ದಲಿತರು, ಆದಿವಾಸಿಗಳಿಗೆ 50 ವರ್ಷಕ್ಕೆ ಪಿಂಚಣಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಘೋಷಣೆ

Date:

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರು ರಾಜ್ಯದಲ್ಲಿ ಇನ್ನು ಮುಂದೆ 60 ವರ್ಷದ ಬದಲು 50 ವರ್ಷಕ್ಕೆ ಪಿಂಚಣಿಗೆ ಅರ್ಹರಾಗುತ್ತಾರೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ತಿಳಿಸಿದ್ದಾರೆ.

ಜೆಎಂಎಂ ಸರ್ಕಾರ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹೇಮಂತ್ ಸೊರೇನ್ ಈ ಘೋಷಣೆ ಮಾಡಿದ್ದಾರೆ.

“ಸರ್ಕಾರವು ಆದಿವಾಸಿ, ದಲಿತ ಸಮುದಾಯದವರಿಗೆ 50 ವರ್ಷ ಪೂರ್ಣಗೊಂಡ ನಂತರ ಪಿಂಚಣಿ ವ್ಯವಸ್ಥೆ ಸೌಲಭ್ಯ ನೀಡಲು ನಿರ್ಧರಿಸಿದೆ. ಈ ಸಮುದಾಯದವರಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದು, 60 ವರ್ಷದ ನಂತರ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಸೌಲಭ್ಯವು ವಿಶೇಷವಾಗಿ ಅಳಿವಿನಂಚಿನಲ್ಲಿರುವ ದುರ್ಬಲ ಬುಡಕಟ್ಟು ಸಮುದಾಯದವರಿಗೆ ಅನುಕೂಲವಾಗುತ್ತದೆ” ಎಂದು ಜಾರ್ಖಂಡ್ ಮುಖ್ಯಮಂತ್ರಿ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

“ಜಾರ್ಖಂಡ್ ರಾಜ್ಯ ರಚನೆಯಾಗಿ 20 ವರ್ಷ ಕಳೆದರೂ ಕೇವಲ 16 ಲಕ್ಷ ಮಂದಿ ಮಾತ್ರ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದರು. ಆದಾಗ್ಯೂ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪಿಂಚಣಿದಾರರ ಸಂಖ್ಯೆ 36 ಲಕ್ಷಕ್ಕೆ ಏರಿಕೆಯಾಗಿದೆ” ಎಂದು ಸೊರೇನ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಾರ್ಖಂಡ್ ಸಿಎಂ 4547 ಕೋಟಿ ರೂ. ಮೊತ್ತದ 343 ಯೋಜನೆಗಳಿಗೆ ಅಡಿಗಲ್ಲು ನೆರವೇರಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯದಲ್ಲಿ ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿ ಪೊಳ್ಳು ಭರವಸೆ ನೀಡುತ್ತಿದೆ ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಾರ್ಯಕ್ರಮದಲ್ಲಿ 7 ಸಾವಿರ ಮಂದಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶವನ್ನು ನೀಡಲಾಯಿತು. 45 ಸಾವಿರ ಖಾಲಿ ಉದ್ಯೋಗಗಳ ಭರ್ತಿ ಕೂಡ ಪ್ರಗತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X