ಝಾರ್ಖಂಡ್‌ ರಾಜ್ಯಸಭಾ ಚುನಾವಣೆ: ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆ, ಎನ್‌ಡಿಎ ಧನಬಲಕ್ಕೆ ಗೆಲುವೇ?

Date:

ಗುರುವಾರ ನಡೆದ ಝಾರ್ಖಂಡ್‌ನ ಎರಡು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಜೆಎಂಎಂ ಅಭ್ಯರ್ಥಿ ಬೈದ್ಯನಾಥ್ ರಾಮ್ ಮತ್ತು ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನಾಥ್‌ವಾನಿ ಗೆಲುವು ಸಾಧಿಸಿದ್ದಾರೆ. ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆಯಾಗಿದ್ದು, ಸದ್ಯ ಎನ್‌ಡಿಎ ಧನಬಲಕ್ಕೆ ಗೆಲುವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -

ಒಟ್ಟು 2 ಸ್ಥಾನಗಳಿಗೆ ನಡೆದ ಈ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಗೆಲ್ಲಲು ತಲಾ 28 ಮತಗಳ ಅಗತ್ಯವಿತ್ತು. ಬೈದ್ಯನಾಥ್ ರಾಮ್ (JMM) 31 ಮತಗಳನ್ನು ಪಡೆದು ಸುಲಭವಾಗಿ ಜಯಗಳಿಸಿದರು. ಪರಿಮಳ್ ನಾಥ್‌ವಾನಿ (NDA ಬೆಂಬಲಿತ ಸ್ವತಂತ್ರ ಅಭ್ಯರ್ಥಿ) 28 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಪ್ರಣವ್ ಝಾ (ಕಾಂಗ್ರೆಸ್) ಕೇವಲ 19 ಮತಗಳನ್ನು ಪಡೆದು ಸೋಲನ್ನೊಪ್ಪಿಕೊಂಡರು. 3 ಮತಗಳನ್ನು ಚುನಾವಣಾ ಆಯೋಗ ಅಮಾನ್ಯಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ನ ಮೂವರು, ಬಿಜೆಪಿ ಓರ್ವ ಅಭ್ಯರ್ಥಿ ಅವಿರೋಧ ಆಯ್ಕೆ

ಜಂಟಿ ಸಂಖ್ಯಾಬಲದ ಆಧಾರದ ಮೇಲೆ ಎರಡೂ ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದಾಗಿತ್ತು. ಆದರೆ ಕ್ರಾಸ್ ವೋಟಿಂಗ್ ನಡೆದು, ಎನ್‌ಡಿಎ ಬೆಂಬಲಿತ ಅಭ್ಯರ್ಥಿಗೆ ಗೆಲುವಾಗಿದೆ. ಈ ಸೋಲಿಗೆ ಎನ್‌ಡಿಎ ಹೂಡಿದ ರಾಜಕೀಯ ತಂತ್ರಗಾರಿಕೆ, ಧನಬಲದ ಬಳಕೆ ಮತ್ತು ಕುದುರೆ ವ್ಯಾಪಾರವೇ ಕಾರಣ ಎಂದು ಕಾಂಗ್ರೆಸ್ ಮತ್ತು ಜೆಎಂಎಂ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಎನ್‌ಡಿಎ ಮೈತ್ರಿಕೂಟವು ತನ್ನದೇ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸುವ ಬದಲು, ರಿಲಯನ್ಸ್ ಗ್ರೂಪ್‌ನ ಹಿರಿಯ ಅಧಿಕಾರಿಯಾಗಿರುವ ಬಿಲಿಯನೇರ್ ಉದ್ಯಮಿ ಪರಿಮಳ್ ನತ್ವಾಣಿ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತು.

“ಎನ್‌ಡಿಎ ಒಬ್ಬ ಪ್ರಭಾವಿ ಕಾರ್ಪೊರೇಟ್ ಉದ್ಯಮಿಯನ್ನು ಪಕ್ಷೇತರನಾಗಿ ಕಣಕ್ಕಿಳಿಸಿದ್ದೇ ಶಾಸಕರನ್ನು ಧನಬಲದಿಂದ ಸೆಳೆಯಲು. ಕೇವಲ ಹಣದ ಪ್ರಭಾವದಿಂದಲೇ ಈ ಫಲಿತಾಂಶ ಉಲ್ಟಾ ಆಗಿದೆ” ಎಂದು ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಕೆ. ರಾಜು ಮತ್ತು ಸಚಿವೆ ದೀಪಿಕಾ ಪಾಂಡೆ ಸಿಂಗ್ ನೇರವಾಗಿ ಆರೋಪಿಸಿದ್ದಾರೆ.

ಮತದಾನಕ್ಕೆ ಮೊದಲೇ ಜೆಎಂಎಂ ನಾಯಕ ಮನೋಜ್ ಪಾಂಡೆ ಅವರು, “ಬಿಜೆಪಿ ಗುಜರಾತ್ ಮೂಲದ ಉದ್ಯಮಿಯನ್ನು ಬಳಸಿ ಜಾರ್ಖಂಡ್ ರಾಜಕಾರಣದಲ್ಲಿ ಹಣದ ಖೆಡ್ಡಾ ತೋಡುತ್ತಿದೆ” ಎಂದು ಎಚ್ಚರಿಸಿದ್ದರು.

ವಿಧಾನಸಭೆಯಲ್ಲಿ ಗೆಲುವಿಗೆ 28 ಮತಗಳು ಬೇಕಾಗಿದ್ದವು. ಎನ್‌ಡಿಎ ಬಳಿ ಇದ್ದದ್ದು ಕೇವಲ 24 ಮತಗಳು ಅಂದರೆ 4 ಮತಗಳ ಕೊರತೆ ಇತ್ತು. ಆದರೂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಪ್ರತಿಪಕ್ಷಗಳ ಶಾಸಕರು ಕ್ರಾಸ್ ವೋಟಿಂಗ್ ಮಾಡುವಂತೆ ತೆರೆಮರೆಯಲ್ಲೇ ಪ್ರಭಾವ ಬೀರಲು ನಡೆಸಿದ ವ್ಯವಸ್ಥಿತ ತಂತ್ರವಾಗಿತ್ತು ಎಂಬುದು ಸ್ಪಷ್ಟವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...