ಮಹಾರಾಷ್ಟ್ರ | ಮೇಲ್ಜಾತಿಯವರಿಂದ ಹಲ್ಲೆ ನಂತರ ದಲಿತ ಯುವಕ ಆತ್ಮಹತ್ಯೆ

Date:

Advertisements

ದಲಿತ ಯುವಕನೊಬ್ಬನ ಆತ್ಮಹತ್ಯೆಯ ನಂತರ ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಕೊಪ್ರಾಡಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮೃತ ಯುವಕನನ್ನು ವಿಠಲ್‌ ನಿತಿನ್ ಕಾಂತಿಲಾಲ್‌ ಶಿಂಧೆ ಎಂದು ಗುರುತಿಸಲಾಗಿದೆ. ಗ್ರಾಮದ ಸ್ಥಳೀಯ ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸಿದ ನಂತರ ಮೇಲ್ಜಾತಿ ಯುವಕರು ಹಲ್ಲೆ ನಡೆಸಿ ನಿಂದಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರದಿಯ ಪ್ರಕಾರ ವಿಠಲ್ ಹಿಂದೂ ಮಹರ್‌ ದಲಿತ ಸಮುದಾಯದ ಸದಸ್ಯರಾಗಿದ್ದರು. ಮೇಲ್ಜಾತಿ ಮರಾಠ ಸಮುದಾಯದ ಕೆಲವರಿಂದ ವಿರೋಧಕ್ಕೆ ಒಳಗಾಗಿದ್ದರು.

Advertisements

ಎಫ್‌ಐಆರ್‌ನಲ್ಲಿರುವಂತೆ ವಿಠಲ್‌ ತಂದೆ ಕಾಂತಿಲಾಲ್‌ ಅವರ ಹೇಳಿಕೆಯ ಪ್ರಕಾರ, ಮೇ 1ರಂದು ತಮಾಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮೇಲ್ಜಾತಿ ಯುವಕರು ನಿಂದಿಸಿ ವಿಠಲ್‌ ಮೇಲೆ ಹಲ್ಲೆ ನಡೆಸಿದ್ದಾರೆ. ವಿಠಲ್‌ನನ್ನು ಸ್ಮಶಾಣ ಭೂಮಿಗೆ ಕರೆದೋಯ್ದು ಅಲ್ಲಿಯೂ ಜಗಳ ಪ್ರಾರಂಭಿಸಿ ಆತನ ಮೈಮೇಲಿದ್ದ ಬಟ್ಟೆಯನ್ನು ಬಲವಂತವಾಗಿ ಕಿತ್ತೆಸೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಗಾಯಗೊಂಡು ಮನೆಗೆ ಮರಳಿದ ವಿಠಲ್‌ ಮೇಲ್ಜಾತಿ ಜನರ ದೌರ್ಜನ್ಯ ಹಾಗೂ ಅವಮಾನದಿಂದ ಮನನೊಂದು ಮರುದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಆತ್ಮಹತ್ಯೆ ಚೀಟಿ ಬರೆದಿಟ್ಟಿದ್ದು, ಇದರಲ್ಲಿ ಇಬ್ಬರು ಪ್ರಮುಖ ಆರೋಪಿಗಳ ಬಗ್ಗೆ ವಿವರಿಸಿದ್ದಾರೆ.

ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವ ಪೊಲೀಸರು ಆರೋಪಿಗಳ ವಿರುದ್ಧ ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ. ಪ್ರಮುಖ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಘಟನೆಯ ನಂತರ ವಿಠಲ್‌ ಕುಟುಂಬದವರ ಜೊತೆ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದರು. ಮೃತ ವಿಠಲ್ ಪೋಷಕರ ಜೊತೆ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X