ಹಿಂದಿ ಭಾಷಾ ಹೇರಿಕೆ ವಿವಾದದ ನಡುವೆ ಡೈರಿ ಮಿಲ್ಕ್ ಹೊಸ ಜಾಹೀರಾತು ವೈರಲ್

Date:

Advertisements

ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವೆ ತ್ರಿಭಾಷಾ ನೀತಿ ವಿಚಾರದಲ್ಲಿ ವಾಗ್ವಾದ ನಡೆಯುತ್ತಿದೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ದಕ್ಷಿಣ ಭಾರತದ ರಾಜ್ಯಗಳು ವರ್ಷಗಳಿಂದ ಆರೋಪಿಸುತ್ತಾ ಬಂದಿದೆ. ಪ್ರಸ್ತುತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದ ನಡುವೆ ರಾಜಕೀಯ ವಾಕ್ಸಮರ ನಡೆಯುತ್ತಿರುವ ನಡುವೆ ಡೈರಿಮಿಲ್ಕ್‌ನ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಹಲವರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ರೆಂಡಿಂಗ್ ವಿಚಾರಗಳಿಗೆ ಸಂಬಂಧಿಸಿದಂತೆ ಜಾಹೀರಾತು ಮಾಡುವುದು ಕಾರ್ಪೋರೇಟ್ ಸಂಸ್ಥೆಗಳ ಮಾರುಕಟ್ಟೆ ತಂತ್ರವಾಗಿದೆ. ಅದರ ಭಾಗವಾಗಿಯೇ ಡೈರಿ ಮಿಲ್ಕ್ ಇದೀಗ ಭಾಷಾ ಹೇರಿಕೆಯ ವಿವಾದ ನಡುವೆ ತಮಿಳು ಮತ್ತು ಹಿಂದಿಗರ ನಡುವೆ ನಡೆಯುವ ಸಂಭಾಷಣೆಯ ಜಾಹೀರಾತೊಂದನ್ನು ಬಿಡುಗಡೆ ಮಾಡಿದೆ.

ಇದನ್ನು ಓದಿದ್ದೀರಾ? ತ್ರಿಭಾಷಾ ಸೂತ್ರದ ಹೆಸರಿನಲ್ಲಿ‌ ಹಿಂದಿ‌ ಹೇರಿಕೆ‌ ಮಾಡುತ್ತಿದೆ ಕೇಂದ್ರ ಸರ್ಕಾರ? three-language formula | BJP

Advertisements

ವಿಡಿಯೋದಲ್ಲಿ ಏನಿದೆ?

ಹಿಂದಿ ಮಾತನಾಡುವ ಮಹಿಳೆಯರು ಕೂತು ಮಾತನಾಡುತ್ತಿದ್ದ ವೇಳೆ ಹೊಸದಾಗಿ ಉತ್ತರ ಭಾರತಕ್ಕೆ ಹೋದ ಚೆನ್ನೈನ ಮಹಿಳೆಯೊಬ್ಬರು ಗುಂಪಿಗೆ ಸೇರಿಕೊಳ್ಳುತ್ತಾರೆ. ಹೆಚ್ಚಾಗಿ ಹಿಂದಿ ಬಾರದ ತಮಿಳುನಾಡಿನ ಮಹಿಳೆ ಗುಂಪಿನಲ್ಲಿದ್ದರೂ ಕೂಡಾ ಪ್ರತ್ಯೇಕವಾದಂತೆ ಇರುತ್ತಾರೆ.

ಆದರೆ ತಮಿಳಿನ ಮಹಿಳೆಗೆ ಹಿಂದಿ ಬರುವುದಿಲ್ಲ ಎಂದು ತಿಳಿದ ಬಳಿಕ ಹಿಂದಿ ಮಾತನಾಡುವ ಮಹಿಳೆಯೊಬ್ಬರು ತನ್ನಗೆ ಬಂದಷ್ಟು ಹಿಂದಿಯಲ್ಲಿ ಮಾತನಾಡುತ್ತಾ ಘಟನೆಯನ್ನು ವಿವರಿಸುತ್ತಾರೆ. ಆ ವೇಳೆ ಎಲ್ಲರೂ ಜೊತೆಯಾಗಿ ಸಂಭಾಷಣೆ ನಡೆಸುತ್ತಾರೆ. ಈ ಜಾಹೀರಾತಿನ ಮೂಲಕ ಡೈರಿ ಮಿಲ್ಕ್ ಇಂಗ್ಲೀಷ್ ಅನ್ನು ಮಾಧ್ಯಮವಾಗಿ ಬಳಸಿಕೊಂಡಿದ್ದಾರೆ. ಹಿಂದಿ ಹೇರಿಕೆ ವಿರುದ್ಧ ಸ್ಪಷ್ಟ ಸಂದೇಶ ನೀಡಿದಂತಿದೆ.

ನೆಟ್ಟಿಗರ ಪ್ರತಿಕ್ರಿಯೆ ಹೇಗಿದೆ?

ಈ ಜಾಹೀರಾತು ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. “ಉತ್ತರ- ದಕ್ಷಿಣದ ಭಾಷಾ ರಾಜಕೀಯದ ಬಗ್ಗೆ ನನಗೆ ಅರ್ಥವಾಗುವುದಿಲ್ಲ. ಆದರೆ ಇದು ಅತೀ ಉತ್ತಮವಾದ ಜಾಹೀರಾತಾಗಿದೆ. ಡೈರಿ ಮಿಲ್ಕ್ ಇಂಡಿಯಾ ಯಾವೆಗಲೂ ಆ ಸಮಯಕ್ಕೆ ತಕ್ಕುದಾದ ಜಾಹೀರಾತು ನೀಡುತ್ತದೆ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

ಇನ್ನೋರ್ವ ನೆಟ್ಟಿಗರು, “ಇಂಗ್ಲೀಷ್ ಎಂದಿಗೂ ಉತ್ತಮ ಸಂವಾದ ಭಾಷೆಯಾಗಿದೆ. ಸ್ಥಳೀಯ ಭಾಷೆಗಳು ಬಾರದಿದ್ದಾಗ ಬರುವಷ್ಟು ಇಂಗ್ಲೀಷ್‌ನಲ್ಲೇ ಮಾತನಾಡಬಹುದು. ಇದು ಉತ್ತಮ ಜಾಹೀರಾತಾಗಿದೆ. ನೇರವಾಗಿ ಏನೂ ಹೇಳಬೇಕೋ ಅದನ್ನು ಹೇಳಲಾಗಿದೆ. ಸರಳವಾದ ವಿವರಣೆಯಿದೆ” ಎಂದಿದ್ದಾರೆ.

“ಸದ್ಯ ಎಲ್ಲವೂ ಗೂಗಲ್‌ನಲ್ಲಿ ಸಿಗುವಾಗ ಹಿಂದಿಯನ್ನು ಕಲಿಯುವ ಅಗತ್ಯವೇನಿದೆ? ಯಾರಿಗೆ ಅನಿವಾರ್ಯವಾಗಿ ಹಿಂದಿ ಕಲಿಯಬೇಕೋ ಅವರು ಆ ಸಮಯ ಬಂದಾಗ ಕಲಿಯುತ್ತಾರೆ. ಪ್ರಾಥಮಿಕ ಶಾಲೆಯಿಂದಲೇ ಹಿಂದಿ ಕಲಿಯಬೇಕಾದ ಅಗತ್ಯವೇನಿಲ್ಲ” ಎಂದು ಸತೀಶ್ ಕುಮಾರ್ ಎಂಬ ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X