ಸಾಲ ಮರುಪಾವತಿ ವಿಳಂಬ: ಮಹಿಳೆಯ ತಲೆ ಬೋಳಿಸಿ ವಿಕೃತಿ ಮೆರೆದ ಜನ

Date:

Advertisements

ಮಹಿಳೆಯೊಬ್ಬರು ತಾವು ಪಡೆದಿದ್ದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿಲ್ಲವೆಂಬ ಕಾರಣಕ್ಕೆ, ಆಕೆಯ ತಲೆ ಬೋಳಿಸಿ, ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ತ್ರಿಪುರಾದ ಅಗರ್ತಲಾದಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆಗೆ ಅಗರ್ತಲಾದಲ್ಲಿರುವ ಸ್ವ-ಸಹಾಯ ಗುಂಪು (ಎಸ್‌ಎಚ್‌ಜಿ) ಸಾಲ ನೀಡಿತ್ತು. ಆ ಸಾಲವನ್ನು ಮರುಪಾವತಿ ಮಾಡಿಲ್ಲವೆಂದು ಎಸ್‌ಎಚ್‌ಜಿಯ ಪಾಲುದಾರರು ಆಕೆಯ ತಲೆ ಬೋಳಿಸಿ ವಿಕೃತಿ ಮೆರೆದಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಮಹಿಳಾ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಬಿಶಾಲ್‌ಗಢ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣಕಾಸಿನ ವಿವಾದದಿಂದಾಗಿ ಎಚ್‌ಎಸ್‌ಜಿಯ ಮಹಿಳೆಯ ಗುಂಪು ತನ್ನ ತಲೆ ಬೋಳಿಸಿ, ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

Advertisements

“ನನ್ನ ಪತಿ ಎಸ್‌ಎಚ್‌ಜಿಯಿಂದ ಸಾಲ ಪಡೆದಿದ್ದರು. ಅದನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ಸಾಧ್ಯವಾಗಿರಲಿಲ್ಲ. ಮರುಪಾವತಿ ಸಮಯ ನೀಡುವಂತೆ ಎಚ್‌ಎಚ್‌ಜಿ ಬಳಿ ಮನವಿ ಮಾಡಿದ್ದೆವು. ಆದರೆ, ನನ್ನ ಮನೆಗೆ ನುಗ್ಗಿದ ಸುಮಾರು 15 ಮಹಿಳೆಯರಿದ್ದ ಗುಂಪು, ನನ್ನನ್ನು ಮನೆಯಿಂದ ಹೊರಗೆ ಎಳೆದೊಯ್ದು ಅವಾಚ್ಯವಾಗಿ ನಿಂದಿಸಿ, ಥಳಿಸಿದ್ದಾರೆ. ನನ್ನ ತಲೆ ಬೋಳಿಸಿದ್ದಾರೆ” ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್‌ 74, 115(2) ಮತ್ತು 3 (5) ಅಡಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X