ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

Date:

ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಹರಿಯಾಣದ ರೋಹ್ಟಕ್‌ನಲ್ಲಿ ನಡೆದಿದೆ. ಮೃತ ಮಹಿಳೆ ತಮ್ಮ ಕಾರ್ಯಕರ್ತೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

- Advertisement -

ರೋಹ್ಟಕ್‌ನ ಸಂಪ್ಲಾ ಬಸ್‌ ನಿಲ್ದಾಣದ ಬಳಿ ದೊಡ್ಡ ನೀಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ಸಂಪ್ಲಾ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಎಸ್‌ಎಫ್‌ಎಲ್ ತಂಡವು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತೆಯ ವಯಸ್ಸು 20 ರಿಂದ 22 ವರ್ಷವಿರಬಹುದು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಯುವತಿಯನ್ನು ಕೊಲೆ ಮಾಡಿ ಆಕೆಯ ಶವವನ್ನು ರಸ್ತೆಗೆ ಎಸೆದು ಹೋಗಿರುವ ಸಾಧ್ಯತೆ ಇದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆಕೆಯ ಗುರುತನ್ನು ಗುರುತಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಸಂಪ್ಲಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಬಿಜೇಂದ್ರ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕ ಭರತ್ ಭೂಷಣ್ ಬಾತ್ರಾ ಅವರು ಸಂತ್ರಸ್ತೆಯು ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದಾರೆ. ಆಕೆಯ ಹೆಸರು ಹಿಮಾನಿ ನರ್ವಾಲ್ ಎಂದು ಹೇಳಿದ್ದಾರೆ. ಆಕೆ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಸಕ್ರಿಯವಾಗಿದ್ದರು. ಹರಿಯಾಣ ಚುನಾವಣೆಯಲ್ಲಿ ನರ್ವಾಲ್ ಭೂಪಿಂದರ್ ಹೂಡಾ ಮತ್ತು ದೀಪಿಂದರ್ ಹೂಡಾ ಅವರ ಪರಿವಾಗಿ ಪ್ರಚಾರ ಮಾಡಿದ್ದರು ಎಂದು ಶಾಸಕ ಬಾತ್ರಾ ಹೇಳಿದ್ದಾರೆ.

ಯುವತಿ ಕೊಲೆಯನ್ನು ಕಾಂಗ್ರೆಸ್ ಹರಿಯಾಣ ಅಧ್ಯಕ್ಷ ಭೂಪಿಂದರ್ ಸಿಂಗ್ ಹೂಡಾ ತೀವ್ರವಾಗಿ ಖಂಡಿಸಿದ್ದಾರೆ. “ರೋಹ್ಟಕ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಬರ್ಬರ ಹತ್ಯೆಯ ಸುದ್ದಿ ಅತ್ಯಂತ ದುಃಖಕರ ಮತ್ತು ಆಘಾತಕಾರಿಯಾಗಿದೆ. ಆಕೆಯ ಆತ್ಮಕ್ಕೆ ಶಾಂತಿ ದೊರೆಯಲಿ. ಆಕೆಯ ಕುಟುಂಬದ ಸದಸ್ಯರಿಗೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

“ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಕಪ್ಪು ಚುಕ್ಕೆಯಾಗಿದೆ. ಘಟನೆಯ ಬಗ್ಗೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...