105 ಕೋಟಿ ರೂ. ತೆರಿಗೆ ಬಾಕಿ ಉಳಿಕೆ ಪ್ರಕರಣ: ದೆಹಲಿ ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್

Date:

Advertisements

ಬಾಕಿ ಉಳಿಸಿಕೊಂಡಿರುವ 105 ಕೋಟಿ ರೂ. ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಆದಾಯ ಇಲಾಖೆ ಮೇಲ್ಮನವಿ ಪ್ರಾಧಿಕಾರದ ಆದೇಶದ ವಿರುದ್ಧ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ.

ಇಂದು ವಿಚಾರಣೆಗೆ ಕೋರ್ಟ್ ಅನುಮತಿಸಿದ ನಂತರ ಪ್ರಕರಣವನ್ನು ಉಸ್ತುವಾರಿ ಮುಖ್ಯ ನ್ಯಾಯಾಧೀಶ ಮನ್ಮೋಹನ್ ಹಾಗೂ ನ್ಯಾಯಧೀಶ ತುಷಾರ್ ರಾವ್ ಗೆಡೆಲಾ ಅವರ ಪೀಠ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಹಿರಿಯ ನ್ಯಾಯವಾದಿ ವಿವೇಕ್ ತಂಕಾ ಈ ವಿಚಾರಣೆಯ ಬಗ್ಗೆ ಮಾಹಿತಿ ನೀಡಿದರು.

Advertisements

ರದ್ದುಗೊಂಡಿರುವ ಕಾಂಗ್ರೆಸ್ ಖಾತೆಗಳ ಬಗ್ಗೆ ತಡೆ ನೀಡಲು ಕಳೆದ ವಾರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರ ನಿರಾಕರಿಸಿತ್ತು. ಚುನಾವಣಾ ಸಂದರ್ಭದಲ್ಲಿ ಇದು ಮುಖ್ಯವಾಗಿದೆ. ನಮ್ಮ ಬಳಿ ಹಣವಿಲ್ಲದಿದ್ದರೆ ಹೇಗೆ ಹೋರಾಟ ನಡೆಸುವುದು? ಐಟಿಎಟಿ ನಮ್ಮನ್ನು ಸಂರಕ್ಷಿಸುತ್ತದೆ ಆದರೆ ಈಗ ಅದು ಕೂಡ ಇಲ್ಲವಾಗಿದೆ” ಎಂದು ತಂಕಾ ಕೋರ್ಟ್ಗೆ ಮನವರಿಕೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್‌ಬಿಐ ಏಕೆ ಹಿಂಜರಿಯುತ್ತಿದೆ?

ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಾಲಯ ವಿಚಾರಣೆ ದಿನಾಂಕವನ್ನು ತಿಳಿಸುವುದಾಗಿ ಹೇಳಿತು.

2018-19ರ ಸಾಲಿನ 105 ಕೋಟಿ ತೆರಿಗೆ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ಗೆ ನೋಟಿಸ್ ಜಾರಿಗೊಳಿಸಿದೆ.

ಮಾರ್ಚ್‌ 8ರಂದು ನೀಡಿರುವ ಆದೇಶದಲ್ಲಿ ಕಾಂಗ್ರೆಸ್ ಪ್ರತಿಪಾದಿಸಿದ ಆದಾಯ ತೆರಿಗೆ ವಿನಾಯಿತಿಯನ್ನು ನಿರಾಕರಿಸುವಲ್ಲಿ ಐಟಿ ಅಧಿಕಾರಿಗಳು ಯಾವುದೇ ತಪ್ಪು ಮಾಡಿಲ್ಲ ಎಂದು ಐಟಿಎಟಿ ತೀರ್ಪು ನೀಡಿದೆ. ಜುಲೈ 2021 ರಲ್ಲಿ ಐಟಿ ಅಧಿಕಾರಿಗಳು ಕಾಂಗ್ರೆಸ್‌ನ ಶೂನ್ಯ ಆದಾಯದ ಘೋಷಣೆಯನ್ನು ತಿರಸ್ಕರಿಸಿದ್ದರು ಮತ್ತು ತೆರಿಗೆಯಾಗಿ 105 ಕೋಟಿ ರೂ. ನೀಡಬೇಕು ಎಂದು ತಿಳಿಸಿದ್ದರು.

ನಿಗದಿತ ಅವಧಿಯನ್ನು ಮೀರಿ ರಿಟರ್ನ್ ಸಲ್ಲಿಸಲಾಗಿದೆ ಮತ್ತು ಪಕ್ಷವು ವಿವಿಧ ವ್ಯಕ್ತಿಗಳಿಂದ 14,49,000 ಕೋಟಿ “ದೇಣಿಗೆ” ಪಡೆದಿದೆ. ಪ್ರತಿಯೊಂದು ದೇಣಿಗೆ 2,000 ರೂ. ಗಿಂತ ಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕಾಗಿ ತೆರಿಗೆ ಹಣ ನೀಡಬೇಕು ಎಂದು ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X