ಸಮಾನ ಆದಾಯದ ದಂಪತಿ; ಪತ್ನಿಗೆ ಜೀವನಾಂಶ ನಿರಾಕರಿಸಿದ ಸುಪ್ರೀಂ ಕೋರ್ಟ್

Date:

Advertisements

ವಿಚ್ಛೇದನ ಪಡೆದ ದಂಪತಿ ಸಮಾನ ಹುದ್ದೆಯಲ್ಲಿದ್ದು ಸಮಾನವೇತನ ಗಳಿಸುತ್ತಿರುವ ಕಾರಣದಿಂದಾಗಿ ಪತ್ನಿಗೆ ಜೀವನಾಂಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನ ಪತಿಯಂತಹ ಹುದ್ದೆಯಲ್ಲಿಯೇ ಇದ್ದು, ಆಕೆಯ ಖರ್ಚನ್ನು ಆಕೆಯ ವೇತನದಲ್ಲೇ ನಿಭಾಯಿಸಬಲ್ಲಳು ಎಂದು ಹೇಳಿ ಜೀವನಾಂಶ ಕೋರಿದ ಮಹಿಳೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಅಭಯ್ ಎಸ್‌ ಓಕಾ ಮತ್ತು ಉಜ್ಜಲ್ ಭುಯನ್ ಅವರ ದ್ವಿಸದಸ್ಯ ಪೀಠವು ಈ ತೀರ್ಪನ್ನು ನೀಡಿದೆ. ಸಹಾಯಕ ಪ್ರಾಧ್ಯಾಪಕರೂ ಆಗಿರುವ ಮಹಿಳೆ ತನ್ನ ಪತಿಯಿಂದ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಸುಪ್ರೀಂ ಕೋರ್ಟ್‌ | ಬ್ಯಾಲೆಟ್‌ ಪೇಪರ್‌ ಮತದಾನ ಮರುಜಾರಿ ಕೋರಿದ್ದ ಅರ್ಜಿ ವಜಾ

Advertisements

“ಪತಿ ಮತ್ತು ಪತ್ನಿ ಇಬ್ಬರು ಕೂಡಾ ಸಹಾಯಕ ಪ್ರಾಧ್ಯಾಪಕರು ಆಗಿದ್ದಾರೆ. ಸಮಾನವಾದ ಉದ್ಯೋಗ ಹೊಂದಿದ್ದಾರೆ. ಆದ್ದರಿಂದ ಸಂವಿಧಾನದ ವಿಧಿ 136ರ ಅಡಿಯಲ್ಲಿ ಬರದು. ಆದ್ದರಿಂದಾಗಿ ಈ ಅರ್ಜಿಯನ್ನು ವಜಾಗೊಳಿಸಲಾಗುವುದು” ಎಂದು ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

ಪತ್ನಿ ತನ್ನಷ್ಟೇ ದುಡಿಯುತ್ತಿರುವ ಕಾರಣದಿಂದಾಗಿ ಜೀವನಾಂಶ ನೀಡಬೇಕಾಗಿಲ್ಲ ಎಂಬುದು ಪತಿಯ ವಾದವಾಗಿತ್ತು. ಅರ್ಜಿಯ ವಿರುದ್ಧ ವಾದ ಮಂಡಿಸಿದ ಪತಿಯ ಪರ ವಕೀಲ ಶಶಾಂಕ್ ಸಿಂಗ್, “ಅವರು ಮಾಸಿಕವಾಗಿ 60 ಸಾವಿರ ರೂಪಾಯಿ ಸಂಪಾದನೆ ಮಾಡುತ್ತಿದ್ದರು. ಇಬ್ಬರೂ ಒಂದೇ ದರ್ಜೆಯ ಹುದ್ದೆಯನ್ನು ಹೊಂದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ತನ್ನ ಪತಿ ಮಾಸಿಕವಾಗಿ ಒಂದು ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. ಆದ್ದರಿಂದಾಗಿ ಜೀವನಾಂಶ ನೀಡಬೇಕು ಎಂಬುದು ಪತ್ನಿಯ ವಾದವಾಗಿದೆ. ವೇತನದ ವಿಚಾರದಲ್ಲಿ ವಾದ ನಡೆದ ಕಾರಣ ಸುಪ್ರೀಂ ಕೋರ್ಟ್ ಇಬ್ಬರೂ ತನ್ನ ಪೇ ಸ್ಲಿಪ್ (ಮಾಸಿಕ ವೇತನದ ದಾಖಲೆ) ಸಲ್ಲಿಸುವಂತೆ ತಿಳಿಸಿದೆ.

ಇನ್ನು ಇತ್ತೀಚೆಗೆ ಜೀವನಾಂಶ ಕೋರಿ ಸಲ್ಲಿಸಿದ್ದ ಇನ್ನೊಂದು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, “ಇಂತಹ ಕಾನೂನು ಮಹಿಳೆಗೆ ಯಾವುದೇ ಆರ್ಥಿಕ ತೊಂದರೆ ಉಂಟಾಗದಿರಲಿ ಎಂಬ ಉದ್ದೇಶವನ್ನು ಹೊಂದಿದೆ. ಪತಿಯಿಂದ ಹಣ ದೋಚಲು ಈ ಕಾನೂನು ಇರುವುದಲ್ಲ” ಎಂದು ಹೇಳಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X