ಮರಗಳನ್ನು ಕಡಿಯುವುದು ನರಹತ್ಯೆಗಿಂತಲೂ ಭೀಕರ: ಸುಪ್ರೀಂ ಕೋರ್ಟ್

Date:

Advertisements

ಭಾರಿ ಸಂಖ್ಯೆಯಲ್ಲಿ ಮರಕಡಿಯುವುದು ನರಹತ್ಯೆಗಿಂತಲೂ ಭೀಕರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ತೋರಿಸಬಾರದು ಎಂದು ಖಂಡತುಂಡವಾಗಿ ಹೇಳಿರುವ ಕೋರ್ಟ್, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೆ ಒಂದು ಲಕ್ಷ ರೂಪಾಯಿಗಳಂತೆ ದಂಡ ವಿಧಿಸಿದೆ.

ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಇಲ್ಲದೇ ಅಕ್ರಮವಾಗಿ ಮರ ಕಡಿಯುವ ದಂಧೆಗೆ ಸ್ಪಷ್ಟ ಸಂದೇಶವನ್ನು ಸುಪ್ರೀಂಕೋರ್ಟ್‌ನ ಈ ತೀರ್ಪು ರವಾನಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಉಜ್ಜಲ್ ಭೂಯಾನ್ ಅವರನ್ನು ಒಳಗೊಂಡ ನ್ಯಾಯಪೀಠ, ತಾಜ್ ಟ್ರಪೇಝಿಯಂ ವಲಯದಲ್ಲಿ 454 ಮರಗಳನ್ನು ಅಕ್ರಮವಾಗಿ ಕಡಿದ ವ್ಯಕ್ತಿಯ ಮೇಲ್ಮನವಿಯನ್ನು ತಿರಸ್ಕರಿಸಿದೆ.

ಪರಿಸರ ವಿಚಾರದಲ್ಲಿ ಕೋರ್ಟ್‌ಗೆ ಸಹಕರಿಸಿದ ಅಮಿಕಸ್ ಕ್ಯೂರಿ, ಹಿರಿಯ ವಕೀಲ ಎಡಿಎನ್ ರಾವ್ ಅವರು ಈ ಸಂಬಂಧ ನೀಡಿ ಸಲಹೆಗಳನ್ನು ನ್ಯಾಯಪೀಠ ಸ್ವೀಕರಿಸಿದೆ. ಕಾನೂನು ಮತ್ತು ಮರಗಳನ್ನು ಹಗುರವಾಗಿ ಪರಿಗಣಿಸಬಾರದು ಎನ್ನುವ ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ರಾವ್ ಸಲಹೆ ನೀಡಿದ್ದರು.

Advertisements

ಇಂತಹ ಪ್ರಕರಣಗಳಲ್ಲಿ ಎಷ್ಟು ದಂಡ ವಿಧಿಸಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ ಈ ತೀರ್ಪಿನ ಮೂಲಕ ಮಾನದಂಡ ನಿಗದಿಪಡಿಸಿದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಸಕರ ವೇತನ ಹೆಚ್ಚಳ: ಇವರಿಗೆ ಹೇಳೋರು ಕೇಳೋರು ಯಾರೂ ಇಲ್ಲವೇ?

“ಪರಿಸರ ಪ್ರಕರಣಲ್ಲಿ ಯಾವುದೇ ದಯೆ ತೋರಿಸಬಾರದು. ದೊಡ್ಡ ಸಂಖ್ಯೆಯ ಮರಗಳನ್ನು ಕಡಿಯುವುದು ನರಹತ್ಯೆಗಿಂತ ಕೆಟ್ಟದು. ಇಂಥ ಮರವನ್ನು ಮತ್ತೆ ಬೆಳೆಸಲು ಅಥಾ 454 ಮರಗಳ ಹಸಿರು ಹೊದಿಕೆಯನ್ನು ಮರು ಸೃಷ್ಟಿಸಲು ಕನಿಷ್ಠ 100 ವರ್ಷ ಬೇಕು. 2015ರಲ್ಲಿ ನ್ಯಾಯಾಲಯ ನಿಷೇಧ ವಿಧಿಸಿದ್ದರೂ, ಕೋರ್ಟ್‌ನ ಅನುಮತಿ ಇಲ್ಲದೇ ಇವುಗಳನ್ನು ಕಡಿಯಲಾಗಿದೆ” ಎಂದು ನ್ಯಾಯಪೀಠ ಆಕ್ಷೇಪಿಸಿದೆ.

ಕೇಂದ್ರದ ಸಶಕ್ತ ಸಮಿತಿಯ ಶಿಫಾರಸ್ಸಿನಂತೆ ಶಿವಶಂಕರ್ ಅಗರ್‌ವಾಲ್‌ ಎಂಬ ಆರೋಪಿಗೆ ಪ್ರತಿ ಮರಕ್ಕೆ ಒಂದು ಲಕ್ಷ ರೂಪಾಯಿಗಳಂತೆ ದಂಡ ವಿಧಿಸಲಾಗಿದೆ. “ನನ್ನ ಕಕ್ಷಿದಾರ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ ಹಾಗೂ ದಂಡವನ್ನು ಕಡಿಮೆ ಮಾಡುವಂತೆ ಕೋರಿದ್ದಾರೆ” ಎಂದು ಅರ್ಜಿದಾರರ ಪರ ವಕೀಲ ಮುಕುಲ್ ರೋಹಟ್ಗಿ ಹೇಳಿದರು. ಆದರೆ ಇದಕ್ಕೆ ಕೋರ್ಟ್ ನಿರಾಕರಿಸಿದ್ದು, ಅಕ್ಕಪಕ್ಕದ ಪ್ರದೇಶಗಳಲ್ಲಿ ಮರಗಳನ್ನು ಬೆಳೆಸಲು ಅವಕಾಶ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X