ದೆಹಲಿ| 40 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಮಗು; ಮುಂದುವರೆದ ರಕ್ಷಣಾ ಕಾರ್ಯ

Date:

Advertisements

ರಾಷ್ಟ್ರ ರಾಜಧಾನಿ ದೆಹಲಿಯ ಕೇಶೋಪುರ್ ಮಂಡಿ ಬಳಿಯ ದೆಹಲಿ ಜಲ ಬೋರ್ಡ್ ಘಟಕದೊಳಗಿನ 40 ಅಡಿ ಆಳದ ಬೋರ್‌ವೆಲ್‌ಗೆ (ಕೊಳವೆ ಬಾವಿ) ಮಗುವೊಂದು ಬಿದ್ದಿದ್ದು, ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಸಿದ್ಧತೆ ನಡೆಸುತ್ತಿದೆ.

ಎನ್‌ಡಿಆರ್‌ಎಫ್‌ನಿಂದ ಇನ್‌ಸ್ಪೆಕ್ಟರ್ ವೀರ್ ಪ್ರತಾಪ್ ಸಿಂಗ್ ಅವರೊಂದಿಗೆ ಎನ್‌ಡಿಆರ್‌ಎಫ್ ತಂಡವು ಸ್ಥಳಕ್ಕೆ ಆಗಮಿಸಿದ್ದು, ಮಗು ಬಿದ್ದಿರುವ ಬೋರ್‌ವೆಲ್‌ಗೆ ಸಮವಾಗಿ ಹೊಸ ಬೋರ್‌ವೆಲ್ ಕೊರೆದು ರಕ್ಷಣಾ ಕಾರ್ಯಾಚರಣೆಯನ್ನು ಶೀಘ್ರ ಆರಂಭ ಮಾಡಲಿದೆ ಎಂದು ಎಎನ್‌ಐ ವರದಿ ಮಾಡಿದೆ.

ಸ್ಥಳದಲ್ಲಿ ದೆಹಲಿ ಅಗ್ನಿ ಶಾಮಕದಳ (ಡಿಎಫ್‌ಎಸ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ದೆಹಲಿ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯ ಸಾಗುತ್ತಿದೆ. ಈ ಬಗ್ಗೆ ಎಎನ್‌ಐಗೆ ಪ್ರತಿಕ್ರಿಯಿಸಿದ “ನಾವು ಈ ಬೋರ್‌ವೆಲ್‌ಗೆ ಸಮವಾಗಿ ಹೊಸ ಬೋರ್‌ವೆಲ್ ಕೊರೆಯುವ ಮೂಲಕ ಮಗುವಿನ ರಕ್ಷಣಾ ಕಾರ್ಯವನ್ನು ನಡೆಸುತ್ತೇವೆ, ಶೀಘ್ರವೇ ಈ ಕಾರ್ಯ ಆರಂಭವಾಗಲಿದೆ. ಆದರೆ ಇದು ದೀರ್ಘವಾದ ರಕ್ಷಣಾ ಕಾರ್ಯ” ಎಂದು ಮಾಹಿತಿ ನೀಡಿದ್ದಾರೆ.

Advertisements


ಕಳೆದ ವರ್ಷ ಜುಲೈನಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಬಿಹಾರದಲ್ಲಿ 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿತ್ತು. ಸತತ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ರಕ್ಷಿಸಲಾಗಿತ್ತು. ಇನ್ನು ಜೂನ್‌ನಲ್ಲಿ ಇದೇ ರೀತಿಯ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದ್ದು, 300 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಮಗು ತನ್ನ ಪ್ರಾಣ ಕಳೆದುಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X