ದಲ್ಲೇವಾಲ್ ಅನಿರ್ದಿಷ್ಟಾವಧಿ ಉಪವಾಸ ಅಂತ್ಯಗೊಳಿಸಿಲ್ಲ: ರೈತ ನಾಯಕ ಅಭಿಮನ್ಯು

Date:

Advertisements

ಕಳೆದ ವಾರ ರಾಜ್ಯ ಪೊಲೀಸರು ಬಂಧಿಸಿದ್ದ ರೈತರನ್ನು ವಿವಿಧ ಜೈಲುಗಳಿಂದ ಬಿಡುಗಡೆ ಮಾಡಿದ ನಂತರ ಪಂಜಾಬ್ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಒಂದು ಲೋಟ ನೀರು ಕುಡಿದಿದ್ದಾರೆ. ಆದರೆ ಇನ್ನೂ ಕೂಡಾ ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಅಂತ್ಯಗೊಳಿಸಿಲ್ಲ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಶನಿವಾರ ಹೇಳಿದ್ದಾರೆ.

ದಲ್ಲೇವಾಲ್ ನೀರು ಕುಡಿದು ಉಪವಾಸ ಅಂತ್ಯಗೊಳಿಸಿದ್ದಾರೆ ಎಂದು ಪಂಜಾಬ್ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪಂಜಾಬ್ ಸರ್ಕಾರದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರೈತ ನಾಯಕ ಅಭಿಮನ್ಯು, “ದಲ್ಲೇವಾಲ್ ಉಪವಾಸ ಅಂತ್ಯಗೊಳಿಸಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ರೈತರ ಬೇಡಿಕೆಗಳು ಈಡೇರುವವರೆಗೆ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೇವಾಲ್

Advertisements

“ಎಲ್ಲಾ ರೈತರ ಬಿಡುಗಡೆಯ ನಂತರವೇ ತಾನು ನೀರು ಕುಡಿಯುವುದಾಗಿ ದಲ್ಲೇವಾಲ್ ಹೇಳಿದ್ದರು. ಅದರಂತೆ ರೈತ ನಾಯಕರನ್ನು ಬಿಡುಗಡೆ ಮಾಡಿದ ನಂತರ ದಲ್ಲೇವಾಲ್ ಒಂದು ಲೋಟ ನೀರು ಕುಡಿದಿದ್ದಾರೆ. ಆದರೆ ದಲ್ಲೇವಾಲ್ ತಮ್ಮ ಉಪವಾಸ ಅಂತ್ಯಗೊಳಿಸಿದ್ದಾರೆ ಎಂದು ತಪ್ಪು ಮಾಹಿತಿಯನ್ನು ಹರಡಲಾಗಿದೆ. ಈ ಬಗ್ಗೆ ನಾವು ಸ್ಪಷ್ಟಣೆ ನೀಡಲು ಬಯಸುತ್ತೇವೆ. ದಲ್ಲೇವಾಲ್ ಅವರು ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಮಾರ್ಚ್ 19ರಂದು ಹರಿಯಾಣದ ಖಾನೌರಿ ಮತ್ತು ಶಂಭು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬಂಧಿಸಲಾಗಿದೆ. ಈ ಬೆನ್ನಲ್ಲೇ ದಲ್ಲೇವಾಲ್ ರೈತರ ಬಿಡುಗಡೆಯಾಗುವವರೆಗೂ ನೀರು ಕುಡಿಯುವುದಿಲ್ಲ ಎಂದು ಹೇಳಿದ್ದರು. ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 70 ವರ್ಷದ ದಲ್ಲೇವಾಲ್ ಹಲವು ತಿಂಗಳುಗಳಿಂದ ಉಪವಾಸ ನಡೆಸುತ್ತಿದ್ದಾರೆ. ಆರಂಭದಲ್ಲಿ ವೈದ್ಯಕೀಯ ನೆರವು ನಿರಾಕರಿಸಿದ್ದ ದಲ್ಲೇವಾಲ್ ಇದೀಗ ನೆರವು ಪಡೆಯುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X