ರಾಜಸ್ಥಾನ| ದಲಿತ ವ್ಯಕ್ತಿಯನ್ನು ತಲೆಕೆಳಗಾಗಿ ನೇತಾಡಿಸಿ ಹಲ್ಲೆ

Date:

ಬೈಕ್ ಕದ್ದಿರಬೇಕು ಎಂಬ ಶಂಕೆಯಿಂದ ದಲಿತ ವ್ಯಕ್ತಿಯೊಬ್ಬರನ್ನು ತಲೆ ಕೆಳಗಾಗಿ ನೇತಾಡಿಸಿ, ಅಮಾನುಷವಾಗಿ ಥಳಿಸಿದ ಘಟನೆ ರಾಜಸ್ಥಾನದ ಬರ್ಮೆರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

- Advertisement -

ಗುಡಮಲಾನಿ ಪ್ರದೇಶದ ಭಕ್ರಾಪುರ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಮತ್ತೊಂದು ಪ್ರಕರಣದಲ್ಲಿ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದ ಶ್ರವಣ್ ಕುಮಾರ್ ಎಂಬ ದಲಿತ ವ್ಯಕ್ತಿ ಸಂತ್ರಸ್ತ ಯುವಕ. ಸ್ಥಳೀಯ ಮೇಳವೊಂದರಲ್ಲಿ ಬೈಕ್ ಕದ್ದ ಆರೋಪದಲ್ಲಿ ಡಿಸೆಂಬರ್ 29ರಂದು ಶ್ರವಣ್ ಕುಮಾರ್ ನನ್ನು ಬಂಧಿಸಲಾಗಿತ್ತು ಎಂದು ಬರ್ಮೆರ್ ಎಸ್ಪಿ ನರೇಂದ್ರ ಸಿಂಗ್ ಮೀನಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕೆಲ ದಿನಗಳ ಬಳಿಕ ಅತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಆತ ಮತ್ತೊಂದು ಬೈಕ್ ಕದ್ದಿದ್ದಾನೆ ಎನ್ನುವುದು ಗ್ರಾಮಸ್ಥರ ಆರೋಪ. ಆದರೆ ಈ ಆರೋಪವನ್ನು ಕುಮಾರ್ ನಿರಾಕರಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಶುಕ್ರವಾರ ಗ್ರಾಮಸ್ಥರು ಕುಮಾರ್ ನನ್ನು ಹಿಡಿದು ಕೈಗಳನ್ನು ಕಟ್ಟಿ ತಲೆ ಕೆಳಗಾಗಿ ಮರಕ್ಕೆ ನೇತು ಹಾಕಿ ನಿರ್ದಯವಾಗಿ ಥಳಿಸಿದ್ದಾರೆ. ಈ ಹಲ್ಲೆಯ ವಿಡಿಯೊ ಚಿತ್ರೀಕರಣವನ್ನೂ ಮಾಡಲಾಗಿದ್ದು ಇದು ವೈರಲ್ ಆಗಿದೆ ಎಂದು ಮೂಲಗಳು ಹೇಳಿವೆ.

ಸಂತ್ರಸ್ತ ವ್ಯಕ್ತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮತ್ತು 53 ಸೆಕೆಂಡಿನ ವಿಡಿಯೊ ತುಣುಕನ್ನು ಪೊಲೀಸರು ಪರಿಶೀಲಿಸಿದ ಬಳಿಕ ಪ್ರಕರಣ ದಾಖಲಿಸಲಾಗಿದೆ ಎಂದು ಗುಡಮಲಾನಿ ಡಿವೈಎಸ್ಪಿ ಸುಖರಾಂ ಬಿಷ್ಣೋಯಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...