ಕೋವಿಡ್ ಸೋಂಕುಗಳು ನಿಧಾನಕ್ಕೆ ಹೆಚ್ಚುತ್ತಿದೆ, ಕಳವಳ ಪಡಬೇಕಾಗಿಲ್ಲ: ತಜ್ಞರು

Date:

Advertisements

ಕೋವಿಡ್ ಕಾಲಾನಂತರದಲ್ಲಿ ಈಗ ಕೋವಿಡ್ ಸೋಂಕುಗಳು ನಿಧಾನಕ್ಕೆ ಹೆಚ್ಚಾಗುತ್ತಿದೆ. ಒಮ್ಮೆಲೇ ಪ್ರಕರಣಗಳ ಸಂಖ್ಯೆ ಏರಿಕೆಯಾಗುವ ನಿರೀಕ್ಷೆಯಿದೆ. ವೈರಸ್ ನಿರಂತರವಾಗಿ ವಿಕಸನಗೊಳ್ಳುತ್ತಿದೆ. ಆದರೆ ಈ ಕಳವಳ ಪಡಬೇಕಾಗಿಲ್ಲ ಎಂದು ತಜ್ಞರುಗಳ ಭರವಸೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ. ರೋಗನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಇದು ಕಂಡುಬರುತ್ತದೆ. ಆದ್ದರಿಂದ ದುರ್ಬಲವಾಗಿರುವವರು ಕೊಂಚ ಎಚ್ಚರಿಕೆ ವಹಿಸಿಕೊಳ್ಳಬೇಕು ಎಂದು ವಿಜ್ಞಾನಿಗಳು ಹೇಳಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಕೋವಿಡ್-19 ಹೆಚ್ಚಳ; ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯ

Advertisements

“ಕೋವಿಡ್ ಸೌಮ್ಯವಾದ ಸೋಂಕುಗಳಿಗೆ ಕಾರಣವಾಗುತ್ತಿದೆ. ಈ ವೈರಸ್ ಈಗ ಉಸಿರಾಟದ ಕಾಯಿಲೆಯಂತಾಗಿದೆ. ಜ್ವರಕ್ಕಿಂತ ಕಡಿಮೆ ಅಪಾಯಕಾರಿ. ನಾವು ಕೋವಿಡ್ ಅನ್ನು ಒಂದು ಬರೀ ವಿಶೇಷ ಪ್ರಕರಣವಾಗಿ ಮರೆತುಬಿಡಬಹುದು. ಇದು ಕಳವಳಕಾರಿಯಲ್ಲ” ಎಂದು ಜಾಗತಿಕ ಆರೋಗ್ಯ ತಜ್ಞ ಡಾ. ಚಂದ್ರಕಾಂತ್ ಲಹರಿಯಾ ಹೇಳಿದ್ದಾರೆ.

“ಎಲ್ಲಾ ಉಪ ರೂಪಾಂತರಗಳು ಒಂದೇ ರೀತಿಯದ್ದಾಗಿದೆ. ಕಡಿಮೆ ಅಪಾಯ ಹೊಂದಿದೆ. ಆದರೆ ಹೆಚ್ಚು ಸಾಂಕ್ರಾಮಿಕವಾಗಿ ಹರಡಬಲ್ಲದು. ಈ ಹಿಂದೆ ಸೋಂಕು ಬಂದಿದ್ದರೆ ಅಥವಾ ಲಸಿಕೆಗಳನ್ನು ಪಡೆದಿದ್ದರೆ ಕೋವಿಡ್ ಬರುವುದಿಲ್ಲ” ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಜೈವಿಕ ವಿಜ್ಞಾನ ಶಾಲೆಯ ಜೈವಿಕ ವಿಜ್ಞಾನ ಮತ್ತು ಆರೋಗ್ಯ ಸಂಶೋಧನಾ ಡೀನ್ ಅನುರಾಗ್ ಅಗರ್ವಾಲ್ ಹೇಳಿದರು.

ಜೂನ್ 6ರ ಹೊತ್ತಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳು 5,300 ದಾಟಿದ್ದು, ಕಳೆದ 24 ಗಂಟೆಗಳಲ್ಲಿ ಸುಮಾರು 500 ಪ್ರಕರಣಗಳು ಸೇರಿವೆ. ಇವುಗಳಲ್ಲಿ, 4,700 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ಕೇರಳದಲ್ಲಿ 1,600ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿದೆ. ಗುಜರಾತ್, ಪಶ್ಚಿಮ ಬಂಗಾಳ, ದೆಹಲಿ ಮತ್ತು ಮಹಾರಾಷ್ಟ್ರಗಳದಲ್ಲೂ ಪ್ರಕರಣ ದಾಖಲಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X