ಗೌತಮ್ ಗಂಭೀರ್ ವಿರುದ್ಧ ಗಂಭೀರ ಆರೋಪ ಮಾಡಿದ ಕ್ರಿಕೆಟಿಗ ಮನೋಜ್ ತಿವಾರಿ

Date:

Advertisements

ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಆಗಿರುವ ಗೌತಮ್ ಗಂಭೀರ್ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಬ್ಯಾಟರ್‌ ಮನೋಜ್ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ. ‘ಗಂಭೀರ್ ನನ್ನ ಕುಟುಂಬವನ್ನು ನಿಂದಿಸಿದ್ದಾರೆ. ಅಲ್ಲದೆ, ಸೌರವ್ ಗಂಗೂಲಿ ಬಗ್ಗೆಯೂ ಕೆಟ್ಟದಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಈ ಹಿಂದೆ, ಐಪಿಎಲ್‌ನಲ್ಲಿ ದೆಹಲಿ ತಂಡದಲ್ಲಿ ತಿವಾರಿ ಮತ್ತು ಗಂಭೀರ್ ಜೊತೆಯಾಗಿ ಆಟವಾಡಿದ್ದರು. ಆದರೆ, ಈಗ ಅವರಿಬ್ಬರ ನಡುವಿನ ವೈಮನಸ್ಸು ಮುನ್ನೆಲೆಗೆ ಬಂದಿದೆ. ಗಂಭೀರ್‌ರನ್ನು ‘ಕಪಟಿ’ ಎಂದು ತಿವಾರಿ ಕರೆದಿದ್ದಾರೆ.

“ಗಂಭೀರ್‌ಗೆ ಸ್ಪಷ್ಟತೆ ಮತ್ತು ನಿರ್ಣಾಯಕ ಕೋಚಿಂಗ್ ಶೈಲಿಯ ಕೊರತೆಯಿದೆ. ಅವರೊಬ್ಬ ಕಪಟಿ. ಅವರು ಏನು ಹೇಳುತ್ತಾರೋ ಅದನ್ನು ಮಾಡುವುದಿಲ್ಲ” ಎಂದು ತಿವಾರಿ ಆರೋಪಿಸಿದ್ದಾರೆ.

Advertisements

ಇತ್ತೀಚೆಗೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್‌ ಸರಣಿಯನ್ನು ಭಾರತ ತಂಡ ಸೋತಿದೆ. ಆ ಕಾರಣಕ್ಕಾಗಿ, ಟೀಮ್ ಇಂಡಿಯಾದ ಕೋಚ್ ಆಗಿರುವ ಗಂಭೀರ್ ವಿರುದ್ಧ ಆಕ್ರೋಶ, ಟೀಕೆಗಳು ವ್ಯಕ್ತವಾಗುತ್ತಿವೆ. ಆದಾಗ್ಯೂ, ಇತ್ತೀಚೆಗೆ ಭಾರತ ತಂಡಕ್ಕೆ ಸೇರ್ಪಡೆಯಾಗಿರುವ ವೇಗಿ ಬೌಲರ್ ಹರ್ಷಿತ್ ರಾಣಾ ಅವರು ಗಂಭೀರ್‌ರನ್ನು ಸಮರ್ಥಿಸಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಗಂಭೀರ್‌ರನ್ನು ರಾಣಾ ಸಮರ್ಥಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ತಿವಾರಿ, “ರಾಣಾ ಅವರು ಗಂಭೀರ್ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವುದು ನನಗೆ ಆಶ್ಚರ್ಯವೇನೂ ಆಗಿಲ್ಲ. ಗಂಭೀರ್‌ರನ್ನು ರಾಣಾ ಯಾಕೆ ಸಮರ್ಥಿಸುತ್ತಿದ್ದಾರೆ. ಆಕಾಶ್ ದೀಪ್ ಬದಲಿಗೆ ಹರ್ಷಿತ್ ರಾಣಾ ಅವರು ಟೀಮ್‌ನಲ್ಲಿ ಆಡಿದ್ದಾರೆ. ಅದು ಸಾಧ್ಯವಾಗಿದ್ದು ಹೇಗೆ? ಆಕಾಶ್ ದೀಪ್ ಯಾವ ತಪ್ಪು ಮಾಡಿದ್ದರು” ಎಂದು ಪ್ರಶ್ನಿಸಿದ್ದಾರೆ.

“ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೂರ್ನಿಗಳಲ್ಲಿ ಆಕಾಶ್‌ ದೀಪ್ ಉತ್ತಮವಾಗಿ ಬೌಲಿಂಗ್ ಮಾಡಿದ್ದರು. ಆದರೂ ಅವರನ್ನು ಹೊರಗಿಡಲು ಕಾರಣವೇನು? ಆಕಾಶ್‌ ಅವರನ್ನು ಹೊರಗಿಟ್ಟು, ರಾಣಾ ಅವರನ್ನು ಆಯ್ಕೆ ಮಾಡಿದ್ದು ಸಂಪೂರ್ಣವಾಗಿ ಪಕ್ಷಪಾತದ ಆಯ್ಕೆಯಾಗಿದೆ. ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಗಂಭೀರ್‌ರನ್ನು ರಾಣಾ ಸಮರ್ಥಿಸಿಕೊಳ್ಳುತ್ತಾರೆ” ಎಂದು ತಿವಾರಿ ಹೇಳಿದ್ದಾರೆ.

“ಈ ಹಿಂದೆ, ಯಾರಾದರೂ ಸತ್ಯ ಹೇಳಿದರೆ, ಅಂತಹವರನ್ನು ಜನರು ಸಮರ್ಥಿಸಿಕೊಳ್ಳುತ್ತಿದ್ದರು. ಆದರೆ, ಈಗ ಅವರಿಗೆ ನನ್ನ ಬಗ್ಗೆ ತಿಳಿದಿಲ್ಲ. ನಾನು ಸತ್ಯಗಳ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ತಿವಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X