ದೆಹಲಿ | ಮದರಸಾದಲ್ಲಿ ಬಾಲಕ ನಿಗೂಢವಾಗಿ ಸಾವು

Date:

Advertisements

ಈಶಾನ್ಯ ದೆಹಲಿಯ ದಯಾಲ್‌ಪುರದ ಮದರಸಾವೊಂದರಲ್ಲಿ ಓದುತ್ತಿದ್ದ ಐದು ವರ್ಷದ ಬಾಲಕ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಾಲಕನ ಕುತ್ತಿಗೆ, ಹೊಟ್ಟೆ ಮತ್ತು ತೊಡೆಸಂದು ಪ್ರದೇಶದಲ್ಲಿ ಗುಳ್ಳೆಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಶುಕ್ರವಾರ ರಾತ್ರಿ 9.52ಕ್ಕೆ ಬ್ರಿಜ್‌ಪುರಿ ಮದರಸಾದಿಂದ ಬಾಲಕನ ಸಾವಿನ ಬಗ್ಗೆ ಕರೆ ಬಂದಿದೆ.

“ಶುಕ್ರವಾರ ಸಂಜೆ 6.30ಕ್ಕೆ ಬಾಲಕನ ತಾಯಿಗೆ ತನ್ನ ಮಗ ಅಸ್ವಸ್ಥನಾಗಿದ್ದಾನೆ ಎಂದು ತಿಳಿಸಲಾಗಿದೆ. ಆಕೆ ಆತನನ್ನು ಬ್ರಿಜ್‌ಪುರಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಆದರೆ ಅಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisements

ಮೃತ ಬಾಲಕನ ತಾಯಿ ತನ್ನ ಮಗನ ಶವದೊಂದಿಗೆ ಮದರಸಾಕ್ಕೆ ಮರಳಿದ್ದು ಮೃತದೇಹವನ್ನು ರಸ್ತೆಯಲ್ಲೇ ಇಟ್ಟು ಮದರಸಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು: ಮದರಸಾಕ್ಕೆ ಹೋಗಿ ಹೆಣ್ಣುಮಗಳಿಗೆ ಥಳಿಸಿದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ; ಸಂತ್ರಸ್ತ ಬಾಲಕಿ ಹೇಳಿಕೆ

ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಜಿಟಿಬಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಸೂಕ್ತ ತನಿಖೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಹಾಜಿ ದಿನ್ ಮೊಹಮ್ಮದ್ ಅವರು ಮದ್ರಸಾದ ಪ್ರಾಂಶುಪಾಲರಾಗಿದ್ದು, ಸುಮಾರು 250 ಹುಡುಗರು ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಈ ಪೈಕಿ ಸುಮಾರು 150 ಮಂದಿ ದೆಹಲಿಯಿಂದ ಹೊರಗಿನವರಾಗಿದ್ದಾರೆ. ಮುಖ್ಯವಾಗಿ ಅಧಿಕ ಮಂದಿ ಉತ್ತರ ಪ್ರದೇಶವರಾಗಿದ್ದಾರೆ ಎಂದು ವರದಿಯಾಗಿದೆ.

ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X