ರಾಜಸ್ಥಾನ : ವಿದ್ಯುತ್ ತಂತಿ ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

Date:

Advertisements

ವಿದ್ಯುತ್ ತಂತಿ ಕಳ್ಳತನದ ಆರೋಪದ ಮೇಲೆ ವಿದ್ಯುತ್ ಇಲಾಖೆಯ ಭದ್ರತಾ ಸಿಬ್ಬಂದಿ ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ರತುಸಾರ್ ಗ್ರಾಮವೊಂದರಲ್ಲಿ ನಡೆದಿದೆ.

ರತುಸಾರ್ ಗ್ರಾಮದವರಾದ ಕನ್ನಯ್ಯಲಾಲ್ ಮೇಘಾವಾಲ್ ಹತ್ಯೆಯಾದ ದಲಿತ ಸಮುದಾಯದ ಯುವಕ. ಕನ್ನಯ್ಯಲಾಲ್ ಮೇಘಾವಾಲ್ ಹಾಗೂ ಗಂಗಾರಾಮ್ ಮೇಘಾವಾಲ್ ಎಂಬುವವರು 400ಕೆವಿ ಹೈಟೆನ್ಷನ್ ಸಾಮರ್ಥ್ಯದ ವಿದ್ಯುತ್ ತಂತಿಯನ್ನು ಕಳವು ಮಾಡಿದ್ದಾರೆ ಎಂಬ ಶಂಕೆಯ ಮೇಲೆ ವಿದ್ಯುತ್ ಇಲಾಖೆಯ ನಾಲ್ವರು ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

Advertisements

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಕನ್ನಯ್ಯಲಾಲ್ ಮೇಘಾವಾಲ್ ಸ್ಥಳೀಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಗಂಗಾರಾಮ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸುಮಿತ್ ಶರ್ಮಾ, ಗೋವಿಂದ್ ಶರ್ಮಾ, ಭಾರತ್ ಸಿಂಗ್ ಹಾಗೂ ಸಂಜಯ್ ಯಾದವ್‌ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಕನ್ನಯ್ಯಲಾಲ್ ಮೇಘಾವಾಲ್ ಮೃತದೇಹವನ್ನು ಸ್ವೀಕರಿಸಲು ಕುಟುಂಬಸ್ಥರು ನಿರಾಕರಿಸಿದ್ದು, ಆರೋಪಿಗಳ ಶೀಘ್ರ ಬಂಧನದ ಜೊತೆ ಕುಟುಂಬಸ್ಥರಿಗೆ ಒಂದು ಕೋಟಿ ರೂ. ಪರಿಹಾರ ಹಾಗೂ ಸರ್ಕಾರಿ ನೌಕರಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ. ಮೃತ ಕನ್ನಯ್ಯಲಾಲ್ ಮೇಘಾವಾಲ್ ಅವರ ಪುತ್ರ, ಸ್ಥಳೀಯ ಶಾಸಕ ಅವರ ನೇತೃತ್ವದಲ್ಲಿ ನೂರಾರು ಮಂದಿ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X