ಮಣಿಪುರದಲ್ಲಿ ಹೆಚ್ಚಿದ ಉದ್ವಿಗ್ನತೆ: ಸಿಎಂ ಭದ್ರತಾ ತಂಡದ ಮೇಲೆ ಉಗ್ರರ ದಾಳಿ; ಪೊಲೀಸರಿಗೆ ಗಾಯ

Date:

Advertisements

ಮಣಿಪುರದಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದ್ದು, ಶಂಕಿತ ಉಗ್ರರು ಸೋಮವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಭದ್ರತಾ ತಂಡದ ಮೇಲೆ ದಾಳಿ ನಡೆಸಿದ್ದು ಪೊಲೀಸ್‌ ಸಿಬ್ಬಂದಿಯೋರ್ವರಿಗೆ ಗಾಯವಾಗಿದೆ.

ಪೊಲೀಸರ ಪ್ರಕಾರ, ಕಾಂಗ್‌ಪೋಕ್ಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 37ರಲ್ಲಿ ಬೆಳಿಗ್ಗೆ 10:30ರ ಸುಮಾರಿಗೆ ತಂಡವು ಜಿರಿಬಾಮ್‌ಗೆ ಹೋಗುತ್ತಿದ್ದಾಗ ದಾಳಿ ನಡೆಸಿದೆ. ಇತ್ತೀಚೆಗೆ ಮೈತಿ ಮತ್ತು ಕುಕಿ ಸಮುದಾಯದ ನಡುವೆ ಜನಾಂಗೀಯ ಸಂಘರ್ಷ ಈ ಸ್ಥಳದಲ್ಲಿಯೇ ನಡೆದಿದೆ.

ಸಂಘರ್ಷದ ಪರಿಸ್ಥಿತಿಯನ್ನು ಅವಲೋಕಿಸಲು ಸಿಎಂ ಬಿರೇನ್ ಸಿಂಗ್ ಮಂಗಳವಾರ ಚಾಪರ್‌ನಲ್ಲಿ ಪಟ್ಟಣಕ್ಕೆ ತೆರಳಲಿದ್ದರು. ಈ ವೇಳೆ ದಾಳಿ ನಡೆದಿದ್ದು, ಕಾನ್‌ಸ್ಟೆಬಲ್‌ನನ್ನು ರಾಜ್ಯದ ರಾಜಧಾನಿ ಇಂಫಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಕಾನ್‌ಸ್ಟೆಬಲ್‌ಗೆ ಬುಲೆಟ್‌ ತಗುಲಿದೆ.

Advertisements

ಇದನ್ನು ಓದಿದ್ದೀರಾ?  ಮಣಿಪುರದಲ್ಲಿ ವರ್ಷ ಕಳೆದರೂ ಶಾಂತಿಯಿಲ್ಲ, ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್

ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿಂಗ್, “ಈ ಘಟನೆಯು ಅತ್ಯಂತ ದುರದೃಷ್ಟಕರ ಮತ್ತು ಅತ್ಯಂತ ಖಂಡನೀಯ. ಇದು ಮುಖ್ಯಮಂತ್ರಿ ಹಾಗೂ ರಾಜ್ಯದ ಜನತೆಯ ಮೇಲಿನ ದಾಳಿಯಾಗಿದೆ. ಈ ಕೃತ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಏನಾದರೂ ಮಾಡಲೇಬೇಕಾಗಿದೆ” ಎಂದು ತಿಳಿಸಿದರು.

ಅಪರಾಧಿಗಳ ಮೇಲೆ ಕ್ರಮಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ತಮ್ಮ ಸಹೋದ್ಯೋಗಿಗಳನ್ನು ಸಂಪರ್ಕಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಇನ್ನು ಜಿರಿಬಾಮ್‌ಗೆ ಭೇಟಿ ನೀಡುವ ಕುರಿತು ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಮುಖಂಡರಿಗೆ ಸಿಎಂ ಮೌಖಿಕ ಭರವಸೆ ನೀಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಈ ಪತ್ರಿಕೆಗೆ ತಿಳಿಸಿದ್ದಾರೆ.

ಅಸ್ಸಾಂನ ಬರಾಕ್ ಕಣಿವೆಯಲ್ಲಿ ಕ್ಯಾಚಾರ್ ಜಿಲ್ಲೆಗೆ ಹೊಂದಿಕೊಂಡು ಮಣಿಪುರದ ಪಶ್ಚಿಮದ ಗಡಿಯಲ್ಲಿ ನೆಲೆಗೊಂಡಿರುವ ಜಿರಿಬಾಮ್ ಜಿಲ್ಲೆಯಲ್ಲಿ ಮೈತಿ, ಕುಕಿ ಮತ್ತು ಇತರೆ ಬುಡಕಟ್ಟು ಜನಾಂಗದ ಮಿಶ್ರ ಜನಸಂಖ್ಯೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X