ದೆಹಲಿ | ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಬೂಟು ಕಾಲಿನಿಂದ ಒದ್ದ ಪೊಲೀಸ್; ವಿಡಿಯೋ ವೈರಲ್

Date:

Advertisements

ಶುಕ್ರವಾರದ ಪ್ರಾರ್ಥನೆಯ ಹಿನ್ನೆಲೆಯಲ್ಲಿ ಇಂದು ದೆಹಲಿಯ ಮಸೀದಿಯೊಂದರ ಬಳಿಯಲ್ಲಿರುವ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಪೊಲೀಸ್ ಅಧಿಕಾರಿಯೋರ್ವ ಬೂಟು ಕಾಲಿನಿಂದ ಒದ್ದ ಘಟನೆ ನಡೆದಿದೆ.

ಘಟನೆಯ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯು ದೆಹಲಿಯ ಇಂದರ್ಲೋಕ್ ಪ್ರದೇಶದಲ್ಲಿರುವ ಮಸೀದಿ ಸಮೀಪ ನಡೆದಿರುವುದಾಗಿ ವರದಿಯಾಗಿದೆ.

ಪೊಲೀಸ್ ಅಧಿಕಾರಿ ಸ್ಥಳಕ್ಕೆ ಬಂದಾಗ ಜನರ ಗುಂಪು ರಸ್ತೆಯಲ್ಲಿ ಬಟ್ಟೆ ಹಾಕಿ, ನಮಾಝ್ ಮಾಡುತ್ತಿದ್ದರು. ಈ ವೇಳೆ ಅವರನ್ನು ಎದ್ದೇಳಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿ ಬೂಟು ಕಾಲಿನಿಂದ ಒದ್ದಿದ್ದಾರೆ. ಇದಾದ ಕೂಡಲೇ ಅಲ್ಲಿದ್ದ ಮಂದಿ ಆಕ್ಷೇಪ ಎತ್ತಿದ್ದು, ಕಾನ್‌ಸ್ಟೆಬಲ್ ಮತ್ತು ಗುಂಪಿನ ನಡುವೆ ತೀವ್ರ ಮಾತಿನ ಚಕಮಕಿ ಕೂಡ ನಡೆದಿದೆ.

Advertisements

ಘಟನೆಯ ವಿಡಿಯೋ ವೈರಲಾಗುತ್ತಿದ್ದಂತೆಯೇ ಎಚ್ಚೆತ್ತಿರುವ ಪೊಲೀಸ್ ಅಧಿಕಾರಿಗಳು, ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಉತ್ತರ ವಿಭಾಗದ ಡಿಸಿಪಿ, “ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ. ಇಂದರ್ಲೋಕ್ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಈ ಕುರಿತು ತನಿಖೆ ಆರಂಭಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ರಸ್ತೆಯಲ್ಲಿ ಗಂಟೆಗಳಿಗಿಂತಲೂ ಹೆಚ್ಚಾಗಿ ಡಿಜೆ ಹಾಕಿ ಕುಣಿಯುವವರ ಬಗ್ಗೆ ನೋಡಿಯೂ ಕೂಡ ಕ್ರಮ ಕೈಗೊಳ್ಳಲು ಹಿಂಜರಿಯುವ ಪೊಲೀಸರು, ಮುಸ್ಲಿಮರ ಶುಕ್ರವಾರದ ಪ್ರಾರ್ಥನೆಯ ಕೆಲವು ನಿಮಿಷಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲವೇ? ಇದು ದೇಶದಲ್ಲಿ ಮುಸ್ಲಿಮರ ವಿರುದ್ಧ ಹರಡಲಾಗುತ್ತಿರುವ ದ್ವೇಷದ ಇನ್ನೊಂದು ರೂಪವಷ್ಟೇ. ಇದು ಖಂಡನೀಯ” ಎಂದು ಪೋಸ್ಟ್ ಹಾಕುತ್ತಿದ್ದಾರೆ.

ಈ ನಡುವೆ ಸಂಘಪರಿವಾರ ಹಾಗೂ ಬಲಪಂಥೀಯ ಬೆಂಬಲಿಗರು, ರಸ್ತೆಯಲ್ಲಿ ನಮಾಝ್ ಮಾಡಲು ನಿಮಗೆ ಅವಕಾಶ ಕೊಟ್ಟವರಾರು. ಪೊಲೀಸ್ ಏನು ಮಾಡಬೇಕೋ ಅದನ್ನೇ ಮಾಡಿದ್ದಾನೆ ಎಂದು ಹೇಳುವ ಮೂಲಕ ಪೊಲೀಸ್ ಸಿಬ್ಬಂದಿಯ ಪರವಾಗಿ ಪೋಸ್ಟ್ ಹಾಕುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X