ಡಿಡಿ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಮುನ್ಸೂಚನೆ: ಎಂ ಕೆ ಸ್ಟಾಲಿನ್

Date:

Advertisements

ಸರ್ಕಾರಿ ಸ್ವಾಮ್ಯದ ದೂರದರ್ಶನ ಲೋಗೋ ಬಣ್ಣವನ್ನು ಕೇಸರೀಕರಣಗೊಳಿಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್, ಡಿಡಿ ಲೋಗೋ ಬಣ್ಣ ಬದಲಿಸಿರುವುದು ಕೇಸರೀಕರಣವನ್ನು ಎಲ್ಲಡೆ ಬಳಸುವ ಬಿಜೆಪಿ ಪಿತೂರಿಯ ಮುನ್ಸೂಚನೆ ಎಂದು ತಿಳಿಸಿದ್ದಾರೆ.

“ಲೋಗೋ ಬದಲಾವಣೆ ಕೇಸರೀಕರಣದ ಮುನ್ಸೂಚನೆಯಾಗಿದೆ. 2024ರ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಇಂತಹ ಪ್ಯಾಸಿಸಂ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಲಿದ್ದಾರೆ.  ತಮಿಳು ಕವಿ ತಿರುನಳ್ಳುವರ್‌ ಅವರನ್ನು ಕೇಸರೀಕರಣಗೊಳಿಸಲಾಗಿದೆ. ತಮಿಳುನಾಡಿನ ಮಹಾನ್‌ ವ್ಯಕ್ತಿಗಳ ಪ್ರತಿಮೆಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ” ಎಂದು ಸ್ಟಾಲಿನ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

Advertisements

ಲೋಗೋ ಬದಲಾವಣೆ ಬಗ್ಗೆ ಪ್ರತಿಪಕ್ಷಗಳು ಕೂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಇದು ತೀವ್ರ ಅಕ್ರಮವಾಗಿದ್ದು, ಬಿಜೆಪಿ ಪರವಾದ ಪಕ್ಷಪಾತವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ ಬಣ್ಣವನ್ನು ಕೇಸರಿ ಬಣ್ಣದೊಂದಿಗೆ ಬದಲಾಯಿಸಲಾಗಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಿರುವ ಡಿಡಿ ನ್ಯೂಸ್, ನಮ್ಮ ಮೌಲ್ಯಗಳು ಹಾಗೆ ಉಳಿದುಕೊಂಡಿದ್ದು,ಹೊಸ ಅವತಾರದೊಂದಿಗೆ ನಾವು ಈಗ ಲಭ್ಯವಿದ್ದೇವೆ. ಎಲ್ಲ ನೂತನ ಡಿಡಿ ನ್ಯೂಸ್‌ ಅನುಭವದೊಂದಿಗೆ ಹಿಂದೆಂದಿಗಿಂತಲೂ ಹೊಸ ಸುದ್ದಿಯ ಪಯಣಕ್ಕೆ ಸಿದ್ದರಾಗಿ ಎಂದು ತಿಳಿಸಿತ್ತು.

ಡಿಡಿ ನ್ಯೂಸ್‌ ಲೋಗೊಗೆ ಕೇಸರಿ ಬಣ್ಣ ಕೇಸರಿಕರಣಗೊಳಿಸಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ತನ್ನ ಕೇಸರಿ ಬಣ್ಣವನ್ನು ಸರ್ಕಾರಿ ಅಧೀನದ ಮಾಧ್ಯಮ ಸಂಸ್ಥೆಗೂ ಬಳಿದಿದೆ. ಕೇಸರಿ ಬಣ್ಣವು ಹಿಂದುತ್ವದೊಂದಿಗೆ ಸಂಬಂಧ ಹೊಂದದ್ದು, ಈ ಸಿದ್ದಾಂತವನ್ನು ಮಾಧ್ಯಮ ಸಂಸ್ಥೆಯ ಮೂಲಕ ಪ್ರತಿಪಾದಿಸಲು ಹೊರಟಿದೆ ಎಂದು ಹಲವರು ಟೀಕಿಸಿದ್ದಾರೆ.

ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಸಾರ ಭಾರತಿಯ ಮಾಜಿ ಸಿಇಒ ಜವಾಹರ್ ಸರ್ಕಾರ್, ರಾಷ್ಟ್ರೀಯ ಪ್ರಸಾರ ಮಾಧ್ಯಮ ದೂರದರ್ಶನದ ಐತಿಹಾಸಿಕವಾದ ಪ್ರಮುಖ ಲೋಗೊ ಕೇಸರಿಕರಣಗೊಂಡಿದೆ. ಪ್ರಸಾರ ಭಾರತಿಯ ಮಾಜಿ ಸಿಇಒ ಆಗಿ ಕೇಸರಿಕರಣದ ಎಚ್ಚರಿಕೆ ಹಾಗೂ ಅನುಭವದೊಂದಿಗೆ ಕಾರ್ಯಕ್ರಮವನ್ನು ನೋಡುತ್ತಿದ್ದೇನೆ. ಇದು ಇನ್ನು ಪ್ರಸಾರ ಭಾರತಿಯಲ್ಲ, ಇದು ಪ್ರಚಾರ ಭಾರತಿಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದರು.

ದೂರದರ್ಶನವು ಪ್ರಸಾರ ಭಾರತಿಯ ಅಂಗಸಂಸ್ಥೆಯಾಗಿದ್ದು, ಆಲ್‌ ಇಂಡಿಯಾ ರೇಡಿಯೋ ಸೇರಿದಂತೆ ಹಲವು ಅಂಗಸಂಸ್ಥೆಗಳಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X