90° ತಿರುವುಳ್ಳ ಸೇತುವೆ ನಿರ್ಮಾಣ; 7 ಎಂಜಿನಿಯರ್‌ಗಳ ಅಮಾನತು

Date:

Advertisements

ಭೋಪಾಲ್‌ನ ಐಶ್‌ಬಾಗ್ ಪ್ರದೇಶದಲ್ಲಿ ವಾಹನಗಳು ತಿರುವಲು ಸಾಧ್ಯವೇ ಇಲ್ಲದ 90° ತಿರುವುಳ್ಳ ಮೇಲುರಸ್ತೆಯನ್ನ ನಿರ್ಮಾಣ ಕಾಮಗಾರಿ ಸಂಬಂಧ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ದೋಷಪೂರಿತ ವಿನ್ಯಾಸದಲ್ಲಿ ಸೇತುವೆ ನಿರ್ಮಿಸಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಅಮಾನತುಗೊಂಡಿದ್ದಾರೆ.

ಐಶ್‌ಬಾಗ್‌ನ ರೈಲ್ವೇ ಹಳಿಗಳನ್ನು ದಾಟಲು ವಾಹನಗಳ ಕಾಯುವಿಕೆಯನ್ನು ತಪ್ಪಿಸಲು ಮೇಲುರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ, ಸೇತುವೆಯು 90° ಇರುವ ಕಾರಣ, ಇದರಲ್ಲಿ ವಾಹನ ಸಂಚಾರ ಸಾಧ್ಯವಿಲ್ಲ. ಸೇತುವೆಯ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರ್ಕಾರದ ವಿರುದ್ಧ ಭಾರೀ ಆಕ್ರೋಶ,ಟ್ರೋಲ್, ಟೀಕೆಗಳು ವ್ಯಕ್ತವಾಗಿದ್ದವು.

ಈ ಬೆನ್ನಲ್ಲೇ, ಲೋಕೋಪಯೋಗಿ ಇಲಾಖೆಯ 7 ಮಂದಿ ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. “ಐಶ್‌ಬಾಗ್ ಆರ್‌ಒಬಿ ನಿರ್ಮಾಣದಲ್ಲಿ ಗಂಭೀರ ಲೋಪಗಳನ್ನು ನಾವು ಗಮನಿಸಿದ್ದೇವೆ. ತನಿಖೆಗೆ ಆದೇಶಿಸಲಾಗಿದೆ. ವಿಚಾರಣಾ ವರದಿಯ ಆಧಾರದ ಮೇಲೆ, ಎಂಟು ಪಿಡಬ್ಲ್ಯೂಡಿ ಎಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.

Advertisements

“ಇಲಾಖೆಯ ಇಬ್ಬರು ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ ಏಳು ಎಂಜಿನಿಯರ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ನಿವೃತ್ತ ಸೂಪರಿಂಟೆಂಡೆಂಟ್ ಎಂಜಿನಿಯರ್ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ನಿರ್ಮಾಣ ಸಂಸ್ಥೆ ಮತ್ತು ವಿನ್ಯಾಸ ಸಲಹೆಗಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಆರ್‌ಒಬಿದಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಲು ಸಮಿತಿ ರಚಿಸಲಾಗಿದೆ. ಮಾರ್ಪಾಡುಗಳಾದ ಬಳಿಕವೇ ಆರ್‌ಒಬಿ ಉದ್ಘಾಟನೆಯಾಗಲಿದೆ” ಎಂದು ಅವರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X