ಬಾಲಕನ ಮೇಲೆ 13 ಮಂದಿಯಿಂದ ಲೈಂಗಿಕ ದೌರ್ಜನ್ಯ: 24 ಬಾರಿ ಚಾಕುವಿನಿಂದ ಇರಿದು ಹತ್ಯೆ

Date:

Advertisements

ವಿರೋಧಿ ಗ್ಯಾಂಗ್‌ನ ಮಾಹಿತಿದಾರನಾಗಿದ್ದ ಎಂಬ ಆರೋಪದ ಮೇಲೆ 14 ವರ್ಷದ ಬಾಲಕನ ಮೇಲೆ ಒಟ್ಟು 13 ಮಂದಿ ದುರುಳರು ಲೈಂಗಿಕ ದೌರ್ಜನ್ಯ ಎಸಗಿ, 24 ಬಾರಿ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಗಳಲ್ಲಿ ಹಲವು ಮಂದಿ ಅಪ್ರಾಪ್ತ ವಯಸ್ಕರು ಎಂದು ಹೇಳಲಾಗಿದೆ.

ಜುಲೈ 1ರಂದು ದೆಹಲಿ ಕಾಲುವೆಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿತ್ತು. ದೇಹದಲ್ಲಿ 24 ಇರಿತದ ಗಾಯಗಳು ಮತ್ತು ದೌರ್ಜನ್ಯ ಎಸಗಿದ ಗಾಯಗಳು ಕಂಡುಬಂದಿತ್ತು. ಈ ಸಂಬಂಧ ಪ್ರಮುಖ ಆರೋಪಿ ಕೃಷ್ಣ ಅಲಿಯಾಸ್ ಭೋಲಾ(19) ಸೇರಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಶುಕ್ರವಾರ(ಜುಲೈ 25) ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಜುಲೈ 18ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿರುವ ಕನ್ವರ್ ಶಿಬಿರದಿಂದ ಪೊಲೀಸರು ಮೂವರನ್ನು ಬಂಧಿಸಿದ್ದರು.

ಇದನ್ನು ಓದಿದ್ದೀರಾ? ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ಶಿಕ್ಷಕಿ ಬಂಧನ

Advertisements

ಮೃತ ಬಾಲಕನು ತಮ್ಮ ವಿರೋಧಿ ಗ್ಯಾಂಗ್‌ನ ಬಧ್ವಾರ್ ಸಹೋದರರಾದ ಮೋನು ಮತ್ತು ಸೋನು ಅವರ ಮಾಹಿತಿದಾರ ಎಂದುಕೊಂಡು ಕೃಷ್ಣ ಈ ಕೊಲೆ ಮಾಡಲು ಯೋಜಿಸಿದ್ದ ಎನ್ನಲಾಗಿದೆ. ಅಕ್ರಮ ಮದ್ಯ ವ್ಯಾಪಾರ, ದರೋಡೆ ಸೇರಿದಂತೆ ಹಲವು ಆರೋಪಗಳನ್ನು ಹೊಂದಿರುವ ಬಧ್ವಾರ್ ಸಹೋದರರು ಸದ್ಯ ಜೈಲಿನಲ್ಲಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಹರೇಶ್ವರ ಸ್ವಾಮಿ, “ಸ್ವಲ್ಪ ಕೊಳೆತ ಯುವಕನ ಮೃತದೇಹವು ಮುನಕ್ ಕಾಲುವೆಯಲ್ಲಿ ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡು ಸಂಪೂರ್ಣವಾಗಿ ಬೆತ್ತಲೆಯಾಗಿ ಬಿದ್ದಿರುವುದು ಕಂಡು ಬಂದಿತ್ತು. ಮರಣೋತ್ತರ ಪರೀಕ್ಷೆಯ ವರದಿಯು ಅಪರಾಧದ ಕ್ರೂರತೆಯನ್ನು ಬಹಿರಂಗಪಡಿಸಿತು” ಎಂದು ಹೇಳಿದ್ದಾರೆ.

“ಮರಣೋತ್ತರ ಪರೀಕ್ಷೆಯ ವರದಿಗಳು ಆತನ ದೇಹದ ಮೇಲೆ 24 ಇರಿತದ ಗಾಯಗಳಿದ್ದವು ಎಂದು ಬಹಿರಂಗಪಡಿಸಿವೆ. ಗುದದ್ವಾರದಲ್ಲಿ ಗಾಯದ ಗುರುತುಗಳಿವೆ. ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೃಢಪಟ್ಟಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಕನ್ವರ್ ಯಾತ್ರಿಕರಂತೆ ನಟಿಸುತ್ತಾ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಹರಿದ್ವಾರದಲ್ಲಿ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಅಪರಾಧವನ್ನು ಒಪ್ಪಿದ್ದಾರೆ. ದೀಪಕ್, ಚಂದನ್ ಮತ್ತು ಸಚಿನ್ ಎಂಬ ಇತರ ಮೂವರು ಆರೋಪಿಗಳ ಗುರುತನ್ನು ಬಹಿರಂಗಪಡಿಸಿದರು. ಬಂಧಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X