ಒತ್ತಡದಿಂದ ಡಬ್ಲ್ಯುಎಫ್ಐ ಅಮಾನತು ನಿರ್ಧಾರ: ವಿಪಕ್ಷ ನಾಯಕರ ಆರೋಪ

Date:

Advertisements

ನೂತನವಾಗಿ ಆಯ್ಕೆಯಾಗಿರುವ ಡಬ್ಲ್ಯುಎಫ್ಐ (ಭಾರತೀಯ ಕುಸ್ತಿ ಒಕ್ಕೂಟ) ಅನ್ನು ಅಮಾನತುಗೊಳಿರುವ ಸರಕಾರದ ನಿರ್ಧಾರವು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ಸಾಕಾಗುವುದಿಲ್ಲ ಎಂದು ಪ್ರತಿಪಕ್ಷ ನಾಯಕರು ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬೆಂಬಲಿಗರಿಗೆ ಕ್ರೀಡಾ ಸಂಸ್ಥೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಏಕೆ ಅವಕಾಶ ನೀಡಲಾಯಿತು ಎಂದು ಅವರು ಪ್ರಶ್ನಿಸಿದ್ದಾರೆ.

ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ, ಬಿಜೆಪಿ ನೇತೃತ್ವದ ಸಚಿವಾಲಯವು ಮಹಿಳಾ ಕುಸ್ತಿಪಟುಗಳಿಗೆ ಸಹಾಯ ಮಾಡದೆ ತಮ್ಮನ್ನು ತಾವು ಮುಕ್ತಗೊಳಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

Advertisements

ಕಾಂಗ್ರೆಸ್ ನಾಯಕ ಉದಿತ್ ರಾಜ್, “ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಪ್ರತಿಭಟನಾ ರೀತಿಯು ಡಬ್ಲ್ಯು ಎಫ್ಐ ಚುನಾವಣೆಯನ್ನು ಅಮಾನತುಗೊಳಿಸುವಂತೆ ಕ್ರೀಡಾ ಸಚಿವಾಲಯದ ಮೇಲೆ ಒತ್ತಡ ಹೆಚ್ಚಿಸಿದೆ. ಇದು ಸ್ವಾಗತಾರ್ಹವದರೂ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಬ್ರಿಜ್ ಭೂಷಣ್ ಅವರ ಬೆಂಬಲಿಗರ ಆಯ್ಕೆಯಿಂದ ಉಂಟಾದ ಆಕ್ರೋಶದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಫಕ್ರುಲ್ ಹಸನ್ ಚಾಂದ್ ಆರೋಪಿಸಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಚುನಾವಣೆಗಳು ಡಿಸೆಂಬರ್ 21 ರಂದು ನಡೆದಿದ್ದು, ಸಂಜಯ್‌ ಸಿಂಗ್ ಮತ್ತು ಅವರ ತಂಡ ಚುನಾವಣೆಯಲ್ಲಿ ಹೆಚ್ಚಿನ ಅಂತರದಿಂದ ಗೆದ್ದಿದೆ.

ಕುಸ್ತಿ ಸಂಸ್ಥೆಯು ಅಂಡರ್ 15 ಮತ್ತು ಅಂಡರ್ 20 ರಾಷ್ಟ್ರೀಯ ಕ್ರೀಡೆಗಳನ್ನು ಸೂಕ್ತ ಮಾನಡಂಡಗಳನ್ನು ಅನುಸರಿಸದೆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಕ್ರೀಡಾ ಸಚಿವಾಲಯ ಅಮಾನತು ನಿರ್ಧಾರ ಕೈಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X