‘100% ನ್ಯಾಚುರಲ್’ ಲೇಬಲ್ ಬಳಸದಂತೆ ಡಾಬರ್ ಸಂಸ್ಥೆಗೆ FSSAI ಕಟ್ಟುನಿಟ್ಟಿನ ಸೂಚನೆ

Date:

ತನ್ನ ಉತ್ಪನ್ನಗಳ ಮೇಲೆ ‘100% ನ್ಯಾಚುರಲ್’ ಮತ್ತು ‘100% ಪ್ಯೂರ್’ (100% ಶುದ್ಧ) ಎಂಬ ಲೇಬಲ್‌ಗಳನ್ನು ಬಳಸದಂತೆ ಡಾಬರ್ ಇಂಡಿಯಾ ಸಂಸ್ಥೆಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಸೂಚಿಸಿದೆ. ಇಂತಹ ದಾರಿ ತಪ್ಪಿಸುವ ಮತ್ತು ಅಸ್ಪಷ್ಟವಾದ ಪ್ರಚಾರದ ಲೇಬಲ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆಯೂ ಆದೇಶಿಸಿದೆ.

- Advertisement -

ಡಾಬರ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಜೇನುತುಪ್ಪ, ಹಸುವಿನ ತುಪ್ಪ, ಆಪಲ್ ಸೈಡರ್ ವಿನೆಗರ್, ತೆಂಗಿನ ಎಣ್ಣೆ, ಎಳೆನೀರು ಹಾಗೂ ತೆಂಗಿನ ಹಾಲು ಸೇರಿದಂತೆ ಹಲವು ಉತ್ಪನ್ನಗಳನ್ನು ‘100% ನ್ಯಾಚುರಲ್’ ಮತ್ತು ‘100% ಆರ್ಗ್ಯಾನಿಕ್’ ಎಂದು ಪ್ರಚಾರ ಮಾಡುತ್ತಿತ್ತು. ‘ಎಫ್‌ಎಸ್ (ಜಾಹೀರಾತು ಮತ್ತು ಹಕ್ಕುಗಳು) ನಿಯಮಗಳು-2018’ರ ಪ್ರಕಾರ, ಇಂತಹ 100%ರಷ್ಟು ಶುದ್ಧತೆಯ ಹಕ್ಕುಗಳನ್ನು ಸಾಬೀತುಪಡಿಸಲು ಸಾಧ್ಯವಿಲ್ಲ. ಆದ್ದರಿಂದ, ಇವು ಗ್ರಾಹಕರನ್ನು ದಾರಿ ತಪ್ಪಿಸುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಿರುವಾಗ, 100% ನೈಸರ್ಗಿಕ ಮತ್ತು ಶುದ್ಧ ಎಂಬ ಪ್ರಚಾರವು ಕಾಯ್ದೆಯ ಉಲ್ಲಂಘನೆಯಾಗುತ್ತವೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಹಿಂದೆ ನೀಡಿದ್ದ ಸೂಚನೆಯನ್ನು ಕಂಪನಿಯು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಆರೋಪಿಸಿರುವ ಎಫ್‌ಎಸ್ಎಸ್‌ಎಐ, ಮುಂದಿನ 15 ದಿನಗಳ ಒಳಗಾಗಿ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ಡಾಬರ್ ಸಂಸ್ಥೆಗೆ ಗಡುವು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...