ಸುಪ್ರೀಂ ಕೋರ್ಟ್ ಛೀಮಾರಿ ನಂತರ ಚುನಾವಣಾ ಬಾಂಡ್‌ಗಳ ಎಲ್ಲ ಮಾಹಿತಿ ಸಲ್ಲಿಸಿದ ಎಸ್‌ಬಿಐ

Date:

Advertisements

ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಆಲ್ಫಾನ್ಯೂಮರಿಕ್‌ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದೆ. ಈ ಬಗ್ಗೆ ಕೂರ್ಟ್‌ಗೂ ಮಾಹಿತಿ ನೀಡಿದೆ.

ಎಸ್‌ಬಿಐ ನ ಅಧ್ಯಕ್ಷರಾದ ದಿನೇಶ್ ಕುಮಾರ್‌ ಖೇರಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗಕ್ಕೆ ತನ್ನ ಸ್ವಾಧೀನ ಪಡಿಸುಕೊಳ್ಳುವುದಕ್ಕಾಗಿ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಬಹಿರಂಗಪಡಿಸಿರುವುದಾಗಿ ತಿಳಿಸಿದ್ದಾರೆ.

ಆದಾಗ್ಯೂ, ಖಾತೆಯ ಭದ್ರತೆಯ ದೃಷ್ಟಿಯಿಂದ ರಾಜಕೀಯ ಪಕ್ಷಗಳ ಕೆವೈಸಿ ವಿವರಗಳು ಹಾಗೂ ಪೂರ್ಣ ಬ್ಯಾಂಕ್‌ ಖಾತೆ ಸಂಖ್ಯೆಗಳನ್ನು ಸಾರ್ವಜನಿಕಗೊಳಿಸಲಾಗುತ್ತಿಲ್ಲ. ಹಾಗೆಯೇ ಭದ್ರತಾ ಕಾರಣಗಳಿಂದ ಖರೀದಿದಾರರ ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ. ಆದರೆ ರಾಜಕೀಯ ಪಕ್ಷಗಳನ್ನು ಗುರುತಿಸಲು ಇವುಗಳು ಅಗತ್ಯವಿಲ್ಲ ಎಂದು ಎಸ್‌ಬಿಐ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಚುನಾವಣಾ ಬಾಂಡ್‌ಗಳನ್ನು 2018ರಲ್ಲಿ ಪರಿಚಯಿಸಿದ ನಂತರ ಬಾಂಡ್‌ ಖರೀದಿದಾರರ ಹೆಸರು, ಹಣ, ಬಾಂಡ್‌ನ ನಿರ್ದಿಷ್ಟ ಸಂಖ್ಯೆ, ಪಕ್ಷದ ಹೆಸರು, ಬಾಂಡ್‌ನ ನಗದೀಕರಣ, ರಾಜಕೀಯ ಪಕ್ಷಗಳ ಬ್ಯಾಂಕ್‌ ಖಾತೆಯ ಕೊನೆಯ ನಾಲ್ಕು ಸಂಖ್ಯೆಗಳು ಹಾಗೂ ಹಣ ಹಾಗೂ ಬಾಂಡ್ ನಗದೀಕರಣ ಸಂಖ್ಯೆಯ ಮಾಹಿತಿಯನ್ನು ಎಸ್‌ಬಿಐ ಈಗ ಬಹಿರಂಗಗೊಳಿಸಿದೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕೆವೈಸಿ ವಿವರಗಳನ್ನು ಹೊರತುಪಡಿಸಿ ಎಸ್‌ಬಿಐ ಎಲ್ಲ ವಿವರಗಳನ್ನು ಬಹಿರಂಗಗೊಳಿಸಿರುವುದಾಗಿ ಅಫಿಡವಿಡ್‌ ಸಲ್ಲಿಸಿದೆ.

ಚುನಾವಣಾ ಬಾಂಡ್‌ಗಳು ಅಸಂವಿಧಾನಿಕ,ಆಲ್ಫಾನ್ಯೂಮರಿಕ್‌ ಸಂಖ್ಯೆಗಳನ್ನು ಒಳಗೊಂಡ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಫೆ.15, 2024ರ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

ಸುಪ್ರೀಂನಿಂದ ಪ್ರೊಫೆಸರ್ ಅಲಿ ಖಾನ್‌ಗೆ ರಕ್ಷಣೆ: ಆರೋಪ ಪಟ್ಟಿಯನ್ನು ಪರಿಗಣಿಸದಂತೆ ಮ್ಯಾಜಿಸ್ಟ್ರೇಟ್‌ಗೆ ಸೂಚನೆ

'ಆಪರೇಷನ್ ಸಿಂಧೂರ್' ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಹರಿಯಾಣದ ಅಶೋಕ...

ಸರ್ಕಾರಿ ಕಚೇರಿಗಳಲ್ಲಿ ಯುಎಸ್‌ಬಿ, ಪೆನ್‌ಡ್ರೈವ್‌ಗಳ ಬಳಕೆ ನಿಷೇಧಿಸಿದ ಜಮ್ಮು ಕಾಶ್ಮೀರ ಸರ್ಕಾರ

ಸೂಕ್ಷ್ಮವಾಗಿರುವ ಸರ್ಕಾರಿ ಮಾಹಿತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ...

Download Eedina App Android / iOS

X