿಂತು ಸದನದ ಬಾವಿಗೆ ಇಳಿಯಲು ಪ್ರಾರಂಭಿಸಿದರು. ಅತ್ಯಾಚಾರದಂತಹ ಇತರ ‘ಜ್ವಲಂತ’ ವಿಷಯಗಳ ಬಗ್ಗೆ ಚರ್ಚೆ ಮಾಡುವಂತೆ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದರು.

ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ಅವಘಡ, ಮೋರ್ಬಿ ಸೇತುವೆ ಕುಸಿತ ಮತ್ತು ವಡೋದರಾ ದೋಣಿ ಮುಳುಗಿದ ಘಟನೆಯಂತಹ ದುರಂತಗಳ ಕುರಿತು ನೇರ ದೂರದರ್ಶನದಲ್ಲಿ ಚರ್ಚೆ ನಡೆಸಲು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಅವರಿಗೆ ಮೇವಾನಿ ಹೇಳಿದರು.

ಜಿಗ್ನೇಶ್ ಮೇವಾನಿ ಬಾವಿಗಳಿಯುತ್ತಿದ್ದಂತೆ ಸಜ್ಜನಿಕೆ ಕಾಪಾಡುವಂತೆ ಸಭಾಪತಿಗಳು ತಿಳಿಸಿದ್ದು ಬಳಿಕ ಉಚ್ಚಾಟನೆ ಮಾಡಿದರು. “ಕಾಂಗ್ರೆಸ್ ಶಾಸಕರು ಇಂತಹ ಕೃತ್ಯಗಳ ಮೂಲಕ ಸಂವಿಧಾನವನ್ನು ಅಗೌರವಿಸಿದ್ದಾರೆ” ಎಂದು ಹೇಳಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X