ಬೋರ್‌ವೆಲ್ ನೀರು ಬಳಸಿದ್ದಕ್ಕೆ ದಲಿತ ಯುವಕನಿಗೆ ಥಳಿಸಿ ಕೊಂದ ದುಷ್ಕರ್ಮಿಗಳು

Date:

Advertisements

ಬೋರ್‌ವೆಲ್‌ ನೀರು ಬಳಸಿದ್ದಕ್ಕೆ ದಲಿತ ಯುವಕನಿಗೆ ಗ್ರಾಮದ ಸರಪಂಚ್ ಮತ್ತು ಸರಪಂಚ್‌ನ ಪತ್ನಿ ಸೇರಿದಂತೆ ಕನಿಷ್ಠ ಐವರು ಥಳಿಸಿ ಕೊಂದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ.

ಗ್ವಾಲಿಯರ್ ಜಿಲ್ಲೆಯ 27 ವರ್ಷದ ನಾರದ್ ಜಾತವ್ ಎಂಬ ದಲಿತ ಯುವಕನು ಇಂದರ್‌ಗಢ ಗ್ರಾಮದಲ್ಲಿ ಮಂಗಳವಾರ ತನ್ನ ತಾಯಿಯ ಚಿಕ್ಕಪ್ಪನ ಹೊಲಗಳಿಗೆ ಬೋರ್‌ವೆಲ್‌ ನೀರನ್ನು ಹಾಕುತ್ತಿದ್ದನು. ಈ ವೇಳೆ ಗ್ರಾಮದ ಸರಪಂಚ್ ಪದಮ್ ಸಿಂಗ್ ಧಕಡ್, ಸರಪಂಚ್‌ನ ಪತ್ನಿ ದಾಖಾ ಬಾಯಿ ಮತ್ತು ಅವರ ಸಹಾಯಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವಪುರಿ ಜಿಲ್ಲಾ ಪೊಲೀಸರ ಪ್ರಕಾರ ಬೋರ್‌ವೆಲ್‌ ನೀರು ಬಳಸುವ ವಿಚಾರದಲ್ಲಿ ಒಬಿಸಿ ಧಕಡ್ ಜಾತಿ ಮತ್ತು ಎಸ್‌ಸಿ ಜಾತವ್ ಜಾತಿಯ ನಡುವೆ ಹಲವು ವರ್ಷಗಳಿಂದ ವಾಗ್ವಾದಗಳು ನಡೆಯುತ್ತಿದೆ.

Advertisements

ಇದನ್ನು ಓದಿದ್ದೀರಾ? BIG BREAKING | ತುಮಕೂರು ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ಕ್ರೂರ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಂಪೊಂದು ನಾರದ್ ಜಾತವ್ ಮೇಲೆ ಕೋಲುಗಳು ಮತ್ತು ರಬ್ಬರ್ ಪೈಪ್‌ಗಳಿಂದ ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದು ಕಾಣಬಹುದು. ಈ ವೇಳೆ ಮಹಿಳೆಯರು ಸೇರಿದಂತೆ ಹಲವು ಮಂದಿ ನಿಂತು ನೋಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸದ್ಯ ಎಂಟು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಗ್ರಾಮದ ಸರಪಂಚ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಇನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾಗೆಯೇ ಮೃತ ನಾರದ ಜಾತವ್ ಅವರ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X