ದೆಹಲಿ | ಚೀಲದಲ್ಲಿ 6 ದಿನದ ಹೆಣ್ಣು ಮಗುವಿನ ಮೃತದೇಹ ಪತ್ತೆ; ತಾಯಿಯ ಬಂಧನ

Date:

Advertisements

ದೆಹಲಿಯ ಶಹದಾರಾ ಪ್ರದೇಶದಲ್ಲಿ ಮನೆಯೊಂದರ ಛಾವಣಿಯ ಮೇಲೆ ಚೀಲವೊಂದರಲ್ಲಿ 6 ದಿನದ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ. ಆಕೆಯ ತಾಯಿ ಶಿವಾನಿ (28) ವಿಚಾರಣೆಯ ಸಮಯದಲ್ಲಿ ತಾನೇ ಮಗುವನ್ನು ಎಸೆದಿರುವುದಾಗಿ ಒಪ್ಪಿಕೊಂಡ ಬಳಿಕ ಆಕೆಯನ್ನು ಬಂಧಿಸಲಾಗಿದೆ.

ಇದು ತನಗೆ ಹುಟ್ಟಿದ ನಾಲ್ಕನೇ ಹೆಣ್ಣು ಮಗುವಾಗಿದೆ. ಆದ್ದರಿಂದ ಈ ರೀತಿ ಮಾಡಿರುವುದಾಗಿ ತಿಳಿಸಿದ್ದಾಳೆ. ಈಗಾಗಲೇ ಈಕೆಗೆ ಜನಿಸಿದ ಎರಡು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

6 ವರ್ಷದ ಹೆಣ್ಣು ಮಗು ಕಾಣೆಯಾಗಿದೆ ಎಂದು ಬೆಳಗ್ಗೆ 5:30ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಗುವಿನ ತಾಯಿ ಶಿವಾನಿ ಅವರನ್ನು ವಿಚಾರಿಸಿದ್ದಾರೆ. ಹಿಂದಿನ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಪೋಷಕರ ಮನೆಗೆ ಬಂದಿರುವುದಾಗಿ, ರಾತ್ರಿ 2-2:30 ಕ್ಕೆ ತನ್ನ ಮಗುವಿಗೆ ಹಾಲುಣಿಸಿ ಬಂದು ಮಲಗಿದೆ. ಆದರೆ ಎದ್ದು ನೋಡಿದಾಗ ಮಗು ಕಾಣೆಯಾಗಿದೆ ಎಂದು ತಾಯಿ ಶಿವಾನಿ ತಿಳಿಸಿದ್ದಾರೆ.

Advertisements

ಶೋಧ ಕಾರ್ಯಾಚರಣೆ ನಡೆಯುತ್ತಿರುವ ನಡುವೆಯೇ ತಾಯಿ ಶಿವಾನಿ ಹೊಲಿಗೆಗಳನ್ನು ತೆಗೆಯಲು ತಾನು ಆಸ್ಪತ್ರೆಗೆ ಹೋಗಬೇಕಾಗಿದೆ ಎಂದು ಹೇಳಿದ್ದಾರೆ. ಇದು ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಆದರೆ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸಿ ತಾಯಿಗೆ ಆಸ್ಪತ್ರೆಗೆ ಹೋಗಲು ಅವಕಾಶ ನೀಡಿದ್ದರು.

ಇದನ್ನು ಓದಿದ್ದೀರಾ? ಹೆಣ್ಣು ಮಗು ಬೇಡವೆಂದು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ತಾಯಿ

ಜೊತೆಗೆ ನೆರೆಹೊರೆಯ ಸಿಸಿಟಿವಿಗಳನ್ನು ಪರಿಶೀಲಿಸಲು ಮತ್ತು ಹತ್ತಿರದ ಎಲ್ಲಾ ಮನೆಗಳು ಮತ್ತು ಪ್ರದೇಶಗಳನ್ನು ಪರಿಶೀಲಿಸಲು ತಂಡವನ್ನು ರಚಿಸಿದ್ದರು.

ಹುಡುಕಾಟದ ವೇಳೆ ಪಕ್ಕದ ಮನೆಯ ಮೇಲ್ಛಾವಣಿಯಲ್ಲಿ ಚೀಲವೊಂದು ಪತ್ತೆಯಾಗಿದ್ದು, ಅದರಲ್ಲಿ ಮಗು ಪತ್ತೆಯಾಗಿದೆ. ಕೂಡಲೇ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯಲಾಗಿದ್ದು, ಮಗು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇದಾದ ಬಳಿಕ ತಾಯಿ ಶಿವಾನಿಯ ವಿಚಾರಣೆ ನಡೆಸಲಾಗಿದ್ದು, ತನಗೆ ಹುಟ್ಟಿದ ನಾಲ್ಕನೇ ಹೆಣ್ಣು ಮಗುವಾದ ಕಾರಣ ತಾನೇ ಮಗುವನ್ನು ಉಸಿರುಗಟ್ಟಿಸಿ ಕೊಂದು ಎಸೆದಿರುವುದಾಗಿ ಹೇಳಿದ್ದಾಳೆ.

ತಾಯಿಯ ಹೇಳಿಕೆಯನ್ನು ಖಚಿತಪಡಿಸಿಕೊಳ್ಳಲು, ಸಾವಿನ ಕಾರಣವನ್ನು ತಿಳಿಯುವ ನಿಟ್ಟಿನಲ್ಲಿ ಮಗುವಿನ ಮರಣೋತ್ತರ ಪರೀಕ್ಷೆಯನ್ನು ಶನಿವಾರ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X