ಅಂಬೇಡ್ಕರ್ ಹುಟ್ಟಿದ ನಾಡಿನಲ್ಲಿ ದಲಿತ ವರನಿಗೆ ದೇವಸ್ಥಾನ ಪ್ರವೇಶ ನಿರಾಕರಣೆ – ಜಾತಿ ದೌರ್ಜನ್ಯ

Date:

Advertisements

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರು 134 ಜನ್ಮ ದಿನಾಚರಣೆಯಲ್ಲಿ ಏಪ್ರಿಲ್ 14ರಂದು (ಸೋಮವಾರ) ಆಚರಿಸಲಾಗಿದೆ. ಅದೇ ದಿನ, ಅಂಬೇಡ್ಕರ್ ಜನಸಿದ ಮಧ್ಯಪ್ರದೇಶದ ಇಂಧೋರ್ ಜಿಲ್ಲೆಯಲ್ಲಿ ದಲಿತ ವರನಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿ, ಜಾತಿ ದೌರ್ಜನ್ಯ ನಡೆಸಿರುವ ಘಟನೆ ನಡೆದಿದೆ.

ಬಾಬಾ ಸಾಹೇಬ್ಅಂಬೇಡ್ಕರರು 1891ರ ಏಪ್ರಿಲ್ 14ರಂದು ಇಂಧೋರ್ ಜಿಲ್ಲೆಯ ಮಾಹೋ ಗ್ರಾಮದಲ್ಲಿ ಜನಿಸಿದ್ದರು. ಇದೀಗ, 134 ವರ್ಷಗಳ ಬಳಿಕ ಇದೇ ಜಿಲ್ಲೆಯಲ್ಲಿ ಅಂಬೇಡ್ಕರ್ ಜನ್ಮ ದಿನದಂದೇ ಜಾತಿ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

ಇಂಧೋರ್ ಜಿಲ್ಲೆಯ ಸಾಂಘ್ವಿ ಗ್ರಾಮದಲ್ಲಿ ದಲಿತ ಜೋಡಿಯ ವಿವಾಹ ನಿಶ್ಚಯವಾಗಿತ್ತು. ಗ್ರಾಮಕ್ಕೆ ಬಂದ ವರನನ್ನು ಪೂಜೆ ಸಲ್ಲಿಸಲು ದೇವಾಸ್ಥಾನಕ್ಕೆ ಕರೆದೊಯ್ದಾಗ ಅವರನ್ನು ಗ್ರಾಮದ ಪ್ರಬಲ ಜಾತಿಯವರು ತಡೆದಿದ್ದಾರೆ. ವರ ದಲಿತ ಎಂಬ ಕಾರಣಕ್ಕಾಗಿ ದೇವಾಲಯ ಪ್ರವೇಶಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

Advertisements

ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಮಾರು 2 ಗಂಟೆಗಳ ಕಾಲ ಜಾತಿವಾದಿ ಪ್ರಬಲ ಜಾತಿಯವರು ಮತ್ತು ವಧುವಿನ ಕುಟುಂಬದ ನಡುವೆ ವಾಗ್ವಾದ ನಡೆದಿದೆ. ಅಂತಿಮವಾಗಿ, ಸ್ಥಳಕ್ಕೆ ಪೊಲೀಸರನ್ನು ಕರೆಸಲಾಗಿದ್ದು, ಪೊಲೀಸರ ಸಮ್ಮುಖದಲ್ಲಿ ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಈ ವರದಿ ಓದಿದ್ದೀರಾ?: ‘ಕ್ರಾಂತಿ ಮತ್ತು ಪ್ರತಿಕ್ರಾಂತಿ’: ಅಂಬೇಡ್ಕರ್ ತೆರೆದಿಟ್ಟ ಬೌದ್ಧ ಭಾರತದ ಇತಿಹಾಸ

ಘಟನೆಯನ್ನು ಖಂಡಿಸಿರುವ ಅಖಿಲ ಭಾರತ ಬಲೈ ಮಹಾಸಂಘದ ಅಧ್ಯಕ್ಷ ಮನೋಜ್ ಪರ್ಮಾರ್, “ನಮ್ಮ ಸಮುದಾಯವು ಇನ್ನೂ ಜಾತಿ ತಾರತಮ್ಯ ಎದುರಿಸುತ್ತಿದೆ. ದಲಿತರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಘ್ವಿ ಗ್ರಾಮದಲ್ಲಿ, ಪರಿಶಿಷ್ಟ ಜಾತಿಯ ವರನನ್ನು ದೇವಸ್ಥಾನ ಪ್ರವೇಶಿಸದಂತೆ ತಡೆಯಲಾಗಿಲ್ಲ. ಬದಲಾಗಿ, ಗರ್ಭಗುಡಿ ಪ್ರವೇಶಿಸದಂತೆ ತಡೆಯಲಾಗಿದೆ. ಗರ್ಭಗುಡಿಗೆ ಅರ್ಚಕರು ಮಾತ್ರವೇ ಹೋಗಬಹುದು ಎಂಬುದು ಗ್ರಾಮದ ದೇವಾಲಯದ ನಿಯಮವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X