ದೆಹಲಿ ವಿವಿ ಅಧೀನದ ಕಾಲೇಜಿಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ಆಕ್ರೋಶ

Date:

Advertisements

ದೆಹಲಿ ವಿವಿಯ ಅಧೀನದ ಕಾಲೇಜಿಗೆ ವಿನಾಯಕ ದಾಮೋದರ್ ಸಾವರ್ಕರ್ ಹೆಸರನ್ನು ನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ʼಬ್ರಿಟಿಷರ ಬಳಿ ಕ್ಷಮಾಪಣೆಗೆ ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ವೈಭವೀಕರಿಸುತ್ತಿದೆʼ ಎಂದು ದೆಹಲಿ ವಿವಿಯ ಅಧೀನದ ನಜಾಫ್ ಗಢದ ಕಾಲೇಜಿಗೆ ಸಾವರ್ಕರ್ ಹೆಸರನ್ನು ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.

ಈ ಕುರಿತು ರಾಜ್ಯಸಭಾ ಸಂಸದ ನಾಸೀರ್ ಹುಸೇನ್ ಮಾತನಾಡಿದ್ದು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ಲಕ್ಷಿಸಿ, ಬ್ರಿಟಿಷರೊಂದಿಗೆ ಸಹಕರಿಸಿದಾತನನ್ನು ಬಿಜೆಪಿ ಸಮರ್ಥಿಸುತ್ತಿದೆ. ಅನೇಕ ಜನರು ದೇಶಕ್ಕಾಗಿ ಅಪಾರ ಕೊಡುಗೆ ನೀಡಿದ್ದಾರೆ. ಬ್ರಿಟಿಷರಿಗೆ ಕ್ಷಮಾಪಣಾ ಅರ್ಜಿಗಳನ್ನು ಬರೆದು ಅವರಿಂದ ಪಿಂಚಣಿ ಸ್ವೀಕರಿಸಿದವರನ್ನು ಬಿಜೆಪಿ ಸಮರ್ಥಿಸುತ್ತಿದೆ ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಡಿಸೆಂಬರ್ 26ರಂದು ನಿಧನರಾದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ಹೊಸ ಕಾಲೇಜಿಗೆ ಇಡಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿದೆ. ಈ ಕುರಿತು ಎನ್ ಎಸ್ ಯುಐ ರಾಷ್ಟ್ರೀಯ ಅಧ್ಯಕ್ಷರಾದ ವರುಣ್ ಚೌಧರಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ಕಾಲೇಜಿಗೆ ಮನಮೋಹನ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿದ್ದಾರೆ.

ಆತ್ಮೀಯ ನರೇಂದ್ರ ಮೋದಿ ಜೀ, ನೀವು ಸಾವರ್ಕರ್ ಅವರ ಹೆಸರಿನಲ್ಲಿ ಕಾಲೇಜಿಗೆ ಶೀಲಾನ್ಯಾಸ ನೆರವೇರಿಸುವಾಗ, ಹೊಸ ಕಾಲೇಜಿಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ಇಡಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸುತ್ತದೆ. ಅವರು ಹಲವಾರು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರು ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯ್ದೆಯನ್ನು ತಂದರು. ಕೇಂದ್ರೀಯ ವಿಶ್ವವಿದ್ಯಾಲಯಕ್ಕೂ ಅವರ ಹೆಸರನ್ನು ಇಡಬೇಕುʼ ಎಂದು ವರುಣ್ ಚೌಧರಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X