ದಲಿತ ಬಾಲಕನಿಗೆ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು: ಮೂವರ ಬಂಧನ

Date:

Advertisements

ಜಾತಿವಾದಿ ಪ್ರಬಲ ಜಾತಿಯ ದುಷ್ಕರ್ಮಿಗಳು ದಲಿತ ಅಪ್ರಾಪ್ತ ಬಾಲಕನಿಗೆ ಅಮಾನವೀಯವಾಗಿ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ಜಾತಿ ದೌರ್ಜನ್ಯದ ಈ ಘಟನೆ ನಡೆಸಿದ್ದು, ಗುರುವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

15 ವರ್ಷ ವಯಸ್ಸಿನ ಸಂತ್ರಸ್ತ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೌಂಡ್ ಮಿಕ್ಸರ್ ಮತ್ತು ಆಡಿಯೊ ಸಿಸ್ಟಮ್‌ಗಳನ್ನು ಹೊಂದಿಸುವ ಕೌಶಲ್ಯವನ್ನು ಕಲಿತಿದ್ದರು. ಮಂಗಳವಾರ ಅದೇ ಕೆಲಸಕ್ಕೆ ತೆರಳಿದ್ದರು. ಅಂದಿನ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಕಿಶನ್ ತಿವಾರಿ, ದಿಲೀಪ್ ಮಿಶ್ರಾ ಮತ್ತು ಸತ್ಯಂ ತಿವಾರಿ ಎಂಬುವರು ಆತನ ಮೇಲೆ ಜಾತಿ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.

Advertisements

ದಿಲೀಪ್ ಮಿಶ್ರಾ ಮದ್ಯದ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸತ್ಯಂ ಮತ್ತು ಕಿಶನ್ ಬಾಲಕನನ್ನು ಹಿಡಿದುಕೊಂಡಿದ್ದಾರೆ. ಮೂತ್ರವಿದ್ದ ಬಾಟಲಿಯನ್ನು ಬಾಲಕನ ಬಾಯಿಗೆ ಬಲವಂತವಾಗಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಆರೋಪಿಗಳ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಿಯೊ ಮಿಕ್ಸಿಂಗ್‌ಗಾಗಿ ಬಾಲಕನನ್ನು ಕರೆಸಿದ್ದರು. ಆ ಕೆಲಸಕ್ಕೆ ಬಾಲಕ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕಾಗಿ ಆರೋಪಿಗಳು ಆತನ ಮೇಲೆ ಸಿಟ್ಟಾಗಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

“ಆರೋಪಿಗಳು ಅಪ್ರಾಪ್ತರೊಂದಿಗೆ ಅನುಚಿತವಾಗಿ ವರ್ತಿಸಿ, ಥಳಿಸಿದ್ದಾರೆ. ಅವರಲ್ಲಿ ಒಬ್ಬರು ಇಡೀ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ” ಎಂದು ಗಿಲೌಲಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಹಿಮಾ ನಾಥ್ ಉಪಾಧ್ಯಾಯ ಹೇಳಿದ್ದಾರೆ.

ಸಂತ್ರಸ್ತ ಬಾಲಕ ಮನೆಗೆ ಬಂದು ತನ್ನ ಅಣ್ಣನಿಗೆ ಘಟನೆಯ ಬಗ್ಗೆ ಹೇಳಿಕೊಂಡಿದ್ದು, ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X