ಜಾತಿ ಗಣತಿ ವಿರೋಧಿಸಿ ಖರ್ಗೆಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ

Date:

Advertisements

ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಜಾತಿ ಗಣತಿಯನ್ನು ವಿರೋಧಿಸಿ ಮಾ.19ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

“ಜಾತಿ ಭಾರತದ ಸಮಾಜದ ವಾಸ್ತವವಾದರೂ, ಕಾಂಗ್ರೆಸ್ ಇದನ್ನು ಕಾರ್ಯಗತಗೊಳಿಸುವುದಾಗಲಿ ಅಥವಾ ಅನುಮೋದಿಸುವುದಾಗಲಿ ಮಾಡಿಲ್ಲ. ಪ್ರದೇಶ, ಧರ್ಮ, ಜಾತಿ ಹಾಗೂ ಜನಾಂಗೀಯತೆ ಹೊಂದಿರುವ ಶ್ರೀಮಂತ ವೈವಿದ್ಯತೆಯ ಪ್ರಜಾಸತ್ತಾತ್ಮಕ ಸಮಾಜದಲ್ಲಿ ಇದು ಹಾನಿಕರವಾಗಿದೆ” ಎಂದು ಪತ್ರದಲ್ಲಿ ಆನಂದ್‌ ಶರ್ಮಾ ತಿಳಿಸಿದ್ದಾರೆ.

ನನ್ನ ಪರಿಗಣೆಯ ನೋಟದಲ್ಲಿ ಜಾತಿ ಗಣತಿಯು ನಿರುದ್ಯೋಗ ಅಥವಾ ಚಾಲ್ತಿಯಲ್ಲಿರುವ ಅಸಮಾನತೆಗಳಿಗೆ ಔಷಧ ಅಥವಾ ಪರಿಹಾರವಲ್ಲ. ಜಾತಿ ಆಧಾರಿತ ನಮ್ಮ ದೇಶದಲ್ಲಿ ಜಾತಿಯನ್ನು ಪ್ರತಿಷ್ಠಾಪಿಸಿದರೆ ಸಮಸ್ಯೆಗಳಾಗುತ್ತವೆ. ಸಂಸತ್ತು ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಜಾತಿ ಗಣತಿಯನ್ನು ಅನುಷ್ಠಾನಗೊಳಿಸಲು ಹೊರಟರೆ ನಮಗೆ ಸಮಸ್ಯೆಗಳುಂಟಾಗುತ್ತವೆ. ದೇಶ ವಿಭಜನೆಯಾಗುವುದನ್ನು ನೋಡಿಕೊಂಡು ಕಾಂಗ್ರೆಸ್ ಕುಳಿತುಕೊಳ್ಳಬಾರದು ಎಂದು ಆನಂದ್‌ ಶರ್ಮಾ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

Advertisements

1931ರ ಆಂಗ್ಲರ ಆಡಳಿತದ ಅವಧಿಯಲ್ಲಿ ಕೊನೆಯ ಬಾರಿಗೆ ಜಾತಿ ಗಣತಿಯನ್ನು ನಡೆಸಲಾಯಿತು. ಸ್ವಾತಂತ್ರ ನಂತರ ಕೇಂದ್ರ ಸರ್ಕಾರವು ರಾಜ್ಯಗಳಿಂದ ಸಂಗ್ರಹಿಸಿದ ಮಾಹಿತಿಯಿಂದ ತನ್ನ ಪ್ರಜ್ಞಾಪೂರ್ವಕ ನೀತಿಯ ನಿರ್ಧಾರದಿಂದ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳನ್ನು ಹೊರತುಪಡಿಸಿ ಜಾತಿ ಗಣತಿಯನ್ನು ಮಾಡದಿರಲು ನಿರ್ಧರಿಸಿತು. ಸ್ವಾತಂತ್ರ ನಂತರ ಎಲ್ಲ ಜಾತಿ ಗಣತಿ ಆಯುಕ್ತರು ಹೆಚ್ಚು ದಾಖಲಿಸುವಿಕೆ, ನಕಲೀಕರಣಗೊಳಿಸುವುದು, ಖಚಿತತೆ ಮತ್ತು ಪ್ರಾಮಾಣಿಕತೆ ಅಂಕಿಅಂಶಗಳ ಕೊರತೆಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಜಾತಿ ಗಣತಿಗೆ ಅಸಮ್ಮತಿ ವ್ಯಕ್ತಪಡಿಸಿದ್ದರು ಎಂದು ಆನಂದ್‌ ಶರ್ಮಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ರಾಷ್ಟ್ರೀಯ ಸಾಮರಸ್ಯ ಹಾಗೂ ಹೊಂದಾಣಿಕೆಯ ಸಮಾಜ ನಿರ್ಮಾಣಕ್ಕಾಗಿ ಕಾಂಗ್ರೆಸ್ ಜಾತಿ ಗಣತಿ ಮಾಡುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಕ್ಷದ ನಿಲುವು ಸಮತೋಲಿತವಾಗಿರಬೇಕು ಹಾಗೂ ಧರ್ಮ ಹಾಗೂ ಜಾತಿ ಆಧಾರಿತ ಸಂಘಟನೆಗಳ ಒತ್ತಡದಿಂದ ದೂರವಿರಬೇಕು. ಕಾಂಗ್ರೆಸ್ ಪಾರದರ್ಶಕತೆ, ಪ್ರಜಾಸತ್ತಾತ್ಮಕ ನಿರ್ಧಾರ ಹಾಗೂ ಗೌರವಾನ್ವಿತ ಅಭಿವ್ಯಕ್ತ ಸ್ವಾತಂತ್ರವನ್ನು ದೃಢವಾಗಿ ನಂಬಿದೆ. ಇದನ್ನು ನಾನು ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಬರೆಯುತ್ತಿದ್ದೇನೆ ಎಂದು ತಮ್ಮ ಪತ್ರದಲ್ಲಿ ಆನಂದ್ ಶರ್ಮಾ ಉಲ್ಲೇಖಿಸಿದ್ದಾರೆ.

ಶರ್ಮಾ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್‌ ಹುಸೇನ್, ಜಾತಿ ಗಣತಿಯನ್ನು ದೇಶದ ಅತ್ಯಂತ ಹಳೆಯ ಪಕ್ಷ ಸಕ್ರಿಯಗೊಳಿಸಿ ಜಾರಿಗೊಳಿಸುತ್ತಿರುವ ನಿರ್ಧಾರದಿಂದ ಭಾರತೀಯ ಸಮಾಜದ ಪ್ರತಿಯೊಂದ ವರ್ಗದವರು ಅನುಕೂಲ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

“ನಾವು ಯಾವುದೇ ರೀತಿಯ ಜಾತಿ ಆಧಾರಿತ ರಾಜಕೀಯ ಮಾಡುವುದಿಲ್ಲ. ಪಕ್ಷದಲ್ಲಿ ಎಲ್ಲ ಸಮಸ್ಯೆಗಳನ್ನು ಚರ್ಚಿಸಲು ಪ್ರಜಾಪ್ರಭುತ್ವವಿದೆ” ಎಂದು ಹುಸೇನ್‌ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X